6 ತಿಂಗಳಲ್ಲಿ ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ- ಸಂಸದ ಪ್ರತಾಪ್ ಸಿಂಹ
ಮೈಸೂರು, ಜೂನ್ 3: ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಬೇಕಾದ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ. 6 ತಿಂಗಳಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸ್ತುತ ಏರ್ಪೋರ್ಟ್ 1.75 ಕಿ.ಮೀ. ರನ್ ವೇ ಹೊಂದಿದೆ. ಇದನ್ನು 2.75 ಕಿ.ಮೀ.ಗೆ ಏರಿಸಲಾಗುತ್ತಿದೆ. ಇದಕ್ಕಾಗಿ 240 ಎಕರೆ ಭೂಮಿ ಅವಶ್ಯಕತೆ ಇದೆ. 209 ಎಕರೆಯನ್ನು ಸ್ವಾಧೀನಪಡಿಸಿಕೊಳ್ಳಬೇಕಿತ್ತು. ಭೂ ಸ್ವಾಧೀನಕ್ಕೆ ಕೆಐಎಡಿಬಿ ಪ್ರೊಸೆಸಿಂಗ್ ಶುಲ್ಕ ಸೇರಿ 319 ಕೋಟಿ ರೂ. ಬೇಕಿತ್ತು. ಅದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದ್ದಾರೆ ಎಂದರು.

ಮುಂದಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು 2ನೇ ಹಂತದಲ್ಲಿ ನಮ್ಮ ಮೈಸೂರು ವಿಮಾನ ನಿಲ್ದಾಣದ ರನ್ ವೇಯನ್ನು 3.5 ಕಿ. ಮೀ. ವರೆಗೆ ವಿಸ್ತರಣೆ ಮಾಡಬೇಕೆಂದು ಕೆಎಐಡಿಬಿಯನ್ನು ಮನವಿ ಮಾಡಿಕೊಳ್ಳಲಾಗಿತ್ತು. ಅವರು ಅದಕ್ಕಾಗಿ 91 ಎಕರೆಯನ್ನು ಗುರುತು ಮಾಡಿದ್ದಾರೆ. ವಿಮಾನ ನಿಲ್ದಾಣ ಅಭಿವೃದ್ಧಿ ಪ್ರಾಧಿಕಾರದಿಂದ ಕೆಎಐಡಿಬಿಗೆ ಅಧಿಕೃತವಾಗಿ ಒಂದು ಮನವಿ ಸಲ್ಲಿಕೆಯಾಗಬೇಕಿದೆ. ಸದ್ಯದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ರಾಜ್ಯ ಸರ್ಕಾರದ ಸಹಕಾರ ಬೇಕು ಎಂದ ಸಂಸದ ಪ್ರತಾಪ್ ಸಿಂಹ
ಟರ್ಮಿನಲ್ ನಿರ್ಮಾಣದ ಬಳಿ ಬೇಕಾಗಿದ್ದ ಇನ್ನುಳಿದ 46 ಎಕರೆ ಜಮೀನನ್ನು ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಇದಕ್ಕೆ ಬೇಕಾದ ಹಣಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನೂ ಸಲ್ಲಿಸಲಾಗುತ್ತದೆ. ಅದಕ್ಕೆ ಬೇಕಾಗುವ ಅನುದಾನವನ್ನು ರಾಜ್ಯ ಸರ್ಕಾರ ನೀಡಬೇಕಿದೆ. ಅದಕ್ಕಾಗಿ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ ಆರು ತಿಂಗಳು ಬೇಕಾಗುತ್ತದೆ ಎಂದರು.
ಮೈಸೂರು-ನಂಜನಗೂಡು ನಡುವಿನ ರಸ್ತೆಯಲ್ಲಿ ಮೈಸೂರು ವಿಮಾನ ನಿಲ್ದಾಣ ರನ್ವೇ ವಿಸ್ತರಣೆಗೆ ಅಂಡರ್ ಪಾಸ್ ನಿರ್ಮಿಸುವ ಯೋಜನೆಯನ್ನು ಕೈಬಿಡಲಾಗಿದೆ. ಅದಕ್ಕೆ ಬದಲಾಗಿ ರಸ್ತೆಯನ್ನೇ ರನ್ ವೇ ಬರುವ ಜಾಗದಲ್ಲಿ ಬದಲಾವಣೆ ಮಾಡಲಾಗುವುದು. ಇದರಿಂದ ಮೈಸೂರು-ನಂಜನಗೂಡಿನ ನಡುವಿನ ಹೆದ್ದಾರಿಯು 7 ಕಿ.ಮೀ. ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.
ಇದಲ್ಲದೇ ಮೈಸೂರು-ನಂಜನಗೂಡು ನಡುವಿನ ರಸ್ತೆಯನ್ನು 6 ಲೈನ್ ಹಾಗೂ ಸರ್ವಿಸ್ ರಸ್ತೆಯಾಗಿ ಪರಿವರ್ತಿನೆ ಮಾಡಬೇಕೆಂದು ಪ್ರಸ್ತಾವ ಸಲ್ಲಿಸಲಾಗಿತ್ತು. ಅದಕ್ಕೆ ಒಪ್ಪಿಗೆ ದೊರೆತು ಡಿಪಿಆರ್ ಸಿದ್ಧವಾಗಿತ್ತು. ಆದರೆ, ಈ ರಸ್ತೆಯಲ್ಲಿ ಅಂಡರ್ ಪಾಸ್ಗೆ ಬದಲಾಗಿ ಹೆಚ್ಚುವರಿ 7 ಕಿ. ಮೀ. ರಸ್ತೆ ನಿರ್ಮಿಸಬೇಕಾಗಿರುವುದರಿಂದ ಹೊಸ ಯೋಜನೆ ಸಿದ್ಧಗೊಳಿಸಬೇಕಿದೆ. ನಾನಾ ಇಲಾಖೆಗಳ ಭೂಸ್ವಾಧೀನ, ಕೆಇಬಿ ಲೈನ್ ಶಿಫ್ಟಿಂಗ್, ನಿರಾವರಿ ಇಲಾಖೆ, ಪವರ್ಗ್ರಿಡ್ ಅನುಮತಿ ತೆಗೆದುಕೊಳ್ಳಬೇಕಿದೆ. ಇದಾದ ನಂತರ ನಿರ್ಮಾಣ ಕಾರ್ಯ ಆರಂಭವಾಗಬೇಕಿದೆ. ಇದಕ್ಕೆ ರಾಜ್ಯ ಸರ್ಕಾರದ ಸಹಕಾರ ಬೇಕಿದೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications