ಮೈಸೂರು: 32ನೇ ವಾರ್ಡ್ ಚುನಾವಣೆಗೆ ಉಮೇದುವಾರಿಕೆ ಸಲ್ಲಿಕೆ
ಮೈಸೂರು, ಜೂನ್ 21 : ಮಹಾನಗರ ಪಾಲಿಕೆಯ 32ನೇ ವಾರ್ಡ್ಗೆ ಜುಲೈ 2ರಂದು ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಬುಧವಾರ ಕಡೇ ದಿನವಾಗಿದ್ದರಿಂದ ವಿವಿಧ ಪಕ್ಷಗಳ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಹೀಗಾಗಿ, ಈ ವಾರ್ಡ್ ನ ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದೆ.
ಕಾಂಗ್ರೆಸ್ನಿಂದ ಅಚ್ಚರಿಯ ಬೆಳವಣಿಗೆಯಲ್ಲಿ ಮಾಜಿ ಮಹಾಪೌರ ಬಿ.ಕೆ.ಪ್ರಕಾಶ್ ಅವರನ್ನು ಕಣಕ್ಕಿಳಿಸಲಾಗಿದೆ. ಜಾತ್ಯಾತೀತ ಜನತಾ ದಳದಿಂದ ನಿರೀಕ್ಷಿಸಿದಂತೆಯೇ ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಎಸ್ಬಿಎಂ ಮಂಜು, ಬಿಜೆಪಿಯಿಂದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಕೆ. ಮಾದೇಶ್ ಅಭ್ಯರ್ಥಿಗಳಾಗಿದ್ದಾರೆ. ಮೂರೂ ಪಕ್ಷಗಳ ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಿದರು.

ಜೂ.14ರಂದು ಅಧಿಸೂಚನೆ ಹೊರ ಬಿದ್ದಿದ್ದು, ಜೂ. 22ರಂದು ನಾಮಪತ್ರಗಳಪರಿಶೀಲನೆ, 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಜು. 2ರಂದು ಮತದಾನ. ನಗರಪಾಲಿಕೆ 32ನೇ ವಾರ್ಡ್ ಸದಸ್ಯರಾಗಿದ್ದಸಿ.ಮಾದೇಶ್ ಮತ್ತು ಅವರ ಸೋದರ ಸೇರಿ 8 ಮಂದಿಗೆ ಹುಣಸೂರು ಜೋಡಿಕೊಲೆ ಪ್ರಕರಣದಲ್ಲಿ 2016ರ ಫೆ.26ರಂದು ಜೀವಾವಧಿ ಶಿಕ್ಷೆ ಪ್ರಕಟವಾಗಿತ್ತು. ನಂತರ ಮಾದೇಶ್ ಸದಸ್ಯತ್ವದಿಂದ ವಜಾಗೊಂಡಿದ್ದರು.

ಇನ್ನು ಬಂಡಾಯ ಅಭ್ಯರ್ಥಿಯಾಗಿ ಲಲನಾ ಧನರಾಜ್ ಪಾಲಿಕೆಯ ಕಚೇರಿಗೆ ತೆರಳಿ ಧನರಾಜ್ ಚುನಾವಣಾಧಿಕಾರಿ ವಿ.ಪ್ರಿಯದರ್ಶಿನಿ ಅವರಿಗೆ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದು, ಈ ಚುನಾವಣೆಯಲ್ಲಿ ಯಾರ ಗೆಲುವಿಗೆ ವಿಜಯದ ಮಾಲೆ ಬೀಳಲಿದೆ ಎಂಬುದನ್ನು ಕಾದುನೋಡಬೇಕಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications