ಮೈಸೂರು ನಗರಸಭಾ ಸದಸ್ಯ ಮಾದೇಶ್ ಗೆ ಜೀವಾವಧಿ ಶಿಕ್ಷೆ
ಮೈಸೂರು,ಫೆಬ್ರವರಿ,26: ಎಂಟು ವರ್ಷಗಳ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣ ಕೊನೆಗೂ ಸಾಬೀತಾಗಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ನಗರಸಭಾ ಸದಸ್ಯ ಅವ್ವಾ ಮಾದೇಶ ಮತ್ತು ಸಹೋದರ ಮಂಜುನಾಥ್ ಸೇರಿದಂತೆ 10 ಮಂದಿ ಜೈಲು ಪಾಲಾಗಿದ್ದಾರೆ.
ಮೈಸೂರು ನಗರಸಭಾ ಸದಸ್ಯ ಅವ್ವಾ ಮಾದೇಶ ಮತ್ತು ಸಹೋದರ ಮಂಜುನಾಥ್ ಸೇರಿದಂತೆ 10 ಮಂದಿ 2008ರಲ್ಲಿ ಹುಣಸೂರಿನ ತೋಟದ ಮನೆಯಲ್ಲಿ ಜೋಡಿ ಕೊಲೆ ಮಾಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರು ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.[ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಭೀಕರ ಕೊಲೆ]

ಹುಣಸೂರಿನಲ್ಲಿ 2008ರಲ್ಲಿ ಜೋಡಿ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಮೈಸೂರು ನಗರಸಭೆಯ 32ನೇ ವಾರ್ಡಿನ ಸದಸ್ಯ ಮಾದೇಶ ಅಲಿಯಾಸ್ ಅವ್ವಾ ಮಾದೇಶ ಸೇರಿದಂತೆ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ನಂತರ ಅವ್ವಾ ಮಾದೇಶ ಸೇರಿದಂತೆ ಸಹಚರರು ಜಾಮೀನು ಮೇಲೆ ಹೊರಬಂದಿದ್ದರು.
ಆ ನಂತರ ನಡೆದ ಮೈಸೂರು ನಗರಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾದೇಶ ಅವರು ಗೆಲುವು ಪಡೆದು ನಗರಸಭಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.[ಮಕ್ಕಳನ್ನು ಕೊಂದು ಮೋರಿಗೆ ಶವ ಎಸೆದ ಪಾಪಿ ತಂದೆ]
ಇದೀಗ ವಿಚಾರಣೆ ಮುಗಿಸಿದ ನ್ಯಾಯಾಧೀಶ ವಿಜಯ್ ಕುಮಾರ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣ ಸಂಬಂಧ ಎರಡು ಅವಧಿಯ ಕಠಿಣ ಶಿಕ್ಷೆ(10ವರ್ಷ) ವಿಧಿಸಲಾಗಿದೆ. ಇದರೊಂದಿಗೆ ಮೊದಲ ಆರೋಪಿಗೆ 3 ಲಕ್ಷ ರೂ. ದಂಡ ಹಾಗೂ ಉಳಿದ ಆರೋಪಿಗಳಿಗೆ ತಲಾ 1 ಲಕ್ಷ ದಂಡ ವಿಧಿಸಲಾಗಿದೆ. ಈ ದಂಡದ ಹಣವನ್ನು ಹತ್ಯೆಯಾದ ಇಬ್ಬರು ಕುಟುಂಬಗಳಿಗೆ ಪರಿಹಾರವಾಗಿ ನೀಡುವಂತೆ ಸೂಚಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications