ಮೈಸೂರು: ಟಿಪ್ಪು ಸುಲ್ತಾನ್ ಈ ಮಣ್ಣಿನ ಮಗ ಎಂದ ಹೆಚ್ ವಿಶ್ವನಾಥ್

ಮೈಸೂರು, ಏಪ್ರಿಲ್ 9: ಟಿಪ್ಪು ಸುಲ್ತಾನ್ ಈ ನಾಡಿನ ಮಣ್ಣಿನ ಮಗ. ಜಗತ್ತಿನ ಮಾನ್ಯತೆಗೆ ಒಳಗಾದ ಚಕ್ರವರ್ತಿವಾಗಿದ್ದು, ಅವರನ್ನು ಕಾಮಾಲೆ ಮತ್ತು ಮತಾಂಧತೆಯ ಪೊರೆ ಕಳಚಿ ಶುದ್ಧ ಕಣ್ಣುಗಳಿಂದ ನೋಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರಿನ ಮಾನಸಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಅಭಿರುಚಿ ಪ್ರಕಾಶನ, ಭಾರತೀಯ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ನಡೆದ ಪ್ರೊ.ಪಿ.ವಿ.ನಂಜರಾಜ ಅರಸ್ ಅವರ 'ಟಿಪ್ಪು ಮಾನ್ಯತೆ ಸಿಗದ ಸುಲ್ತಾನ್: ಅಂದು-ಇಂದು' ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಟಿಪ್ಪು ಸುಲ್ತಾನ್ ಯಾರಿಗೂ ತಲೆಬಾಗಲಿಲ್ಲ. ಮಂಡಿಯೂರಲಿಲ್ಲ. ಪಠ್ಯದಿಂದ ಟಿಪ್ಪು ಚರಿತ್ರೆ ತೆಗೆದ ಮಾತ್ರಕ್ಕೆ ಭಾರತೀಯರ ಹೃದಯ ಸಾಮ್ರಾಜ್ಯದಲ್ಲಿ ಇರುವ ಟಿಪ್ಪು ಸುಲ್ತಾನ್ ಮರೆಯಾಗುವನೇ? ಎಂದು ವಿಶ್ವನಾಥ್ ಪ್ರಶ್ನಿಸಿದರು. ಟಿಪ್ಪು ಸುಲ್ತಾನ್ ಮುಸ್ಲಿಂನಾಗಿ ಹುಟ್ಟಿದ ರಾಷ್ಟ್ರೀಯನಾಗಿ ಬದುಕಿ ಭಾರತಕ್ಕೆ ಗೌರವ ತಂದುಕೊಟ್ಟಿದ್ದು, ಇದನ್ನು ಸುಳ್ಳು ಎನ್ನಲಾಗುವುದಿಲ್ಲ ಎಂದು ಹೇಳಿದರು.

Mysore: Tippu Sultan is Son of This Land, Says MLC H Vishwanath

ಧರ್ಮಾಧಿಕಾರಿಗಳ ಮೌನವೂ ಅಪಾಯಕಾರಿ:
ರಾಜ್ಯದಲ್ಲಿ ಮೂರು ಪಕ್ಷಗಳು ಮತವನ್ನು ಮುಂದಿಟ್ಟುಕೊಂಡು ಮಾತಾಡುತ್ತಿವೆ. ರಾಜಕಾರಣಿಗಳ ಮಾತು, ಚರ್ಚೆ, ವಿವಾದ, ವಾಗ್ವಾದದಲ್ಲಿ ಜನಹಿತ ಇರಬೇಕು. ಧರ್ಮಾಧಿಕಾರಿ ವೌನವೂ ಅಪಾಯಕಾರಿ ಎಂದು ಹೆಚ್ ವಿಶ್ವನಾಥ್ ಎಚ್ಚರಿಕೆ ನೀಡಿದರು.

ಬೆಲೆ ಏರಿಕೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ:
ಪ್ರಸ್ತುತ ಸಮಾಜ ಕತ್ತಲೆಯಲ್ಲಿದ್ದು, ಸಾಹಿತಿಗಳು, ಚಿಂತಕರು ಬೆಳಕು ಚೆಲ್ಲಬೇಕಿದೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್ ನಾಗಮೋಹನ್‌ದಾಸ್ ಹೇಳಿದರು. ಭಾವನಾತ್ಮಕ ಸಂಗತಿಗಳಾದ ಭಗವದ್ಗೀತೆ ರಾಷ್ಟ್ರೀಯ ಗ್ರಂಥ, ಘರ್ ವಾಪಸಿ, ದನದ ಮಾಂಸ, ಲವ್ ಜಿಹಾದ್, ಹಲಾಲ್, ಅಜಾನ್, 15 ದಿನದಲ್ಲಿ ಮತ್ತೊಂದು ಮುನ್ನೆಲೆಗೆ ಬರಲಿದೆ. ಆದರೆ ಬದುಕಿಗೆ ಬೇಕಾಗಿರುವ ಅನ್ನ, ಅಕ್ಷರ, ಉದ್ಯೋಗ, ಬೆಲೆ ಏರಿಕೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದರು.
ಇನ್ನು ಇದೇ ವೇಳೆ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶಚಂದ್ರ ಗುರು, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಲೇಖಕ ಪ್ರೊ.ನಂಜರಾಜ ಅರಸ್, ಭಾರತೀಯ ಪರಿವರ್ತನ ಸಂಘ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಪ್ರಕಾಶಕ ಅಭಿರುಚಿ ಗಣೇಶ್ ಹಾಜರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+