ಕೆಲವೇ ದಿನಗಳಲ್ಲಿ ವಿಶ್ವನಾಥ್ ಜೆಡಿಎಸ್ ಗೆ: ಚಿಕ್ಕಮಾದು
ಮೈಸೂರು, ಮೇ 15 : ಮೈಸೂರು ಕ್ಷೇತ್ರದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್ ವಿಶ್ವನಾಥ್ ಅವರು ಜೆಡಿಎಸ್ ಗೆ ಸೇರ್ಪಡೆ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲಿಯೇ ಪಕ್ಷ ಸೇರಲಿದ್ದಾರೆ ಎಂದು ಎಚ್ ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಶಾಸಕ ಚಿಕ್ಕಮಾದು, "ಜೆಡಿಎಸ್ ಸೇರ್ಪಡೆ ಬಗ್ಗೆ ಎಚ್ ವಿಶ್ವನಾಥ್ ಅವರ ಜತೆ ಮೇ 9 ರಂದು ಮೈಸೂರಿಗೆ ಭೇಟಿ ನೀಡಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಕ್ಷಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಹೇಳಿದರು['ಹಳ್ಳಿ ಹಕ್ಕಿ' ವಿಶ್ವನಾಥ್ ಜೊತೆ ಸಿದ್ದರಾಮಯ್ಯ 'ಟೂ' ಬಿಟ್ಟಿದ್ದೇಕೆ?]

ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅವರಿಗಾಗುತ್ತಿರುವ ಅಪಮಾನಗಳ ಕುರಿತು ಹಂಚಿಕೊಂಡಿದ್ದಾರೆ. ಹಾಗೂ 40 ವರ್ಷಗಳ ರಾಜಕಾರಣ ಮಾಡಿರುವ ಅವರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿರುವ ಬಗ್ಗೆ ಹೇಳಿಕೊಂಡಿದ್ದಾರೆ.
ಈ ಸಂಬಂಧ ಜೆಡಿಎಸ್ ಸೇರ್ಪಡೆಗೆ ವಿಶ್ವನಾಥ್ ಅವರು ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದು, ಇನ್ನು 15 ದಿನಗಳಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಬಹಿಷ್ಕಾರದ ಕುರಿತು ಸ್ಪಷ್ಟನೆ : ಹೆಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಗ್ರಾಮದ ನಿವಾಸಿಗಳಾದ ದೊಡ್ಡಯ್ಯ ಮತ್ತು ಪಾರ್ವತಮ್ಮ ಕುಟುಂಬಕ್ಕೆ ಗ್ರಾಮದ ಮುಖಂಡರು ಬಹಿಷ್ಕಾರ ಹಾಗೂ ದಂಡ ವಿಧಿಸಿದ್ದಾರೆ ಎಂದು ಸಂತ್ರಸ್ಥೆ ನೀಲಮ್ಮ ಮೈಸೂರಿನ ಪತ್ರಕರ್ತರ ಭವನದಲ್ಲಿ ಅಳಲು ತೋಡಿಕೊಂಡಿದ್ದರು.
ಈ ಬಗ್ಗೆ ಪ್ರತಿಕ್ರಯಿಸಿರುವ ಇಲ್ಲಿನ ಜೆಡಿಎಸ್ ಶಾಸಕ ಚಿಕ್ಕಮಾದು ಹೀಗಾಗದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಸಂತ್ರಸ್ಥೆ ನೀಲಮ್ಮ ಹೊಮ್ಮರಗಳ್ಳಿ ಗ್ರಾಮದ ಮರಿಚಿಕ್ಕಯ್ಯ, ಪುಟ್ಟಯ್ಯ, ಮಹದೇವಯ್ಯ, ಚಿಕ್ಕದೇವಯ್ಯ ಹಾಗೂ ಇತರರುಪಂಚಾಯತ್ ಸೇರಿ ನಮ್ಮ ಕುಟುಂಬದ ವಿರುದ್ಧ ಹಲವಾರು ಆರೋಪಗಳನ್ನು ಹೊರಿಸುವ ಮೂಲಕ ಗ್ರಾಮದಿಂದ ಬಹಿಷ್ಕಾರ ಹಾಕಿದರು.
ಅಷ್ಟೇ ಅಲ್ಲದೇ ಸುಮಾರು 3.50 ಲಕ್ಷ ರು. ದಂಡ ವಿಧಿಸಲಾಗಿದೆ. ಇಂದಿಗೂ ಗ್ರಾಮಸ್ಥರೊಂದಿಗೆ ಸೌಹಾರ್ದಯುತ ಜೀವನ ನಡೆಸಲು ಸಾಧ್ಯವಾಗಿಲ್ಲ,
ಈ ಕುರಿತು ಕಳೆದ ಜ.27ರಂದು ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿದೂರನ್ನು ನೀಡಲಾಗಿದ್ದು ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮವನ್ನೂ ಜರುಗಿಸಿಲ್ಲ. ಕೇವಲ ಗ್ರಾಮದ ಮುಖಂಡರಿಗೆ ಎಚ್ಚರಿಕೆಯನ್ನು ನೀಡಿ ತಟಸ್ಥರಾಗಿದ್ದಾರೆ ಎಂದು ಸಂತ್ರಸ್ಥೆ ನೀಲಮ್ಮ ದೂರಿದ್ದರು.
-
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ












Click it and Unblock the Notifications