ಮೈಸೂರ ಅಂದ ಕೆಡಿಸಿದ್ರೆ ಕ್ರಮ, ನಗರ ಪಾಲಿಕೆಯ ಎಚ್ಚರಿಕೆ
ಮೈಸೂರು, ಜನವರಿ.02 : ಮೈಸೂರು ನಗರದಲ್ಲಿ ಎಲ್ಲೆಂದರಲ್ಲಿ ಫ್ಲೆಕ್ಸ್ ಹಾಕುವುದು, ಫೋಸ್ಟರ್ ಅಂಟಿಸುವುದು ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ನಗರಪಾಲಿಕೆ ಮೈಸೂರು ಜನತೆಗೆ ಖಡಕ್ ಎಚ್ಚರಿಕೆ ನೀಡಿದೆ.
ಸಾಂಸ್ಕೃತಿಕ ನಗರಿ, ಅರಮನೆ ನಗರಿ, ನಿವೃತ್ತರ ಸ್ವರ್ಗ ಮೈಸೂರು ಪ್ರಥಮ ಸ್ವಚ್ಛ ನಗರ ಎಂಬ ಖ್ಯಾತಿಗೂ ಪಾತ್ರವಾಗಿದೆ. ಆದರೆ ಇದರ ಅಂದ ಕೆಡಿಸಲು ಅಲ್ಲಲ್ಲಿ ಫ್ಲೆಕ್ಸ್, ಹೋರ್ಡಿಂಗ್ ಕಾಣಿಸಿಕೊಳ್ಳುತ್ತಿದ್ದು ಅವುಗಳನ್ನು ತೆರವುಗೊಳಿಸಲು ಪಣತೊಟ್ಟಿರುವ ನಗರಪಾಲಿಕೆ ಅನಧಿಕೃತವಾಗಿ ಫ್ಲೆಕ್ಸ್, ಫೋಸ್ಟರ್ ಅಂಟಿಸುವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.[ನಮೋ ಸ್ವಾಗತಕ್ಕೆ ಸಿಂಗಾರಗೊಂಡ ಅರಮನೆ ನಗರಿ]

ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ದೇಶದ 476 ನಗರಗಳ ಪೈಕಿ ಮೈಸೂರು ಪ್ರಥಮ ಸ್ವಚ್ಛ ನಗರ ಎಂಬ ಖ್ಯಾತಿ ಪಡೆದಿದೆ. ಮುಂದಿನ ವರ್ಷದಲ್ಲೂ ಮೈಸೂರು ನಗರ ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಉಳಿಸಿಕೊಳ್ಳಲು ನಗರಪಾಲಿಕೆ ಈಗಿನಿಂದಲೇ ಪಣತೊಟ್ಟು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸ್ವಚ್ಛತೆಯನ್ನು ಪರಿಣಾಮಕಾರಿ ಹಾಗೂ ವೈಜ್ಞಾನಿಕವಾಗಿ ನಿರ್ವಹಿಸಲು ನೂತನ ಕ್ರಮ ಅನುಸರಿಸುತ್ತಿದೆ.[ಪುಷ್ಪಲೋಕದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ]
ಫೋಸ್ಟರ್, ಹೋರ್ಡಿಂಗ್, ಫ್ಲೆಕ್ಸ್ ಅಳವಡಿಸುವುದನ್ನು ನಿಷೇಧಿಸಿದ್ದರೂ ನಗರದ ಪ್ರಮುಖ ಸ್ಥಳಗಳಲ್ಲಿ, ಗೋಡೆಗಳ ಮೇಲೆ, ಎಲೆಕ್ಟ್ರಿಕ್ ಕಂಬಗಳ ಮೇಲೆ, ಟೆಲಿಫೋನ್ ಬಾಕ್ಸ್ ಗಳ ಮೇಲೆ ಕೆಲವು ಸಂಘ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳು ಹ್ಯಾಂಡ್ ಬಿಲ್, ಫೋಸ್ಟರ್ ಗಳನ್ನು ಅಂಟಿಸುವುದು ಮಾಮೂಲಿಯಾಗಿದೆ.
ಪಾಲಿಕೆಯಿಂದ ಸೂಚನೆಯಿದ್ದರೂ ಅದನ್ನು ಮೂಲೆಗೆ ತಳ್ಳಿ ಭಿತ್ತಿಪತ್ರ ಅಂಟಿಸಿದ VETA, LINUX Academy, UPS Battery Laptop Sales & Service, MIT Trust, Global Education, Mysore ಮುಂತಾದ ಸಂಸ್ಥೆಗಳ ವಿರುದ್ಧ The Karnataka Open Places (Prevention of Disfigurement) Act-1981ರ ಪ್ರಕಾರ ಪೊಲೀಸ್ ಇಲಾಖೆಯಿಂದ ಎಫ್ಐಆರ್ ದಾಖಲಿಸಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications