ದಸರಾ ಪುಸ್ತಕ ಮಾರಾಟ ಮೇಳ, ಮಳಿಗೆ ಬುಕ್ ಮಾಡ್ಕೊಳ್ಳಿ
ಮೈಸೂರು, ಸೆ. 12: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 21 ರಿಂದ 29 ರವರೆಗೆ "ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017" ನ್ನು ಮೈಸೂರಿನಲ್ಲಿ ಏರ್ಪಡಿಸಲಾಗುವುದು.
ಮೈಸೂರು ಯುವ ಸಂಭ್ರಮಕ್ಕೆ ನಿರೂಪಕರು ಬೇಕಾಗಿದ್ದಾರೆ!
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2,000/- ಭದ್ರತಾ ಠೇವಣಿ ಡಿ.ಡಿ. ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು - ಅವರ ಹೆಸರಿನಲ್ಲಿ ಡಿ.ಡಿ. ಯನ್ನು ಸಲ್ಲಿಸಲು ಸೂಚಿಸಲಾಗಿದೆ.
ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಈ ಬಾರಿಯ ದಸರೆಯಲ್ಲಿ ಭಾಗವಹಿಸಲಿದೆ 42 ಸ್ತಬ್ದ ಚಿತ್ರಗಳು
ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ. ಯೊಂದಿಗೆ ಸೆಪ್ಟೆಂಬರ್ 18 ರಂದು ಸಂಜೆ 5.00 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು - ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ ಮೂಲಕ ಸಲ್ಲಿಸಲು ಕೋರಿದೆ.
ದಸರೆಯ ಕವಿಗೋಷ್ಠಿಯಲ್ಲಿ ಕಿವುಡರಿಗೂ, ಮಾತು ಬಾರದವರಿಗೂ ಅವಕಾಶ
ಸುಮಾರು 50 ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು - 560 002 ಸಂಪರ್ಕಿಸಬಹುದು.