Get Updates
Get notified of breaking news, exclusive insights, and must-see stories!

ಮೈಸೂರಿನಲ್ಲಿ ಸಿಕ್ಕ ಚಿನ್ನದ ಕುರಾನ್ ಜಮ್ಮುವಿನಲ್ಲಿ ಕಳುವಾಗಿದ್ದು?

ಮೈಸೂರು, ಆಗಸ್ಟ್ 24 : ಮೈಸೂರಿನಲ್ಲಿ ಪೊಲೀಸರು ವಶಪಡಿಸಿಕೊಂಡ ಚಿನ್ನದ ಲೇಪನವಿರುವ ಹಾಳೆಗಳ ಕುರಾನ್ ಜಮ್ಮು-ಕಾಶ್ಮೀರದ ಸಂಗ್ರಹಾಲಯದಿಂದ ಕಳುವಾಗಿದ್ದು ಎಂದು ಶಂಕಿಸಲಾಗಿದೆ. ಜಮ್ಮು-ಕಾಶ್ಮೀರದ ಪೊಲೀಸರು ಈ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲು ಶೀಘ್ರದಲ್ಲೇ ಮೈಸೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ಈ ಕುರಾನ್ ಜಮ್ಮು-ಮತ್ತು ಕಾಶ್ಮೀರದ ಶ್ರೀನಗರದ ವಸ್ತು ಸಂಗ್ರಹಾಲಯದಿಂದ 2003ರಲ್ಲಿ ಕಳುವಾಗಿದ್ದು ಎಂಬ ಶಂಕೆ ವ್ಯಕ್ತವಾಗಿದೆ. ಮಾಧ್ಯಮಗಳ ಮೂಲಕ ಮಾಹಿತಿ ತಿಳಿದ ಪ್ರತಾಪ್ ಸಿಂಗ್ ವಸ್ತುಸಂಗ್ರಹಾಲಯದ ಸಿಬ್ಬಂದಿ ಈ ಕುರಿತು ಮೈಸೂರು ಪೊಲೀಸರಿಗೆ ಈ ಮೇಲ್ ಮೂಲಕ ಮಾಹಿತಿ ರವಾನಿಸಿದ್ದಾರೆ, ಕಾಶ್ಮೀರ ಪೊಲೀಸರಿಗೂ ಮಾಹಿತಿ ಕೊಟ್ಟಿದ್ದಾರೆ. [ಖುರಾನ್ ಪಠಿಸದ ಪುತ್ರನ ಕೊಂದುಸುಟ್ಟ ಮಹಾತಾಯಿ]

quran

ಪ್ರತಾಪ್ ಸಿಂಗ್ ವಸ್ತು ಸಂಗ್ರಹಾಲಯದಿಂದ ಕುರಾನ್ ಕಳುವಾದ ಬಗ್ಗೆ ಜಮ್ಮು-ಕಾಶ್ಮೀರ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಆದರೆ, ತನಿಖೆಯಲ್ಲಿ ಈ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈಗ ಕಾಶ್ಮೀರ ಪೊಲೀಸರು ಮೈಸೂರಿಗೆ ಭೇಟಿ ನೀಡಿ ಕುರಾನ್ ಪರಿಶೀಲನೆ ನಡೆಸಲಿದ್ದಾರೆ.

5 ಕೋಟಿಗೆ ಮಾರಲು ಹೊರಟಿದ್ದರು : ಆ.10ರಂದು ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಬಳಿ ಕುರಾನ್ ಮಾರಲು ಯತ್ನಿಸುತ್ತಿದ್ದ 10 ಮಂದಿಯ ತಂಡವನ್ನು ಪೊಲೀಸರು ಬಂಧಿಸಿದ್ದರು. ಕುರಾನ್ ವಶಪಡಿಸಿಕೊಂಡ ಬಳಿಕ ಹಾಳೆಗಳ ಮೇಲೆ ಚಿನ್ನದ ಲೇಪನವಿರುವುದು ಬಹಿರಂಗಗೊಂಡಿದೆ. ಸುಮಾರು 5 ಕೋಟಿ ರೂ.ಗಳಿಗೆ ಇದನ್ನು ಮಾರಲು ಯತ್ನಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+