ಮೈಸೂರು ದಸರಾ: ವಿಜಯ್ ಪ್ರಕಾಶ್ ಹಾಡು, ಸ್ವರ್ಗ ಧರೆಗಿಳಿಸಿದ ರಾಗಿಣಿ
ಮೈಸೂರು, ಅಕ್ಟೋಬರ್ 13: ವರ್ಣರಂಜಿತ ವಿದ್ಯುತ್ ಬೆಳಕಿನಾಟದ ಸಂಗೀತದ ಅಬ್ಬರಕ್ಕೆ ಯುವ ಮನಸ್ಸುಗಳು ಹುಚ್ಚೆದ್ದು ಕುಣಿದು ಕುಪ್ಪಳಿಸುವ ಮೂಲಕ ಸಾಂಸ್ಕೃತಿಕ ನಗರಿಯಲ್ಲಿ ಕಾರ್ಯಕಮಗಳ ಪ್ರೋತ್ಸಾಹಕ್ಕೆ ಎಂದೂ ಕೊರತೆ ಇಲ್ಲ ಎಂಬುದನ್ನು ಸಾಬೀತು ಮಾಡಿದವು.
'ಗೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೇ ರಾಜ ಕುಮಾರ..' ಎಂದು ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ್ ಹಾಡುತ್ತಿದ್ದಂತೆ, ಮಹಾರಾಜ ಕಾಲೇಜು ಮೈದಾನದ ಸುತ್ತ ಯುವಪಡೆ ಹಾಡಿಗೆ ಧ್ವನಿಗೂಡಿಸಿದರು.
ತಂತಮ್ಮ ಮೊಬೈಲ್ ಗಳ ಟಾರ್ಚ್ ಹೊತ್ತಿಸಿ ಹಾಡಿನ ಲಯಕ್ಕೆ ಕೈಮೇಲೆತ್ತಿ ತೂಗುದ್ದಿ ಹಾಡಿನ ಮಾಧುರ್ಯಕ್ಕೆ, ಮೈಸೂರು ಯುವಕರ ಸಂಗೀತ ಪ್ರೀತಿಗೆ ಸಾಕ್ಷಿಯಂತೆ ಕಂಡಿತು. ಸಂಗೀತದ ಕಿನ್ನರ ಲೋಕ ಮೈಸೂರಿನಲ್ಲಿ ನಿನ್ನೆ ತೆರೆದುಕೊಂಡಿತ್ತು.
ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾದ ವೇದಿಕೆ ಏರಿದ ವಿಜಯಪ್ರಕಾಶ್ , ಆರಂಭದಲ್ಲಿ ಅವರ ತಂದೆ ಎಲ್.ರಾಮಶೇಷು ರಚಿಸಿರುವ ಚಾಮುಂಡೇಶ್ವರಿ ಓಂ ಮಾತಾ ತಾಯಿ' ಎನ್ನುವ ಭಕ್ತಿಗೀತೆಯೊಂದಿಗೆ ಸಂಗೀತದ ರಸದೌತಣ ಆರಂಭಿಸಿದರು.

ಗೊಂಬೆ ಹೇಳುತೈತೆ ಹಾಡು ಸೂಪರ್ ಹಿಟ್
ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ' ಸಿನಿಮಾದ ಗೊಂಬೆ ಹೇಳುತೈತೆ ನೀನೇ ರಾಜಕುಮಾರ' ಹಾಡನ್ನು ಹಾಡುತ್ತಿದ್ದಂತೆ ಮಹಾರಾಜ ಕಾಲೇಜು ಮೈದಾನದಲ್ಲಿದ್ದ ಯುವಸ್ತೋಮ ಹೆಜ್ಜೆ ಹಾಕಿತು.

ಮೋಡಿ ಮಾಡಿದ ರಕ್ಷಿತ್-ರಶ್ಮಿಕಾ ಜೋಡಿ
ನಂತರ ಬೆಳಗೆದ್ದು ಯಾರ ಮುಖವಾ ನಾನು ನೋಡಿದೆ, ಎಂಬ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಹಾಡಿಗೆ ಯುವಜನಸ್ತೋಮದ ಮಧ್ಯದಿಂದ ಧ್ವನಿಗೂಡಿಸಲು ಹೇಳುತ್ತಿದ್ದಂತೆ ಸಂಭಮದಿಂದ ಧ್ವನಿಗೂಡಿಸಿದರು. ಶಿಳ್ಳೆ ಹೊಡೆಯುತ್ತ ಕುಣಿದು ಕುಪ್ಪಳಿಸಿದರು.

ಯುವಕರ ಎದೆ ಝಲ್ ಎನಿಸಿದ ರಾಗಿಣಿ ಕುಣಿತ
ಹಲವು ಚಲನಚಿತ ಗೀತೆಗಳನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಹುಟ್ಟೂರಾದ ಮೈಸೂರಿನ ಅಪಾರ ಕಾಳಜಿ ಮೆರೆದರು. ನಟಿ ರಾಗಿಣಿ ದ್ವಿವೇದಿ ಹಾಗೂ ತಂಡದವರು ತರ ತರ ಅನ್ನಿಸುತ್ತಿದೆ ನನ್ನಲಿ ಏಕೋ' ಸೇರಿದಂತೆ ಹಾಡಿದ ಕನ್ನಡ ಹಾಗೂ ಹಿಂದಿ ಗೀತೆಗಳ ಮಿಶ್ರಣಕ್ಕೆ ಸಭಿಕರು ಹೆಜ್ಜೆ ಹಾಕಿದರು.

ಸಿಎಂ, ಸುಧಾ ಮೂರ್ತಿ ಚಾಲನೆ
ಯುವದಸರಾ ಕಾರ್ಯಕಮಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಚಾಲನೆ ನೀಡಿ ಶುಭಕೋರಿದರು. ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಶಿವಶಂಕರರೆಡ್ಡಿ, ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications