ಕರ್ತವ್ಯ ನಿರತ ಪೊಲೀಸರ ವ್ಯಾಸಂಗಕ್ಕೆ ಮೈಸೂರು ವಿವಿ ಜೊತೆ ಒಪ್ಪಂದ
ಮೈಸೂರು, ಫೆಬ್ರವರಿ 23; ಕರ್ತವ್ಯ ನಿರತ ಪೊಲೀಸರ ಶಿಕ್ಷಣಕ್ಕೆ ಅನುಕೂಲವಾಗಲೆಂದು ಕರ್ನಾಟಕ ಪೊಲೀಸ್ ಅಕಾಡೆಮಿ (ಕೆಪಿಎ) ಹಾಗೂ ಮೈಸೂರು ವಿಶ್ವವಿದ್ಯಾಲಯದ ನಡುವೆ ಚಾರಿತ್ರಿಕವಾದ ಒಪ್ಪಂದವೊಂದು ಏರ್ಪಟ್ಟಿದೆ.
ಕ್ರಾಫರ್ಡ್ ಹಾಲ್ ಸಭಾಂಗಣದಲ್ಲಿ ಕರ್ನಾಟಕ ಪೊಲೀಸ್ ಅಕಾಡೆಮಿಯು ರಾಜ್ಯದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರಾಯೋಗಿಕ ತರಬೇತಿ ಹೊರತುಪಡಿಸಿ ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್, ಸ್ಪೆಷಲೈಸ್ಟ್ ಕೋರ್ಸ್, ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳು ಹಾಗೂ ಆನ್ಲೈನ್ ಕೋರ್ಸುಗಳನ್ನು ಶೈಕ್ಷಣಿಕ ವಿನಿಮಯದೊಂದಿಗೆ ಪ್ರಾರಂಭಿಸಲು ಒಡಂಬಡಿಕೆ ಮಾಡಿಕೊಂಡಿದೆ.
ಕೃತಕ ಬುದ್ಧಿಮತ್ತೆ, ಅಪರಾಧ ಶಾಸ್ತ್ರ, ವಿಧಿವಿಜ್ಞಾನ ಶಾಸ್ತ್ರ, ಸೈಬರ್ ಕ್ರೈಂ, ಕಂಪ್ಯೂಟರ್ ಸೈನ್ಸ್ ಸೇರಿದಂತೆ ಹಲವು ವಿಷಗಳಲ್ಲಿ ಪೊಲೀಸರು ಕೋರ್ಸ್ ಮಾಡಬಹುದು. ಅಲ್ಲದೆ, ಮೈಸೂರು ವಿವಿಯಲ್ಲಿ ಓದುತ್ತಿರುವ ಮಕ್ಕಳು ಕೆಪಿಎಗೆ ಬಂದು ಪ್ರಾಯೋಗಿಕ ತರಬೇತಿ ಬಗ್ಗೆ ಮಾಹಿತಿ ಪಡೆಯಬಹುದು.

ಇದು ಮೈಸೂರು ವಿವಿ ಹಾಗೂ ಕೆಪಿಎ ಎರಡು ಸಂಸ್ಥೆಗಳ ಬೆಳವಣಿಗೆ ದೃಷ್ಟಿಯಿಂದ ಅನುಕೂಲಕರ ವಾತಾವರಣ ನಿರ್ಮಾಣ ಮಾಡುತ್ತದೆ. ಕರ್ತವ್ಯ ನಿರ್ವಹಣೆ ಮಾಡುವ ಪೊಲೀಸ್ ಅಧಿಕಾರಿಗಳಿಗೂ ಸಹಾಯಕವಾಗಿದೆ.
ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮಾತನಾಡಿ, "ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದ ಒಂದು ಸಂಸ್ಥೆಯೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರುವುದಕ್ಕೆ ನಮಗೆ ತುಂಬಾ ಸಂತೋಷವಾಗುತ್ತಿದೆ" ಎಂದರು.
"ಪೊಲೀಸ್ ಸಿಬ್ಬಂದಿಯ ಶೈಕ್ಷಣಿಕ ಚಟುವಟಿಕೆಯನ್ನು ಗಮನದಲ್ಲಿಟ್ಟುಕೊಂಡು ಒಡಂಬಡಿಕೆ ಮಾಡಿಕೊಂಡಿರುವುದು ಸ್ವಾಗತಾರ್ಹ. ನಗರದ ಜನರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಿರುವ ಪೊಲೀಸ್ ಇಲಾಖೆಯೊಂದಿಗೆ ಮಾಡುತ್ತಿರುವ ಈ ಒಪ್ಪಂದ 10 ವರ್ಷ ಇರಲಿದೆ" ಎಂದು ಹೇಳಿದರು.
ನಿರ್ಗಮಿತ ನಿರ್ದೇಶಕ ವಿಪುಲ್ ಕುಮಾರ್ ಮಾತನಾಡಿ, "ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಪ್ರಶಿಕ್ಷಣಾರ್ಥಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಭವಿಷ್ಯದ ದೃಷ್ಟಿಯಿಂದ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಮೈಸೂರು ವಿಶ್ವ ವಿದ್ಯಾನಿಲಯವು ನಮ್ಮ ಜೊತೆ ಕೈಜೋಡಿಸುತ್ತಿರುವುದು ಶ್ಲಾಘನೀಯ" ಎಂದರು.
"ವಿವಿಧ ಕೋರ್ಸುಗಳಿಗೆ ಮಾನ್ಯತೆ ನೀಡುವುದು, ವಿಶೇಷ ಕೋರ್ಸ್ಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳುವುದು ಒಡಂಬಡಿಕೆಯ ಮುಖ್ಯ ಉದ್ದೇಶ" ಎಂದರು.
ಒಡಂಬಡಿಕೆಗೆ ಸಹಿ ಹಾಕುವ ಸಂದರ್ಭದಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ. ಆರ್. ಶಿವಪ್ಪ, ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ. ಚೇತನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
-
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ











Click it and Unblock the Notifications