ಹೊಸ ವರ್ಷಾಚರಣೆ ಹಿನ್ನೆಲೆ ಮೈಸೂರಿನ ದೇವಸ್ಥಾನದಲ್ಲಿ 2 ಲಕ್ಷ ಲಡ್ಡು ವಿತರಣೆ
ಮೈಸೂರು, ಜನವರಿ 1: ಹೊಸ ವರ್ಷಾಚರಣೆಯ ಪ್ರಯುಕ್ತ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬೆಳಗಿನ ಜಾವ 4 ರಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ್ದು, ದೇವಸ್ಥಾನಕ್ಕೆ ಭೇಟಿ ನೀಡಿದ ಸಾವಿರಾರು ಮಂದಿಗೆ ಲಡ್ಡು ಮತ್ತು ಪುಳಿಯೊಗರೆ ವಿತರಿಸಲಾಯಿತು.
ಹೊಸ ವರ್ಷಾರಣೆ ಸಂಬಂಧ ಕಳೆದ ಹಲವಾರು ವರ್ಷಗಳಿಂದ ತಪ್ಪದೇ ಲಡ್ಡು ಪ್ರಸಾದ ವಿತರಣೆಯ ಕಾರ್ಯವನ್ನು ಭಾಷ್ಯಂ ಸ್ವಾಮೀಜಿ ನೆರವೇರಿಸಿಕೊಂಡು ಬರುತ್ತಿದ್ದು, ಈ ಬಾರಿ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡುಗಳನ್ನು ಸ್ವಾಮೀಜಿಯವರೇ ಸಾರ್ವಜನಿಕರಿಗೆ ವಿತರಿಸಿದರು.

ಮುಂಜಾನೆ 4.30ರಿಂದಲೇ ಸರತಿ ಸಾಲಿನಲ್ಲಿ ನಿಂತ ಸಾರ್ವಜನಿಕರು ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದೇವಾಲಯದ ಶೀ ಯೋಗಾನರಸಿಂಹಸ್ವಾಮಿ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿದ್ದು, ಶ್ರೀ ರಂಗಕ್ಷೇತ್ರದಿಂದ ತರಿಸಿರುವ ವಿಶೇಷ ಹೂಮಾಲೆ ಮತ್ತು ಸ್ವರ್ಣಪುಷ್ಪದಿಂದ ಅಲಂಕರಿಸಲಾಗಿತ್ತು.

ಹೊಸ ವರ್ಷದ ಸಂಬಂಧ ಈ ಬಾರಿ ದೇವಸ್ಥಾನಕ್ಕೆ ಬರುವವರಿಗಾಗಿ ಎರಡು ಲಕ್ಷ ಲಡ್ಡುಗಳನ್ನು ತಯಾರಿಸಲಾಗಿದೆ ಎಂದು ಹೇಳಿದ ಪ್ರೊ.ಭಾಷ್ಯಂ ಸ್ವಾಮೀಜಿ ಅವರು, ರಾತ್ರಿ 12ರವರೆಗೂ ಪ್ರಸಾದ ವಿತರಣೆ ನಡೆಯಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಉಚಿತವಾಗಿ ಲಾಡು ವಿತರಣೆ ಮಾಡಲಾಗುತ್ತಿದೆ. ಎರಡು ಲಕ್ಷ ಲಾಡುಗಳನ್ನು ತಯಾರಿಸಲಾಗಿದೆ. ದೇವಸ್ಥಾನದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications