ಮೈಸೂರು ಪಾಕ್ಗೆ ಜಾಗತಿಕ ಮನ್ನಣೆ: ಈ ಸಿಹಿ ತಿಂಡಿಯ ಇತಿಹಾಸ ನಿಮಗೆಷ್ಟು ಗೊತ್ತು?
ಮೈಸೂರು, ಜುಲೈ 22: ದಕ್ಷಿಣ ಭಾರತದ ಜನಪ್ರಿಯ ಸಿಹಿ ತಿನಿಸು ಮೈಸೂರು ಪಾಕ್ಗೆ ಇದೀಗ ಜಾಗತಿಕ ಮನ್ನಣೆ ದೊರೆತಿದೆ.
ಟೇಸ್ಟ್ ಅಟ್ಲಾಸ್ ಪ್ರಕಟಿಸಿರುವ ವಿಶ್ವದ ಟಾಪ್ 50 ಬೀದಿಬದಿ ಸಿಹಿ ತಿನಿಸುಗಳ ಪೈಕಿ ಮೈಸೂರ್ ಪಾಕ್ಗೆ 14ನೇ ಸ್ಥಾನ ಪಡೆದುಕೊಂಡಿದೆ.
ವಿಶ್ವದಾದ್ಯಂತ ಸಿಹಿ ತಿನಿಸು ತಿನ್ನುವ ಜನರಿಂದ ಪಡೆದ ಆನ್ಲೈನ್ ಅಭಿಪ್ರಾಯದಲ್ಲಿ ಈ ಅಂಶ ಹೊರಬಿದ್ದಿದೆ. ಇದು ಕರುನಾಡಿಗೆ ಗರಿಮೆ ಹಾಗೂ ಹೆಮ್ಮೆ ಮೂಡಿಸಿದೆ. 4.4 ರೇಟಿಂಗ್ನೊಂದಿಗೆ ಮೈಸೂರು ಅರಸರ ಕಾಲದಲ್ಲಿ ತಯಾರಾಗಿದ್ದ ಮೈಸೂರ್ ಪಾಕ್ಗೆ 14ನೇ ಸ್ಥಾನ ಸಿಕ್ಕಿದೆ. ಇನ್ನು ಕುಲ್ಫಿಗೆ 4.3 ರೇಟಿಂಗ್ನೊಂದಿಗೆ 18ನೇ ಸ್ಥಾನ ಹಾಗೂ ಕುಲ್ಫಿ ಲೂದಾಗೆ 4.1 ರೇಟಿಂಗ್ನೊಂದಿಗೆ 32ನೇ ಸ್ಥಾನ ದೊರೆತಿದೆ.

ಮೈಸೂರು ಪಾಕ್ಗೆ ಜಾಗತಿಕ ಮನ್ನಣೆ ಸಿಕ್ಕಿರುವುದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. 'ನನ್ನ ತಂದೆಯವರು ಹಾಗೂ ಮನೆಗೆ ಬರುತ್ತಿದ್ದ ಸಂಬಂಧಿಕರು ಆಗಾಗ್ಗೆ ಮೈಸೂರು ಪಾಕ್ ತಂದಾಗ ಹಂಚಿ ತಿನ್ನುತ್ತಿದ್ದ ಬಾಲ್ಯದ ನೆನಪುಗಳು ಇನ್ನೂ ಇವೆ. ಮೈಸೂರು ಅರಮನೆಯಲ್ಲಿ ಜನ್ಮತಾಳಿದ ಮೈಸೂರ್ ಪಾಕ್ ಇಂದು ಮನೆಮನೆಗಳಿಗೂ ತಲುಪುವುದರ ಹಿಂದೆ ಲಕ್ಷಾಂತರ ಬಾಣಸಿಗರ ಶ್ರಮ, ಕೌಶಲ್ಯ ಅಡಗಿದೆ. ಅವೆಲ್ಲರಿಗೂ ಇದರ ಶ್ರೇಯಸ್ಸು ಸಲ್ಲಬೇಕು,' ಎಂದು ಖುಷಿ ಹಂಚಿಕೊಂಡಿದ್ದಾರೆ.
90 ವರ್ಷಗಳ ಹಿಂದೆ ಮೈಸೂರು ಅರಸರ ಕಾಲದಲ್ಲಿ ಕಾಕಾಸುರ ಮಾದಪ್ಪ ಎಂಬುವವರು ಅರಮನೆಯ ಮುಖ್ಯ ಬಾಣಸಿಗರಾಗಿದ್ದರು. ಆಗ ಅಂದಿನ ರಾಜ ಕೃಷ್ಣರಾಜ ಒಡೆಯರ್ ಅತಿಥಿಗಳು ಬರುತ್ತಿದ್ದಾರೆ ಏನಾದರೂ ಸಿಹಿ ಖಾದ್ಯ ಮಾಡುವಂತೆ ತಿಳಿಸಿದ್ದಾರೆ. ನಂತರ ಮಾದಪ್ಪ ಅವರು ಅವಸರಲ್ಲಿ ಸಕ್ಕರೆ-ತುಪ್ಪ-ಕಡಲೆ ಹಿಟ್ಟಿನ ಮಿಶ್ರಣ ತಯಾರಿಸಿ ಹೊಸ ರೀತಿಯ ಸಿಹಿಯನ್ನು ಬಡಿಸಿದ್ದಾರೆ. ಇದು ಅರಸರಿಗೆ ಬಹಳ ಇಷ್ಟವಾಗಿ ಪ್ರಶಂಸೆ ವ್ಯಕ್ತಪಡಿದ್ದಾರೆ. ಜೊತೆಗೆ ಆ ತಿಂಡಿಗೆ 'ಮೈಸೂರ್ ಪಾಕ್' ಎಂಬ ಹೆಸರೂ ಇಟ್ಟರು.
'ಜಾಗತಿಕ ಮಟ್ಟದಲ್ಲಿ 50 ಸಿಹಿ ತಿನಿಸಿನಲ್ಲಿ ಮೈಸೂರ್ ಪಾಕ್ಗೆ 14ನೇ ಸ್ಥಾನ ಸಿಕ್ಕಿರುವುದು ಖುಷಿಯ ವಿಚಾರ. ಕಾಕಾಸುರ ಮಾದಪ್ಪ ಅವರು ಮೈಸೂರು ಅರಸರ ಬಾಣಸಿಗರಾಗಿದ್ದಾಗ ಮೈಸೂರು ಪಾಕ್ ಸೃಷ್ಟಿ ಮಾಡಿದರು. ಜಗತ್ತಿನ ಎಲ್ಲೆಡೆ ಕರುನಾಡ ಈ ಸಿಹಿ ತಿಂಡಿ ಹೆಸರುವಾಸಿಯಾಗಿದೆ. ಈ ತಿಂಡಿ ನಮ್ಮ ವಂಶಸ್ಥರಿಂದ ಬಂದಿದ್ದು ಎಂದು ಹೇಳಿಕೊಳ್ಳಲು ಹೆಮ್ಮೆ ಆಗುತ್ತದೆ,' ಎಂದು ಗುರು ಸ್ವೀಟ್ಸ್ ಮಾಲೀಕ ಶಿವಾನಂದ ಖುಷಿ ಹಂಚಿಕೊಂಡಿದ್ದಾರೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications