ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮೈಸೂರು ಬ್ರಾಹ್ಮಣ ಸಂಘದಿಂದ ಪ್ರತಿಭಟನೆ

|
Google Oneindia Kannada News

ಮೈಸೂರು, ಏಪ್ರಿಲ್ 22:ಚುನಾವಣಾ ಪ್ರಚಾರ ಸಭೆಯಲ್ಲಿ ಬ್ರಾಹ್ಮಣ ಸಮಾಜದ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಅರಣ್ಯ ಸಚಿವ ಸತೀಶ್ ಜಾರಕಿ ಹೊಳಿ ವಿರುದ್ಧ ಮೈಸೂರಿನ ಜಿಲ್ಲಾ ಬ್ರಾಹ್ಮಣ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಅತ್ತ ಓಲೈಕೆ, ಇತ್ತ ಬೈಗುಳ! ಚುನಾವಣೆಯ ಅಸ್ತ್ರವಾದರೆ ಬ್ರಾಹ್ಮಣರು?ಅತ್ತ ಓಲೈಕೆ, ಇತ್ತ ಬೈಗುಳ! ಚುನಾವಣೆಯ ಅಸ್ತ್ರವಾದರೆ ಬ್ರಾಹ್ಮಣರು?

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಇದೇ ವೇಳೆ ಸಚಿವರು ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮಾತನಾಡಿ, ಏ .10 ರಂದು ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಸತೀಶ್ ಜಾರಕೀಹೊಳಿ ದೇಶದ ಸೇನೆಯಲ್ಲಿ ದಲಿತರು, ಹಿಂದುಳಿದವರು, ಮುಸ್ಲಿಮರು ಹೆಚ್ಚಾಗಿ ಪ್ರಾಣತ್ಯಾಗ ಮಾಡಿದ್ದಾರೆಯೇ ಹೊರರು ದೇಶಪಾಂಡೆ , ಕುಲಕರ್ಣಿ , ಜೋಷಿ ಸೇರಿದಂತೆ ಬ್ರಾಹ್ಮಣರು ಸೇನೆಗಾಗಿ ಜೀವ ಬಿಟ್ಟ ಇತಿಹಾಸವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Mysuru Brahmins Association members protest against satish jarkiholi

ಈ ರೀತಿ ಒಂದು ಸಮಾಜದ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುವುದು ಚುನಾವಣೆ ಆಯೋಗ ವಿಧಿಸಿರುವ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದರು.

 ಬ್ರಾಹ್ಮಣರನ್ನು ಹಿಯಾಳಿಸಿದ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಬ್ರಾಹ್ಮಣರನ್ನು ಹಿಯಾಳಿಸಿದ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Mysuru Brahmins Association members protest against satish jarkiholi

ಯಾವುದೇ ಜಾತಿಯ ವಿರುದ್ಧ ಜನಪ್ರತಿನಿಧಿಗಳು ಮಾತನಾಡುವುದು ಸರಿಯಲ್ಲ. ಸಚಿವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
English summary
Mysuru Brahmins Association members protest against satish jarkiholi. Meanwhile,they urged minister to apologize.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X