ನಿರಂತರ ರಂಗ ಚಟುವಟಿಕೆಯಲ್ಲಿ ಮೈಸೂರು ರಂಗಾಯಣ
ಮೈಸೂರು, ಮಾರ್ಚ್ 10: ಆಧುನಿಕ ರಂಗಭೂಮಿಯನ್ನು ಕಟ್ಟಲು ಮೈಸೂರಿನ ರಂಗಾಯಣವು ಸಕ್ರಿಯವಾಗಿ ಒಂದಲ್ಲ ಒಂದು ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕೆಲಸ ಮಾಡುತ್ತಾ ಬಂದಿದೆ ಎಂದು ರಂಗಾಯಣದ ನಿರ್ದೇಶಕ ಅಡ್ಡಾಂಡ ಕಾರ್ಯಪ್ಪ ಹೇಳಿದರು.
ರಂಗಾಯಣದ ವತಿಯಿಂದ ಶ್ರೀರಂಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಂಗಾಯಣವು ಪ್ರಧಾನ ರಂಗ ಘಟಕ, ಕಿರಿಯ ರಂಗ ಘಟಕ ಹಾಗೂ ಭಾರತೀಯ ರಂಗ ಶಿಕ್ಷಣ ಕೇಂದ್ರದಲ್ಲಿ ಚಟುವಟಿಕೆಗಳನ್ನು ನಡೆಸುತ್ತಿದ್ದು, ಕುವೆಂಪು ಅವರ ಶೂದ್ರ ತಪಸ್ವಿ ನಾಟಕವನ್ನು ಸುಳ್ಯದ ರಂಗಮನೆ ಹಾಗೂ ಮಣಿಪುರದಲ್ಲಿ ಪ್ರದರ್ಶನವನ್ನು ನೀಡಿದೆ ಎಂದರು.
ಪ್ರೇಕ್ಷಕರ ಒತ್ತಾಯದ ಮೇರೆಗೆ ಗಾಂಧಿ ವರ್ಸಸ್ ಗಾಂಧಿ ನಾಟಕವು ಮಾರ್ಚ್ 15 ರಂದು ವಾರಾಂತ್ಯದ ರಂಗಪ್ರದರ್ಶನವಾಗಿ ಪ್ರಸ್ತುತ ಪಡಿಸಲಿದ್ದು, ರಂಗಾಯಣದ ಮೈಲಿಗಲ್ಲು ಎನಿಸಿದ ನಾಟಕಗಳನ್ನು ಪ್ರದರ್ಶನವಾಗದ ಭಾಗಗಳಲ್ಲಿ ಪ್ರದರ್ಶಿಸಲು ಚಿಂತನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಕಿರಿಯ ರಂಗ ಘಟಕದ ಮೂಲಕ ಆರ್ಕೇಡಿಯಾದಲ್ಲಿ ಪಕ್, ಬೆಂದಕಾಳು ಆನ್ ಟೋಸ್ಟ್ ಮತ್ತು ರೆಕ್ಸ್ ಅವರ್ಸ್ ಡೈನೋ ಏಕಾಂಗಿ ಪಯಣ ನಾಟಕಗಳು ರಾಜ್ಯದಲ್ಲಿ ಮಾತ್ರವಲ್ಲದೇ ಇತರೆ ಬೇರೆ ಕಡೆಗಳಲ್ಲೂ 100 ಕ್ಕೂ ಹೆಚ್ಚು ಪ್ರದರ್ಶನ ಕಂಡಿದ್ದು, ಕೇರಳದ ಕೊಚ್ಚಿನ್ನಲ್ಲಿ ಮಾರ್ಚ್ 25 ರಿಂದ 27 ರವರೆಗೆ ಹಾಗೂ ಹೈದರಾಬಾದ್ನಲ್ಲಿ ಏಪ್ರಿಲ್ 3 ರಿಂದ 5 ರವರೆಗೂ ವಿಶೇಷವಾಗಿ ಪ್ರೇಕ್ಷಕರ ಮನರಂಜಿಸಲಿದೆ ಎಂದು ಹೇಳಿದರು.
ಭಾರತೀಯ ರಂಗ ಶಿಕ್ಷಣ ಕೇಂದ್ರವು ಸೈದ್ಧಾಂತಿಕವಾಗಿ ಶಿಸ್ತಿನಿಂದ ರಂಗಭೂಮಿ ತರಬೇತಿ ನೀಡುವ ಹಂಪಿ ವಿಶ್ವವಿದ್ಯಾಲಯದಿಂದ ಡಿಪೆÇ್ಲಮಾ ಕೋರ್ಸ್ನ ಶಿಕ್ಷಣ ಅವಧಿಯಲ್ಲಿ ಮೂರು ನಾಟಕಗಳು ಕಲಿಕೆಯ ಭಾಗವಾಗಿ ಸಿದ್ಧವಾಗಿತ್ತಿವೆ. ಅಲ್ಲದೇ ಈಗಾಗಲೇ ಪ್ರತಿಮಾ ನಾಟಕಂ, ಟ್ವೆಲ್ತ್ ನೈಟ್ ನಾಟಕಗಳು ಪ್ರದರ್ಶನವಾಗಿದ್ದು ಮೊದಲ ಬಾರಿಗೆ ವಾರಾಂತ್ಯದ ನಾಟಕಗಳಾಗಿ ಮೂಡಿಬರಲಿದೆ. ಏಪ್ರಿಲ್ 8 ಮತ್ತು 9 ರಂದು 'ಆ ಊರು ಈ ಊರು' ನಾಟಕ ಪ್ರದರ್ಶಿಸಲಾಗುವುದು ಎಂದು ಮಾಹಿತಿ ನೀಡಿದರು.
ಚಿಣ್ಣರ ಮೇಳ ರಂಗ ತರಬೇತಿ ಶಿಬಿರ ಏಪ್ರಿಲ್ 11 ರಿಂದ ಪ್ರಾರಂಭವಾಗಲಿದೆ. ಇದಾದ ಬಳಿಕ ವಿಶ್ವ ರಂಗಭೂಮಿ ದಿನದ ಅಂಗವಾಗಿ ಮೈಸೂರು ರಂಗಾಯಣದ ರಂಗಸಪ್ತಾಹವು ಏಳು ದಿನಗಳ ಕಾಲ ನಡೆಯಲಿದೆ ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಕಾರದಲ್ಲಿ ಜನ ಮನ್ನಣೆ ಗಳಿಸಿದ 'ಪಾಪು ಗಾಂಧಿ-ಗಾಂಧಿ ಬಾಪು' ಈವರೆಗೆ 150 ಪ್ರದರ್ಶನ ಕಂಡಿದ್ದು, ಅಕ್ಟೋಬರ್ 2 ರವರೆಗೆ ಮುಂದುವರೆಸಲಿದ್ದೇವೆ ಎಂದು ತಿಳಿಸಿದರು. ಹವ್ಯಾಸಿ ರಂಗಕರ್ಮಿಗಳನ್ನು ಉತ್ತೇಜಿಸಲು ಮೈಸೂರಿನ ಜಿಪಿಐಇಆರ್ ತಂಡದಿಂದ ಶ್ರೀ ಮಂಟೇಸ್ವಾಮಿ ಕಥಾಪ್ರಸಂಗ ಮತ್ತು ಪರಿವರ್ತನ ತಂಡದಿಂದ ಬೆಟ್ಟದ ಜೀವ ನಾಟಕಗಳು ಪ್ರೇಕ್ಷಕರನ್ನು ರಂಜಿಸಿರುವುದಾಗಿ ಹೇಳಿದರು. ಸಭೆಯಲ್ಲಿ ರಂಗಾಯಣದ ಉಪನಿರ್ದೇಕರಾದ ಮಲ್ಲಿಕಾರ್ಜುನ ಸ್ವಾಮಿ, ಭಾರತೀಯ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾದ ಪ್ರಕಾಶ್ ಗರುಡ ಉಪಸ್ಥಿತಿಯಲ್ಲಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications