ಆಹಾರ ಉಳಿದರೆ ಅನಾಥಾಶ್ರಮಕ್ಕೆ ಹಂಚಿಕೆ: ಮೈಸೂರು ಕಲ್ಯಾಣ ಮಂಟಪ ಸಂಘ ತೀರ್ಮಾನ
ಮೈಸೂರು, ಡಿಸೆಂಬರ್ 13: ಕಲ್ಯಾಣ ಮಂಟಪಗಳಲ್ಲಿ ಆಹಾರ ಉಳಿದರೆ ಅದನ್ನು ಅನಾಥಾಶ್ರಮಕ್ಕೆ ಹಂಚುವುದಾಗಿ ಮೈಸೂರು ಕಲ್ಯಾಣ ಮಂಟಪ ಸಂಘ ತೀರ್ಮಾನಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಆರ್.ಸತ್ಯನಾರಾಯಣ, ಕಲ್ಯಾಣ ಮಂಟಪಗಳಲ್ಲಿ ನಡೆಯುವ ಸಭೆ, ಸಮಾರಂಭಗಳಲ್ಲಿ ಉಳಿಯುವ ತಿಂಡಿ, ಊಟ, ಇನ್ನಿತರ ಆಹಾರ ಪದಾರ್ಥಗಳನ್ನು ಕೆಡದಂತೆ ರಕ್ಷಿಸಿ ನಿರ್ಗತಿಕರು, ಅನಾಥಾಶ್ರಮಗಳಿಗೆ ಹಂಚುವ ಕೆಲಸವನ್ನು ಮಾಡುವುದು ಸಂಘದ ಪ್ರಮುಖ ಉದ್ದೇಶ ಎಂದರು.
ನಿತ್ಯ ಕಲ್ಯಾಣಮಂಟಪಗಳಲ್ಲಿ ಆಹಾರ ಉಳಿಕೆ ಆಗಿ ಪೋಲಾಗುತ್ತಿದ್ದು, ಅದನ್ನು ಅಗತ್ಯ ಇರುವವರಿಗೆ ವಿತರಿಸುವ ಬಗ್ಗೆ ಹಾಗೂ ಆಹಾರ ಸಂರಕ್ಷಿಸಿ ವಿತರಿಸಲೆಂದು ಶೀತಲೀಕರಣ ಘಟಕವನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆದಿದೆ.

ಕೆಲವರು ಸ್ವಲ್ಪ ನೀರು ಕುಡಿಯಲು ನೀರಿನ ಬಾಟಲನ್ನು ಪಡೆದುಕೊಳ್ಳುತ್ತಾರೆ. ಪೂರ್ಣ ಖಾಲಿ ಮಾಡದೇ ನೀರು ವ್ಯರ್ಥವಾಗುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕೆಂಬ ಪಾಲಿಕೆ ಕ್ರಮಕ್ಕೆ ಕೈಜೋಡಿಸಲು ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಬಾಟಲು, ಪ್ಲಾಸ್ಟಿಕ್ ಲೋಟ ಮೊದಲಾದವುಗಳ ಬಳಕೆ ನಿಷೇಧಿಸುವ ಬಗ್ಗೆಯೂ ಕ್ರಮ ವಹಿಸಲಾಗುತ್ತಿದೆ.
ಕಲ್ಯಾಣಮಂಟಪಗಳ ಸುತ್ತಮುತ್ತ ನೈರ್ಮಲ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸುವಂತೆ ಸಂಘದ ಎಲ್ಲಾ ಕಲ್ಯಾಣಮಂಟಪಗಳ ಮಾಲೀಕರಿಗೆ ಸೂಚಿಸಲಾಗಿದೆ. ಕಲ್ಯಾಣಮಂಟಪಗಳಲ್ಲಿ ಕೆಲಸ ಮಾಡುವ ನೌಕರರಿಗೆ ಮೂಲ ಸೌಕರ್ಯ, ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಚಿಂತನೆಯಿದೆ ಎಂದು ಸತ್ಯನಾರಾಯಣ ತಿಳಿಸಿದರು.
ಮೈಸೂರು ನಗರದ ವ್ಯಾಪ್ತಿಯಲ್ಲಿರುವ ಕಲ್ಯಾಣಮಂಟಪಗಳನ್ನು ಒಂದೇ ವೇದಿಕೆಯಡಿ ತರುವ ಮತ್ತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಮೈಸೂರು ಕಲ್ಯಾಣಮಂಟಪ ಮಾಲೀಕರ ಸಂಘ ಅಸ್ವಿತ್ವಕ್ಕೆ ಬಂದಿದೆ.
ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮತ್ತು ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಅವರನ್ನು ಸಂಘದ ಗೌರವಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮೈಸೂರು ನಗರದಲ್ಲಿ ಸುಮಾರು 100 ಕಲ್ಯಾಣ ಮಂಟಪಗಳಿವೆ. ಈಗಾಗಲೇ 30 ಕಲ್ಯಾಣ ಮಂಟಪಗಳ ಮಾಲೀಕರು ಸಂಘದ ಸದಸ್ಯರಾಗಿದ್ದಾರೆ.
ಇನ್ನುಳಿದವರ ಬಳಿ ತೆರಳಿ ಸದಸ್ಯತ್ವ ಪಡೆಯುವಂತೆ ಆಹ್ವಾನ ನೀಡಲಾಗುವುದು. ಸಂಘದ ಕಾರ್ಯವ್ಯಾಪ್ತಿ ಮೈಸೂರು ನಗರದ ಕಲ್ಯಾಣ ಮಂಟಪಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಕೆ.ಆರ್.ಸತ್ಯನಾರಾಯಣ ಮಾಹಿತಿ ನೀಡಿದರು.
-
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications