ಸುಬ್ರಹ್ಮಣ್ಯ ಜಾತ್ರೆ ಹಿನ್ನೆಲೆ: ಬೆಂಗಳೂರು – ಮೈಸೂರು ರಸ್ತೆ ಬಂದ್
ಮೈಸೂರು, ಡಿಸೆಂಬರ್ 12 : ಷಷ್ಠಿ ಹಬ್ಬದ ಪ್ರಯುಕ್ತ ಡಿಸೆಂಬರ್ 13 ರಂದು ಗುರುವಾರ ಮೈಸೂರು - ಬೆಂಗಳೂರು ರಸ್ತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಹೀಗಾಗಿ ಆ ರಸ್ತೆಯ ಸಂಚಾರ ಬಂದ್ ಮಾಡಲಾಗಿದೆ.
ಇಂದು ರಾತ್ರಿ 12 ರಿಂದ ನಾಳೆ ರಾತ್ರಿ 12 ರವರೆಗೆ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.
ಮೈಸೂರಿನಿಂದ ಬೆಂಗಳೂರು ರಸ್ತೆಯ ಮೂಲಕ ಸಿದ್ದಲಿಂಗಪುರ ಗ್ರಾಮದ ಬಳಿ ಶ್ರೀಸುಬ್ರಹ್ಮಣ್ಣೆಶ್ವರಸ್ವಾಮಿ ದೇವಸ್ಥಾನದ ನಂತರದ ಹೊರ ಊರುಗಳಿಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳು ಬೆಂಗಳೂರು ರಸ್ತೆ-ರಿಂಗ್ ರಸ್ತೆ ಜಂಕ್ಷನ್ ನಲ್ಲಿ ಪಶ್ಚಿಮಕ್ಕೆ ರಿಂಗ್ ರಸ್ತೆಯ ಮೂಲಕ ಸಾಗಿರಾಯಲ್- ಇನ್ ಜಂಕ್ಷನ್ ಬಳಿ ಉತ್ತರಕ್ಕೆ ತಿರುಗಿ ಮೈಸೂರು-ಕೆ.ಆರ್.ಎಸ್. ರಸ್ತೆಯಲ್ಲಿ ಚಲಿಸಿ ಪಂಪ್ ಹೌಸ್ ಮೂಲಕ ಬೆಂಗಳೂರು ರಸ್ತೆಯನ್ನು ಸೇರುವುದು.

ಮೈಸೂರಿನಿಂದ ಬೆಂಗಳೂರು ರಸ್ತೆಯ ಮೂಲಕ ಬೆಂಗಳೂರಿಗೆ ಸಂಚರಿಸುವ ಕೆಎಸ್ ಆರ್ಟಿಸಿ ಸಂಸ್ಥೆಯ ಬಸ್ಸುಗಳು ಗ್ರಾಮಾಂತರ ಬಸ್ ನಿಲ್ದಾಣದಿಂದ ಮಲೆ ಮಹದೇಶ್ವರ ರಸ್ತೆಯ ಮೂಲಕ ಬನ್ನೂರು ರಸ್ತೆ ಮೂಲಕ ಸಾಗಿ ಬೆಂಗಳೂರು ಸೇರಲಿವೆ.
ಶ್ರೀ ಸುಬ್ರಹ್ಮಣ್ಣೆಶ್ವರಸ್ವಾಮಿ ಷಷ್ಠಿ ಜಾತ್ರೆ ಸಂದರ್ಭದಲ್ಲಿಮೈಸೂರು-ಬೆಂಗಳೂರು ರಸ್ತೆಯಲ್ಲಿ ಬೆಂಗಳೂರಿಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧಿಸಿ ಬದಲಿ ಮಾರ್ಗದಲ್ಲಿಸಂಚರಿಸಲು ಕ್ರಮ ಕೈಗೊಂಡು ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಬಳಿಯಲ್ಲಿನ ಶ್ರೀಸುಬ್ರಹ್ಮಣ್ಯೇಶ್ವರಸ್ವಾಮಿ ದೇವಸ್ಥಾನದಲ್ಲಿ ಷಷ್ಠಿಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಈ ಭಾಗದ ರಸ್ತೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ವಾಹನಸಂಚಾರದ ಮೇಲೆ ನಿರ್ಬಂಧ ವಿಧಿಸಿದೆ.
ವಾಹನ ಸಂಚಾರವನ್ನುನಿಯಂತ್ರಿಸಿ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಕ್ರಮಕೈಗೊಳ್ಳಲು ಮೈಸೂರು ನಗರ ಪೊಲೀಸ್ ಆಯುಕ್ತಡಾ,ಸುಬ್ರಹ್ಮಣ್ಯೇಶ್ವರರಾವ್ ಸೂಚನೆ ನೀಡಿದ್ದಾರೆ.
ಮೈಸೂರು-ಬೆಂಗಳೂರು ಜೋಡಿ ರಸ್ತೆಯ ಪಶ್ಚಿಮಾರ್ಧ ಭಾಗದ ರಸ್ತೆಯಲ್ಲಿ ಮೈಸೂರಿನಿಂದ ಸಿದ್ದಲಿಂಗಪುರ ಗ್ರಾಮದ ನಂತರ ಬೆಂಗಳೂರು ರಸ್ತೆ ಕಡೆಗೆ ಸಾಗುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications