ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮಾತ್ರ ನನಗೆ ಸಮಾಧಾನ – ಬಿಎಸ್ವೈ
ಸ್ಟೀಲ್ ಬ್ರಿಡ್ಜ್ ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮಾತ್ರ ನನಗೆ ಸಮಾಧಾನ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೈಸೂರಿನಲ್ಲಿ ಹರಿಹಾಯ್ದಿದ್ದಾರೆ.
ಮೈಸೂರು, ಮಾರ್ಚ್ 2: ಸ್ಟೀಲ್ ಬ್ರಿಡ್ಜ್ ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮಾತ್ರ ನನಗೆ ಸಮಾಧಾನ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೈಸೂರಿನಲ್ಲಿ ಹರಿಹಾಯ್ದಿದ್ದಾರೆ.
ರಾಜ್ಯ ಸರಕಾರ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕೈ ಬಿಡುವ ನಿರ್ಧಾರ ಘೋಷಣೆಗೂ ಕೆಲವೇ ಗಂಟೆಗಳ ಮೊದಲು ಮೈಸೂರಿನಲ್ಲ ಮಾತನಾಡಿದ್ದ ಯಡಿಯೂರಪ್ಪ, "ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಆಗಿರುವ ಭ್ರಷ್ಟಾಚಾರಕ್ಕೆ ಸಚಿವ ಜಾರ್ಜ್ ರಾಜೀನಾಮೆ ನೀಡಲು ಸಿದ್ದರಾಗಲಿ. ಆದರೆ ನನಗೆ ಜಾರ್ಜ್ ರಾಜೀನಾಮೆಯಿಂದ ಸಮಾಧಾನವಿಲ್ಲ. ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ 65 ಕೋಟಿ ಹೋಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮಾತ್ರ ನನಗೆ ಸಮಾಧಾನ ಲಭಿಸಲಿದೆ," ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಆಗಮಿಸಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು.[ವಿವಾದಿತ ಉಕ್ಕಿನ ಮೇಲ್ಸೇತುವೆ ಯೋಜನೆ ರದ್ದು]
ಅವರು ನನ್ನ ವಿರುದ್ದದ ಯಾವುದೇ ಕೇಸ್ ರೀ ಓಪನ್ ಮಾಡಿದ್ರು ನಾನು ಜಗ್ಗಲ್ಲ, ಬಗ್ಗಲ್ಲ. ಅವರು ನನ್ನನ್ನು ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ಆದರೆ ಅವರ ಬೆದರಿಕೆಗಳಿಗೆ ನಾನು ಬಗ್ಗಲ್ಲ. ಸಿದ್ದರಾಮಯ್ಯ ಈ ದೇಶ ಕಂಡ ಅತಿ ಭ್ರಷ್ಟ ಮುಖ್ಯಮಂತ್ರಿ ಎಂದು ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ವಾಕ್ ಪ್ರಹಾರ ನಡೆಸಿದರು.

ಮುಖ್ಯಮಂತ್ರಿಗಳಿಗೆ ನನ್ನ ನೈತಿಕತೆಯ ಬಗ್ಗೆ ಪದೇ ಪದೇ ಮಾತನಾಡುತಿದ್ದರೆ ಸಮಾಧಾನ ಸಿಗಲಿದೆ ಅನ್ನುವುದಾದರೆ ಮಾತಾಡಿಕೊಳ್ಳಲಿಬಿಡಿ ಎಂದು ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಲೇವಡಿಯಾಡಿದರು.
'ನಿಮ್ಮ ಪಕ್ಷಕ್ಕೆ ಬರುವವರಿಗೆ ಟಿಕೆಟ್ ನೀಡುತ್ತೇವೆ ಅಂತ ಹೇಳಿದ್ದೀರಿ' ಎಂಬ ವದಂತಿಯಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಮ್ಮ ಪಕ್ಷಕ್ಕೆ ಬರುವ ಯಾರಿಗೂ ಟಿಕೆಟ್ ಭರವಸೆ ನೀಡಿಲ್ಲ. ನಮ್ಮಲ್ಲಿ ಸಾಕಷ್ಟು ಬಲಿಷ್ಠ ಅಭ್ಯರ್ಥಿಗಳಿದ್ದಾರೆ. 50 ಕ್ಷೇತ್ರದಲ್ಲಿ ಗೆಲ್ಲುವಂತ ಅಭ್ಯರ್ಥಿಗಳ ಅವಶ್ಯಕತೆ ಇದೆ. ಹೀಗಾಗಿ ಯಾರೇ ಪಕ್ಷದ ಸಿದ್ದಾಂತವನ್ನು ಒಪ್ಪಿ ಬಂದರೂ ಅವರಿಗೆ ಸ್ವಾಗತವಿದೆ. ಟಿಕೆಟ್ ನೀಡುವ ಕುರಿತಂತೆ ಸರ್ವೆ ನಡೆಸಿ ನಂತರ ರಾಷ್ಟ್ರಾಧ್ಯಕ್ಷರ ಮುಂದೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.[ಏನಿದು ಉಕ್ಕಿನ ಮೇಲ್ಸೇತುವೆ ಯೋಜನೆ? ಏಕೆ ವಿರೋಧ?]
'ಮಾಜಿ ಸಚಿವ ಸೋಮಣ್ಣ ಮನೆಗೆ ಭೇಟಿ' ನೀಡಿರುವ ಕುರಿತು ಕೇಳಿದಾಗ ನನ್ನ ಮತ್ತು ಸೋಮಣ್ಣ ನಡುವೆ ಇದ್ದ ಮನಸ್ತಾಪ ಸರಿಪಡಿಸುವ ಸಲುವಾಗಿಯೇ ಅವರ ಮನೆಗೆ ಹೋಗಿದ್ದೆ. ನಾವು ಮುಂದೆ ಅಧಿಕಾರಕ್ಕೆ ಬರುವ ಗುರಿ ಹೊಂದಿದ್ದೇವೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು ಹೋಗಬೇಕಿದೆ.
ನಿನ್ನೆ ಅವರ ಜೊತೆ ಮಾತನಾಡಿ ಎಲ್ಲವನ್ನು ಬಗೆ ಹರಿಸಿಕೊಂಡಿದ್ದೇವೆ. ಇನ್ನು ಮುಂದೆ ನನ್ನ ಮತ್ತು ಸೋಮಣ್ಣರ ನಡುವೆ ಯಾವುದೇ ಭಿನ್ನಾಭಿಪ್ರಾಯ ಬರುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಈ ಸಂದರ್ಭ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಎಸ್. ಎ. ರಾಮದಾಸ್ ಮತ್ತು ಬಿಜೆಪಿಯ ಹಲವು ಕಾರ್ಯಕರ್ತರು ಯಡಿಯೂರಪ್ಪ ಜೊತೆಗಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications