ಮೈಸೂರಿನಲ್ಲಿ ಕುಸಿಯುವ ಹಂತಕ್ಕೆ ತಲುಪಿದ 25 ಪಾರಂಪರಿಕ ಕಟ್ಟಡಗಳು
ಮೈಸೂರು, ನವೆಂಬರ್, 04: ಒಂದೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆ, ಮತ್ತೊಂದೆಡೆ ಸೂಕ್ತ ನಿರ್ವಹಣೆ ಇಲ್ಲದೆ ನಗರದ ಪಾರಂಪರಿಕ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿವೆ. ಸದ್ಯ ಮೈಸೂರಿನಲ್ಲಿ 25 ಪಾರಂಪರಿಕ ಕಟ್ಟಡಗಳು ಕುಸಿಯುವ ಹಂತದಲ್ಲಿದ್ದು, ಪ್ರವಾಸಿಗರಿಗೆ ಭೀತಿ ಎದುರಾಗಿದೆ.
ಇದು ಪಾರಂಪರಿಕ ತಜ್ಞರು ಜಿಲ್ಲಾಡಳಿತ ಹಾಗೂ ಪುರಾತತ್ವ ಇಲಾಖೆ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ನೀಡಿರುವ ವರದಿ ಆಗಿದೆ. ಇತ್ತೀಚಿಗೆ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಯೋಗಾಲಯ ಕೊಠಡಿ ಕುಸಿದು ಬಿದ್ದಿತ್ತು. 15 ನಿಮಿಷ ತಡವಾಗಿದ್ದರೆ ಪ್ರಯೋಗಾಲಯಕ್ಕೆ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಗಮಿಸುತ್ತಿದ್ದರು. ವಿದ್ಯಾರ್ಥಿಗಳು ಬರುವ ಮುಂಚೆಯೇ ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿರಲಿಲ್ಲ. ಇನ್ನು 20 ದಿನದ ಹಿಂದೆ ಅರಮನೆ ತಡೆಗೋಡೆ ಕೂಡ ಕುಸಿದು ಬಿದ್ದಿತ್ತು. ಹೀಗಾಗಿ ಸದ್ಯ ಪಾರಂಪರಿಕ ತಜ್ಞರು ಕೊಟ್ಟಿರುವ ವರದಿಯಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
ಸದ್ಯ ನಗರದಲ್ಲಿ 234 ಪಾರಂಪರಿಕ ಕಟ್ಟಡಗಳು ಇವೆ. ಇದರಲ್ಲಿ 131 ಕಟ್ಟಡಗಳನ್ನು ಸರ್ಕಾರವೇ ಪಾರಂಪರಿಕ ಕಟ್ಟಡವೆಂದು ಘೋಷಣೆ ಮಾಡಿದೆ. ಇದರಲ್ಲಿ 25 ಕಟ್ಟಡಗಳು ತೀರಾ ದುಸ್ಥಿತಿಗೆ ತಲುಪಿವೆ. ಇವುಗಳು ಯಾವಾಗ ಬೇಕಾದರೂ ಕುಸಿಯಬಹುದು ಎಂದು ತಜ್ಞರು ವರದಿ ನೀಡಿದ್ದಾರೆ. ಆದರೂ ಜಿಲ್ಲಾಡಳಿವಾಗಲಿ ಅಥವಾ ಪಾರಂಪರಿಕ ಇಲಾಖೆಯಾಗಲಿ ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಲ್ಲಿನ ಸ್ಥಳೀಯರು ಆಕ್ರೋಶವನ್ನು ವ್ಯಕ್ಯಪಡಿಸಿದ್ದಾರೆ.

234 ಪಾರಂಪರಿಕ ಕಟ್ಟಡಗಳ ಸರ್ವೆ
''ಮೈಸೂರಿನಲ್ಲಿ ಅಂದಾಜು 600ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳು ಇವೆ. ಇದರಲ್ಲಿ 234 ಕಟ್ಟಡಗಳನ್ನು ನಾವು ಸರ್ವೆ ಮೂಲಕ ಗುರುತಿಸಿದ್ದೇವೆ. ಇದರಲ್ಲಿ 131 ಕಟ್ಟಡಗಳಿಗೆ ಸರ್ಕಾರ ಪಾರಂಪರಿಕ ಕಟ್ಟಡವೆಂದು ಘೋಷಣೆ ಮಾಡಿದೆ. ಸದ್ಯ ಪಾರಂಪರಿಕ ಕಟ್ಟಡಗಳ ಉಳಿವಿಗೆ ಅನುದಾನದ ಅವಶ್ಯಕತೆ ಇದೆ. ಸರ್ಕಾರ ಕಟ್ಟಡಗಳ ಉಳಿವಿಗೆ ಬಜೆಟ್ನಲ್ಲಿ 500 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಬೇಕು. ಅಲ್ಲದೆ ತಜ್ಞರಿಂದ ನವೀಕರಣ ಮಾಡಿಸಬೇಕು,''ಎಂದು ಪಾರಂಪರಿಕ ತಜ್ಞ ಪ್ರೊ.ರಂಗರಾಜು ತಿಳಿಸಿದ್ದಾರೆ.

ದುರಸ್ತಿ ಹಂತಕ್ಕೆ ತಲುಪಿರುವ ಕಟ್ಟಡಗಳು
ಕಾಡಾ ಕಟ್ಟಡ, ದೇವರಾಜ ಮಾರುಕಟ್ಟೆ, ಹಳೆ ಕಾವಾ ಕಟ್ಟಡ, ಜಯಲಕ್ಷ್ಮಿ ವಿಲಾಸ ಅರಮನೆ, ನಗರಪಾಲಿಕೆ ಕಟ್ಟಡ, ಅಂಬಾವಿಲಾಸ ಅರಮನೆ, ದೊಡ್ಡ ಗಡಿಯಾರ, ಕೆ.ಆರ್.ಆಸ್ಪತ್ರೆ (ದೊಡ್ಡ ಆಸ್ಪತ್ರೆ), ಜಿಲ್ಲಾಧಿಕಾರಿಗಳ ಕಚೇರಿ, ಸಂಸ್ಕೃತ ಪಾಠಶಾಲೆ, ಸರ್ಕಾರಿ ಅತಿಥಿ ಗೃಹ, ಮಹಾರಾಜ ಕಾಲೇಜು, ಕುಲಪತಿಗಳ ನಿವಾಸ, ಮೈಸೂರು ಮೆಡಿಕಲ್ ಕಾಲೇಜುಗಳ ಕಟ್ಟಡಗಳು ದುರಸ್ತಿ ಹಂತಕ್ಕೆ ತಲುಪಿವೆ.

2012ರಲ್ಲಿ ಲ್ಯಾನ್ಸ್ಡೌನ್ ಬಿಲ್ಡಿಂಗ್ ಕುಸಿತ
ಮೈಸೂರಿನಲ್ಲಿ ಕಳೆದ 1 ದಶಕದಲ್ಲಿ ಹತ್ತಾರು ಪಾರಂಪರಿಕ ಕಟ್ಟಡಗಳು ಕುಸಿದು ಬಿದ್ದಿದೆ. 2012ರಲ್ಲಿ ನಗರದ ಹೃದಯಭಾಗದಲ್ಲಿದ್ದ ಲ್ಯಾನ್ಸ್ಡೌನ್ ಬಿಲ್ಡಿಂಗ್ ಕುಸಿದು, ಪ್ರಾಣ ಹಾನಿ ಸಂಭವಿಸಿತ್ತು. 2016ರಲ್ಲಿ ದೇವರಾಜ ಮಾರುಕಟ್ಟೆ ಕಟ್ಟಡದ ಒಂದು ಭಾಗ ಕುಸಿತ ಕಂಡಿತ್ತು. 2019ರಲ್ಲಿ ಸರಸ್ವತಿಪುರಂ ಅಗ್ನಿಶಾಮಕ ಠಾಣೆಯ ಕಟ್ಟಡದ ಸ್ವಾಗತ ಕಮಾನು ಕುಸಿದಿದ್ದು, ಇಂದಿಗೂ ಇದರ ದುರಸ್ತಿ ಕಾರ್ಯ ಇನ್ನು ಆಗಿಲ್ಲ. 2021ರಲ್ಲಿ ಮಾನಸಗಂಗೋತ್ರಿಯ ಜಯಲಕ್ಷ್ಮಿ ವಿಲಾಸ ಅರಮನೆ ಚಾವಣಿ ಕುಸಿತದಿತ್ತು. 2022 ಅಗ್ರಹಾರದ ವಾಣಿವಿಲಾಸ ಮಾರುಕಟ್ಟೆ ಕಟ್ಟಡದ ಚಾವಣಿ ಕುಸಿದು ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. 2022ರಲ್ಲಿ ಅರಮನೆ ತಡೆಗೋಡೆ ಹಾಗೂ ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಯೋಗಾಲಯ ಕಟ್ಟಡ ಕುಸಿದಿದ್ದು, ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದರು.

ಆತಂಕಕ್ಕೆ ಒಳಗಾದ ಕಾಲೇಜು ವಿದ್ಯಾರ್ಥಿಗಳು
ಭಾರಿ ಮಳೆ ಸುರಿದ ಪರಿಣಾಮ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ ಎಂದು ತಿಳಿದುಬಂದಿತ್ತು. ಮಹಾರಾಣಿ ಪದವಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಕುಸಿದ ಭಾಗವು ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ವಿದ್ಯಾರ್ಥಿಗಳು ಬೆಳಗ್ಗೆ 10:30ರ ವೇಳೆಗೆ ಕಾಲೇಜಿಗೆ ಬರುವರಿದ್ದರು. ಈ ವೇಳೆ ಬಿರುಕು ಮೂಡಿದ್ದನ್ನು ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲ ಡಾ.ಡಿ.ರವಿ ಅವರು ಕೊಠಡಿಗೆ ಬೀಗ ಹಾಕಿಸಿದ್ದರು. ಅಲ್ಲದೆ ಎಲೆಕ್ಟ್ರಿಕ್ ಸಂಪರ್ಕವನ್ನು ಕಡಿತಗೊಳಿಸಿ ಕಟ್ಟಡದ ಒಳಗೆ ಯಾರೂ ಪ್ರವೇಶಿಸದಂತೆ ಸೂಚನೆಯನ್ನು ನೀಡಿದ್ದರು.
ನಂತರ ಎಲ್ಲರೂ ಕಟ್ಟಡದ ಮೊದಲ ಮಹಡಿಯ ಮೆಟ್ಟಿಲುಗಳನ್ನು ಹತ್ತುತ್ತಿದ್ದಂತೆಯೇ ಪ್ರಯೋಗಾಲಯದ ಭಾಗವು ಕೂಡ ಕುಸಿದಿತ್ತು. ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರು ಭಾರಿ ಅನಾಹುತ ತಪ್ಪಿಸಿಕೊಂಡಿದ್ದರು. ಘಟನೆ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿತ್ತು. ಕುಸಿದು ಬಿದ್ದ ಕಟ್ಟಡದ ಕೆಳಗೆ ಯಾರೂ ಇಲ್ಲ ಎಂದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಖಚಿತಪಡಿಸಿಕೊಂಡಿದ್ದಾರು. ಈ ನಡುವೆ ಕಾಲೇಜಿನ ಇತರೆ ಕಟ್ಟಡಗಳು ಕೂಡ ಇದೇ ಪರಿಸ್ಥಿತಿ ತಲುಪಿದ್ದು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications