ಸುಬ್ರಹ್ಮಣ್ಯ ಜಾತ್ರೆ ಹಿನ್ನೆಲೆ: ಬೆಂಗಳೂರು – ಮೈಸೂರು ರಸ್ತೆ ಬಂದ್
ಮೈಸೂರು, ಡಿಸೆಂಬರ್ 12 : ಷಷ್ಠಿ ಹಬ್ಬದ ಪ್ರಯುಕ್ತ ಡಿಸೆಂಬರ್ 13 ರಂದು ಗುರುವಾರ ಮೈಸೂರು - ಬೆಂಗಳೂರು ರಸ್ತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಹೀಗಾಗಿ ಆ ರಸ್ತೆಯ ಸಂಚಾರ ಬಂದ್ ಮಾಡಲಾಗಿದೆ.
ಇಂದು ರಾತ್ರಿ 12 ರಿಂದ ನಾಳೆ ರಾತ್ರಿ 12 ರವರೆಗೆ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.
ಮೈಸೂರಿನಿಂದ ಬೆಂಗಳೂರು ರಸ್ತೆಯ ಮೂಲಕ ಸಿದ್ದಲಿಂಗಪುರ ಗ್ರಾಮದ ಬಳಿ ಶ್ರೀಸುಬ್ರಹ್ಮಣ್ಣೆಶ್ವರಸ್ವಾಮಿ ದೇವಸ್ಥಾನದ ನಂತರದ ಹೊರ ಊರುಗಳಿಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳು ಬೆಂಗಳೂರು ರಸ್ತೆ-ರಿಂಗ್ ರಸ್ತೆ ಜಂಕ್ಷನ್ ನಲ್ಲಿ ಪಶ್ಚಿಮಕ್ಕೆ ರಿಂಗ್ ರಸ್ತೆಯ ಮೂಲಕ ಸಾಗಿರಾಯಲ್- ಇನ್ ಜಂಕ್ಷನ್ ಬಳಿ ಉತ್ತರಕ್ಕೆ ತಿರುಗಿ ಮೈಸೂರು-ಕೆ.ಆರ್.ಎಸ್. ರಸ್ತೆಯಲ್ಲಿ ಚಲಿಸಿ ಪಂಪ್ ಹೌಸ್ ಮೂಲಕ ಬೆಂಗಳೂರು ರಸ್ತೆಯನ್ನು ಸೇರುವುದು.

ಮೈಸೂರಿನಿಂದ ಬೆಂಗಳೂರು ರಸ್ತೆಯ ಮೂಲಕ ಬೆಂಗಳೂರಿಗೆ ಸಂಚರಿಸುವ ಕೆಎಸ್ ಆರ್ಟಿಸಿ ಸಂಸ್ಥೆಯ ಬಸ್ಸುಗಳು ಗ್ರಾಮಾಂತರ ಬಸ್ ನಿಲ್ದಾಣದಿಂದ ಮಲೆ ಮಹದೇಶ್ವರ ರಸ್ತೆಯ ಮೂಲಕ ಬನ್ನೂರು ರಸ್ತೆ ಮೂಲಕ ಸಾಗಿ ಬೆಂಗಳೂರು ಸೇರಲಿವೆ.
ಶ್ರೀ ಸುಬ್ರಹ್ಮಣ್ಣೆಶ್ವರಸ್ವಾಮಿ ಷಷ್ಠಿ ಜಾತ್ರೆ ಸಂದರ್ಭದಲ್ಲಿಮೈಸೂರು-ಬೆಂಗಳೂರು ರಸ್ತೆಯಲ್ಲಿ ಬೆಂಗಳೂರಿಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧಿಸಿ ಬದಲಿ ಮಾರ್ಗದಲ್ಲಿಸಂಚರಿಸಲು ಕ್ರಮ ಕೈಗೊಂಡು ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಬಳಿಯಲ್ಲಿನ ಶ್ರೀಸುಬ್ರಹ್ಮಣ್ಯೇಶ್ವರಸ್ವಾಮಿ ದೇವಸ್ಥಾನದಲ್ಲಿ ಷಷ್ಠಿಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಈ ಭಾಗದ ರಸ್ತೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ವಾಹನಸಂಚಾರದ ಮೇಲೆ ನಿರ್ಬಂಧ ವಿಧಿಸಿದೆ.
ವಾಹನ ಸಂಚಾರವನ್ನುನಿಯಂತ್ರಿಸಿ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಕ್ರಮಕೈಗೊಳ್ಳಲು ಮೈಸೂರು ನಗರ ಪೊಲೀಸ್ ಆಯುಕ್ತಡಾ,ಸುಬ್ರಹ್ಮಣ್ಯೇಶ್ವರರಾವ್ ಸೂಚನೆ ನೀಡಿದ್ದಾರೆ.
ಮೈಸೂರು-ಬೆಂಗಳೂರು ಜೋಡಿ ರಸ್ತೆಯ ಪಶ್ಚಿಮಾರ್ಧ ಭಾಗದ ರಸ್ತೆಯಲ್ಲಿ ಮೈಸೂರಿನಿಂದ ಸಿದ್ದಲಿಂಗಪುರ ಗ್ರಾಮದ ನಂತರ ಬೆಂಗಳೂರು ರಸ್ತೆ ಕಡೆಗೆ ಸಾಗುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications