ಆಹಾರ ಉಳಿದರೆ ಅನಾಥಾಶ್ರಮಕ್ಕೆ ಹಂಚಿಕೆ: ಮೈಸೂರು ಕಲ್ಯಾಣ ಮಂಟಪ ಸಂಘ ತೀರ್ಮಾನ
ಮೈಸೂರು, ಡಿಸೆಂಬರ್ 13: ಕಲ್ಯಾಣ ಮಂಟಪಗಳಲ್ಲಿ ಆಹಾರ ಉಳಿದರೆ ಅದನ್ನು ಅನಾಥಾಶ್ರಮಕ್ಕೆ ಹಂಚುವುದಾಗಿ ಮೈಸೂರು ಕಲ್ಯಾಣ ಮಂಟಪ ಸಂಘ ತೀರ್ಮಾನಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಆರ್.ಸತ್ಯನಾರಾಯಣ, ಕಲ್ಯಾಣ ಮಂಟಪಗಳಲ್ಲಿ ನಡೆಯುವ ಸಭೆ, ಸಮಾರಂಭಗಳಲ್ಲಿ ಉಳಿಯುವ ತಿಂಡಿ, ಊಟ, ಇನ್ನಿತರ ಆಹಾರ ಪದಾರ್ಥಗಳನ್ನು ಕೆಡದಂತೆ ರಕ್ಷಿಸಿ ನಿರ್ಗತಿಕರು, ಅನಾಥಾಶ್ರಮಗಳಿಗೆ ಹಂಚುವ ಕೆಲಸವನ್ನು ಮಾಡುವುದು ಸಂಘದ ಪ್ರಮುಖ ಉದ್ದೇಶ ಎಂದರು.
ನಿತ್ಯ ಕಲ್ಯಾಣಮಂಟಪಗಳಲ್ಲಿ ಆಹಾರ ಉಳಿಕೆ ಆಗಿ ಪೋಲಾಗುತ್ತಿದ್ದು, ಅದನ್ನು ಅಗತ್ಯ ಇರುವವರಿಗೆ ವಿತರಿಸುವ ಬಗ್ಗೆ ಹಾಗೂ ಆಹಾರ ಸಂರಕ್ಷಿಸಿ ವಿತರಿಸಲೆಂದು ಶೀತಲೀಕರಣ ಘಟಕವನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆದಿದೆ.

ಕೆಲವರು ಸ್ವಲ್ಪ ನೀರು ಕುಡಿಯಲು ನೀರಿನ ಬಾಟಲನ್ನು ಪಡೆದುಕೊಳ್ಳುತ್ತಾರೆ. ಪೂರ್ಣ ಖಾಲಿ ಮಾಡದೇ ನೀರು ವ್ಯರ್ಥವಾಗುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕೆಂಬ ಪಾಲಿಕೆ ಕ್ರಮಕ್ಕೆ ಕೈಜೋಡಿಸಲು ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಬಾಟಲು, ಪ್ಲಾಸ್ಟಿಕ್ ಲೋಟ ಮೊದಲಾದವುಗಳ ಬಳಕೆ ನಿಷೇಧಿಸುವ ಬಗ್ಗೆಯೂ ಕ್ರಮ ವಹಿಸಲಾಗುತ್ತಿದೆ.
ಕಲ್ಯಾಣಮಂಟಪಗಳ ಸುತ್ತಮುತ್ತ ನೈರ್ಮಲ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸುವಂತೆ ಸಂಘದ ಎಲ್ಲಾ ಕಲ್ಯಾಣಮಂಟಪಗಳ ಮಾಲೀಕರಿಗೆ ಸೂಚಿಸಲಾಗಿದೆ. ಕಲ್ಯಾಣಮಂಟಪಗಳಲ್ಲಿ ಕೆಲಸ ಮಾಡುವ ನೌಕರರಿಗೆ ಮೂಲ ಸೌಕರ್ಯ, ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಚಿಂತನೆಯಿದೆ ಎಂದು ಸತ್ಯನಾರಾಯಣ ತಿಳಿಸಿದರು.
ಮೈಸೂರು ನಗರದ ವ್ಯಾಪ್ತಿಯಲ್ಲಿರುವ ಕಲ್ಯಾಣಮಂಟಪಗಳನ್ನು ಒಂದೇ ವೇದಿಕೆಯಡಿ ತರುವ ಮತ್ತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಮೈಸೂರು ಕಲ್ಯಾಣಮಂಟಪ ಮಾಲೀಕರ ಸಂಘ ಅಸ್ವಿತ್ವಕ್ಕೆ ಬಂದಿದೆ.
ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮತ್ತು ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಅವರನ್ನು ಸಂಘದ ಗೌರವಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮೈಸೂರು ನಗರದಲ್ಲಿ ಸುಮಾರು 100 ಕಲ್ಯಾಣ ಮಂಟಪಗಳಿವೆ. ಈಗಾಗಲೇ 30 ಕಲ್ಯಾಣ ಮಂಟಪಗಳ ಮಾಲೀಕರು ಸಂಘದ ಸದಸ್ಯರಾಗಿದ್ದಾರೆ.
ಇನ್ನುಳಿದವರ ಬಳಿ ತೆರಳಿ ಸದಸ್ಯತ್ವ ಪಡೆಯುವಂತೆ ಆಹ್ವಾನ ನೀಡಲಾಗುವುದು. ಸಂಘದ ಕಾರ್ಯವ್ಯಾಪ್ತಿ ಮೈಸೂರು ನಗರದ ಕಲ್ಯಾಣ ಮಂಟಪಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಕೆ.ಆರ್.ಸತ್ಯನಾರಾಯಣ ಮಾಹಿತಿ ನೀಡಿದರು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications