ಮೈಸೂರು-ಚಾಮರಾಜನಗರ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ
ಮೈಸೂರು, ಫೆಬ್ರವರಿ 17; ಬಹುನಿರೀಕ್ಷಿತ ಮೈಸೂರು-ಚಾಮರಾಜನಗರ ನಡುವಿನ ರೈಲು ಮಾರ್ಗದ ವಿದ್ಯುದೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. 71 ಕಿ. ಮೀ. ಕಾಮಗಾರಿ ಪೂರ್ಣಗೊಂಡರೆ ಮೆಮು ರೈಲುಗಳ ಸಂಚಾರ ಆರಂಭಿಸಲು ಸಹಾಯಕವಾಗಲಿದೆ.
ಮೈಸೂರು-ಚಾಮರಾಜನಗರ ನಡುವಿನ ರೈಲು ಮಾರ್ಗದ ವಿದ್ಯುದೀಕರಣಕ್ಕೆ ಟೆಂಟರ್ ಅಂತಿಮಗೊಂಡಿದೆ. ಈ ಯೋಜನೆಗೆ ಸುಮಾರು 18.89 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಫೆಬ್ರವರಿ 11ರಿಂದ ಮೈಸೂರು-ದಾದರ್ ರೈಲು; ವೇಳಾಪಟ್ಟಿ
ರೈಲ್ವೇ ವಿದ್ಯುದೀಕರಣ ವಿಭಾಗದ ಕಾಮಗಾರಿ ಮುಖ್ಯಸ್ಥ ಆರ್. ಎ. ಚೌಧರಿ ಈ ಕುರಿತು ಹೇಳಿಕೆ ನೀಡಿದ್ದಾರೆ. "ಫೆಬ್ರವರಿ 1ರಂದು ಮಂಡನೆ ಮಾಡಿದ ಬಜೆಟ್ನಲ್ಲಿ ಯೋಜನೆಗೆ ಅನುದಾನ ಮಂಜೂರಾಗಿದೆ. 12 ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ" ಎಂದು ಹೇಳಿದ್ದಾರೆ.
ತಾಳಗುಪ್ಪ ರೈಲು ನಿಲ್ದಾಣದಲ್ಲಿ ಪಾರ್ಸೆಲ್ ಸೇವಾ ಕೇಂದ್ರ
ಮೈಸೂರು-ಚಾಮರಾಜನಗರ ನಡುವಿನ ರೈಲು ಮಾರ್ಗ ವಿದ್ಯುದೀಕರಣವಾದರೆ ರೈಲುಗಳ ವೇಗವನ್ನು ಹೆಚ್ಚಿಸಬಹುದು ಮತ್ತು ಮೆಮು ರೈಲು ಸಂಚಾರವನ್ನು ಆರಂಭಿಸಬಹುದು. ಇದರಿಂದಾಗಿ ಉಭಯ ನಗರಗಳ ನಡುವೆ ಪ್ರತಿದಿನ ಸಂಚಾರ ನಡೆಸುವವರಿಗೆ ಅನುಕೂಲವಾಗಲಿದೆ.
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: ಎಲ್ಲ ಪ್ರಯಾಣಿಕ ರೈಲು ಸೇವೆ ಆರಂಭ
ಈ ಮಾರ್ಗದ ವಿದ್ಯುದೀಕರಣದಿಂದಾಗಿ ಕಡಕೊಳ ಬಳಿ ಸ್ಥಾಪನೆಯಾಗುತ್ತಿರುವ ಇನ್ಲ್ಯಾಂಡ್ ಕಂಟೇನರ್ ಟರ್ಮಿನಲ್ ಮತ್ತು ಮಲ್ಟಿ ಮೋಡಲ್ ಲಾಜಿಸ್ಟಿಕ್ ಪಾರ್ಕ್ಗೂ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.