ಮೈಸೂರಿಗನ ಯೋಗ ಸಾಧನೆ; ಥಾಯ್ಲೆಂಡ್ ನಲ್ಲಿ ಮೊಳಗಿತು ಕನ್ನಡದ ಕಂಪು
ಮೈಸೂರು, ಜುಲೈ 13: ದೃಷ್ಟಿದೋಷ ನಿವಾರಣೆಗಾಗಿ ಯೋಗ ಪ್ರಾರಂಭಿಸಿದ ಯುವಕನೊಬ್ಬ ಇದೀಗ ಅದೇ ಯೋಗದಿಂದ ಥಾಯ್ಲೆಂಡ್ ನಲ್ಲಿ ಆರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾನೆ.
ಮೈಸೂರು ನಗರದ ಬೆಸ್ತಗೇರಿ ನಿವಾಸಿ ಹಾಗೂ ಅರಮನೆ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದ ಪರಶುರಾಮ ಅವರ ಪುತ್ರ ಪಿ. ಕುವಲಾಶ್ವ ವಿದೇಶದಲ್ಲಿ ಯೋಗ ಸಾಧನೆ ಮಾಡುವ ಮೂಲಕ ಕನ್ನಡದ ಕಂಪನ್ನು ಮೊಳಗಿಸಿದ್ದಾರೆ.

ಥಾಯ್ಲೆಂಡ್ ನಲ್ಲಿ ಜೂನ್ ತಿಂಗಳಿನಲ್ಲಿ ಎರಡು ದಿನಗಳ ಕಾಲ ನಡೆದ ವಿಶ್ವ 7ನೇ ಅಂತಾರಾಷ್ಟ್ರೀಯ ಯೋಗ ಫೆಸ್ಟಿವಲ್ ಕೂಟದಲ್ಲಿ ವಿವಿಧ ವಿಭಾಗಗಳಲ್ಲಿ ಆರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ ಕುವಲಾಶ್ವ. ಭಾರತದಿಂದ ತೆರಳಿದ್ದ 150 ಮಂದಿಯಲ್ಲಿ ಅತ್ಯಧಿಕ ಪ್ರಶಸ್ತಿ ಪಡೆದ ಗರಿಮೆ ಇವರದ್ದು.

'ದೃಷ್ಟಿದೋಷ ನಿವಾರಣೆಗಾಗಿ ಯೋಗ ಮಾಡಲು ಪ್ರಾರಂಭಿಸಿದೆ. ಇಂದು ಇದರಿಂದ ನನ್ನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇನೆ. ಥಾಯ್ಲೆಂಡ್ ನಲ್ಲೂ ಯೋಗ ಪ್ರದರ್ಶನ ಮಾಡಿದೆ. ಆರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಇದೇ ಕ್ಷೇತ್ರದಲ್ಲಿ ಮತ್ತಷ್ಟು ಸಾಧಿಸಬೇಕೆಂಬ ಹಂಬಲವಿದೆ' ಎಂದರು ಕುವಲಾಶ್ವ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications