ಮೈಸೂರು ಮಹಾನಗರ ಪಾಲಿಕೆ ಬಜೆಟ್; ಉಚಿತ ವೈಫೈ, ಮಲ್ಟಿಲೆವೆಲ್ ಪಾರ್ಕಿಂಗ್ ಗೆ ಒತ್ತು
ಮೈಸೂರು, ಮೇ 18; ಮೈಸೂರು ಮಹಾ ನಗರಪಾಲಿಕೆಯು ಸೋಮವಾರ 878.79 ಕೋಟಿ ರೂ. ಮೊತ್ತದ ಉಳಿತಾಯ ಬಜೆಟ್ ಮಂಡಿಸಿದೆ. ಪ್ರಾರಂಭಿಕ ಶುಲ್ಕ 260.08 ಕೋಟಿ ಹಾಗೂ ಜಮೆ 618.71 ಕೋಟಿ ಸೇರಿ 878.79 ಕೋಟಿ ರೂ. ಮೊತ್ತದ ಬಜೆಟ್ ಇದಾಗಿದೆ. ಒಟ್ಟು 871.43 ಕೋಟಿ ರೂ. ಖರ್ಚು, 7.36. ಕೋಟಿ ರೂ. ಉಳಿತಾಯ ನಿರೀಕ್ಷೆ ಮಾಡಲಾಗಿದೆ.
ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲಾ ಅವರು ಇದೇ ಮೊದಲ ಬಾರಿಗೆ ಆಯವ್ಯಯ ಮಂಡಿಸಿದ್ದಾರೆ. ಆಯವ್ಯಯ ಮಂಡನೆಗೆ ಮೊದಲು ಕೊರೊನಾಮುಕ್ತ ಮೈಸೂರಿಗೆ ಶ್ರಮಿಸಿದ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಿದರು.
ಈ ಬಾರಿ 878 ಕೋಟಿ ಮೊತ್ತದ ಬೃಹತ್ ಆಯವ್ಯಯ ಮಂಡನೆ ಮಾಡಲಾಗುತ್ತಿದ್ದು, ಪಾಲಿಕೆ ಕಳೆದ ಬಾರಿಗಿಂತ ಮೌಲ್ಯ ಹೆಚ್ಚಿಸಿಕೊಂಡಿದೆ. ಆನ್ ಲೈನ್ ಮೂಲಕ ತೆರಿಗೆ ಸಂಗ್ರಹಕ್ಕೆ ಗ್ರೀನ್ ಸಿಗ್ನಲ್ ಲಭಿಸಿದ್ದು, ಉದ್ದಿಮೆ ಪರವಾನಗಿಯಿಂದ 8 ಕೋಟಿ ಆದಾಯ ನಿರೀಕ್ಷೆಯಿದೆ. ಪಾಲಿಕೆ ಆಸ್ತಿಗಳಿಂದ 2.96 ಕೋಟಿ ನಿರೀಕ್ಷೆಯಿದೆ ಎಂದು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲ ತಿಳಿಸಿದರು.

ನಗರದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ ವೈ-ಫೈ ಸೇವೆ ಒದಗಿಸುವ ಹೊಸ ಯೋಜನೆಯನ್ನು ಮೈಸೂರು ಮಹಾನಗರ ಪಾಲಿಕೆ ಪ್ರಕಟಿಸಿದ್ದು, ಅದಕ್ಕಾಗಿ 2 ಲಕ್ಷ ರೂ. ಮೀಸಲಿಟ್ಟಿದೆ. ಅಮೆರಿಕಾದ 33 ವೆರ್ ಮಾಂಟ್ ನಗರದಲ್ಲಿ ಅಳವಡಿಸಿರುವ ರೀತಿಯಲ್ಲಿ ಮೈಸೂರು ನಗರದಲ್ಲಿ ಉಚಿತ ವೈಫೈ ಸೇವೆ ಪ್ರಾರಂಭಿಸಲು (ವೆರ್ ಮಾಂಟ್ ಡಿಜಿಟಲ್ ಎಕಾನಮಿ ಮಾದರಿ) ಆರಂಭಿಕ ಹಂತದಲ್ಲಿ 2 ಲಕ್ಷ ರೂ. ಹಣವನ್ನು ಕಾಯ್ದಿರಿಸಲಾಗಿದೆ. ಇಂಟರ್ ನೆಟ್ ವ್ಯವಸ್ಥೆ ಪಡೆಯಲಾಗದ, ಆರ್ಥಿಕವಾಗಿ ದುರ್ಬಲ ವರ್ಗಗಳು ಹಾಗೂ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಹಕಾರಿಯಾಗಲಿದೆ ಎನ್ನಲಾಗಿದೆ.
ಶರವೇಗದಲ್ಲಿ ಬೆಳೆಯುತ್ತಿರುವ ನಗರದಲ್ಲಿ ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದರಿಂದ ಪಾರ್ಕಿಂಗ್ ಸಮಸ್ಯೆ ಉಲ್ಬಣಿಸಿದೆ. ಮಲ್ಟಿಲೆವೆಲ್ ಪಾರ್ಕಿಂಗ್ ಯೋಜನೆ ಮೂಲಕ ವಾಹನ ನಿಲುಗಡೆ ಸಮಸ್ಯೆ ಬಗೆಹರಿಸಲು ಪಾಲಿಕೆ ನಿರ್ಧರಿಸಿದ್ದು, ಈ ಯೋಜನೆಗಾಗಿ 4 ಕೋಟಿ ರೂ. ಮೀಸಲಿಟ್ಟಿದೆ.
ಸೂಯೆಜ್ ಫಾರಂ ಅನ್ನು ಉದ್ಯಾನವಾಗಿ ಮಾರ್ಪಡಿಸಲು 2 ಕೋಟಿ ರೂ., ಡಿ.ದೇವರಾಜ ಅರಸ್ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂ. ಹಾಗೂ ಇನ್ನೂ ಹಲವು ಪ್ರಮುಖ ಯೋಜನೆಗಳನ್ನು ಪ್ರಕಟಿಸಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications