ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉದ್ಘಾಟಕರಿಗೆ ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜನೆ!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 1 : ವಿಶ್ವ ಪರಿಸರ ದಿನಾಚರಣೆಗೂ ಮುನ್ನ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಿದ್ದ ಮೈಸೂರು ಮಹಾನಗರ ಪಾಲಿಕೆ ಉದ್ಘಾಟಕರಿಗೇ ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜಿಸಿ ಯಡವಟ್ಟು ಮಾಡಿಕೊಂಡಿರುವ ಪ್ರಸಂಗ ಬೆಳಕಿಗೆ ಬಂದಿದೆ.

ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಯದುವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಗಮಿಸಬೇಕಿತ್ತು.

ಮೈಸೂರು ದೇಶದ 2ನೇ ಸ್ವಚ್ಛ ನಗರಮೈಸೂರು ದೇಶದ 2ನೇ ಸ್ವಚ್ಛ ನಗರ

Mysuru City Corporation made mistake that not informing chief guest about program

ಆದರೆ ಇಂದು ಬೆಳಗ್ಗೆ 8 ಗಂಟೆಯಾದ್ರು ಪ್ರಮೋದಾದೇವಿ ಅವರಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ. ಜತೆಗೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಈ ಕಾರ್ಯಕ್ರಮದ ಬಗ್ಗೆ ಮಹಾನಗರ ಪಾಲಿಕೆ ಮಾಹಿತಿ ನೀಡಿರಲಿಲ್ಲ.

Mysuru City Corporation made mistake that not informing chief guest about program

ಮಾಹಿತಿ ಕೊರತೆಯಿಂದ ಮೈಸೂರು ಪಾಲಿಕೆ ಅಧಿಕಾರಿಗಳು ಈ ರೀತಿ ಎಡವಟ್ಟು ಮಾಡಿಕೊಂಡಿದ್ದು, ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರನ್ನು ಕರೆತಂದು ಕಾಟಚಾರಕ್ಕೆ ಕಸ ಗುಡಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿಸಿದ್ದಾರೆ.

English summary
Officials of Mysuru City Corporation made mistake by not informing the chief guest Pramoda devi wodeyar about a function was supposed to be inaugurated her.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X