ಜಂಬೂ ಸವಾರಿ ಮೆರವಣಿಗೆ: ಸ್ವಲ್ಪದರಲ್ಲೇ ನಾಡಿಗೆ ತಪ್ಪಿದ ಭಾರೀ ಕಂಟಕ
ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ವಿಜಯದಶಮಿಯ ದಿನದಂದು ತೆರೆಬಿದ್ದಿದೆ. ಸುಮಾರು ನಾಲ್ಕೂವರೆ ಕಿಲೋಮೀಟರ್ ದೂರದವರೆಗೆ ನಡೆದ ಜಂಬೂಸವಾರಿ ಮೆರವಣಿಗೆಯನ್ನು ಲಕ್ಷಲಕ್ಷ ಜನ ಕಣ್ತುಂಬಿಸಿಕೊಂಡರು.
750 ಕೆಜಿ ತೂಕದ ಚಿನ್ನದ ಅಂಬಾರಿಯ ಮೇಲೆ ನಾಡದೇವತೆ ಚಾಮುಂಡೇಶ್ವರಿಯ ಮೂರ್ತಿಯನ್ನು ಹೊತ್ತು ಅರ್ಜುನ ಆನೆ ರಾಜಗಾಂಭೀರ್ಯವಾಗಿ ಮೆರವಣಿಗೆಯುದ್ದಕ್ಕೂ ಸಾಗಿದಾಗ, ಭಕ್ತರ/ನೋಡುಗರ ಜಯಘೋಷ ಮುಗಿಲುಮುಟ್ಟಿತ್ತು.
ಕಳೆದ ಬಾರಿಯಂತೆ ಈ ಬಾರಿಯೂ ಅರ್ಜುನ ಅಂಬಾರಿಯನ್ನು ಹೊತ್ತಿದ್ದ. ಆದರೆ, ಕಳೆದ ಬಾರಿಯಷ್ಟು ಸೂಕ್ತ ಮುಂಜಾಗ್ರತಾ ಕ್ರಮವನ್ನು ಜಿಲ್ಲಾಡಳಿತ ತೆಗೆದುಕೊಂಡಿರಲಿಲ್ಲವೇ ಎನ್ನುವ ಪ್ರಶ್ನೆ ಈಗ ಉದ್ಭವಿಸಲಾರಂಭಿಸಿದೆ.
ಸಾಮಾನ್ಯವಾಗಿ, ಬಹಳ ಬಂದೋಬಸ್ತ್ ಆಗಿ ಅಂಬಾರಿಯನ್ನು ಆನೆಯ ಮೇಲೆ ಕೂರಿಸುತ್ತಾರೆ. ಆದರೆ, ಈ ಬಾರಿ ಮೆರವಣಿಗೆಯುದ್ದಕ್ಕೂ ಅಂಬಾರಿ ಒಂದು ಕಡೆ ವಾಲಿಕೊಂಡು ಸಾಗುತ್ತಿತ್ತು. ಈ ಬಗ್ಗೆ ಮೈಸೂರು ರಾಜಮಾತೆ, ಜಿಲ್ಲಾಡಳಿತವನ್ನು ಎಚ್ಚರಿಸಿದ್ದರು ಕೂಡಾ..

ಚಾಮುಂಡೇಶ್ವರಿಯನ್ನು ಹೊತ್ತ ಅಂಬಾರಿ ವಾಲಿತ್ತು
ಅಂಬಾರಿಯನ್ನು ಆನೆಯ ಮೇಲೆ ಕಟ್ಟಲು ವೃತ್ತಿಪರ ಕೆಲಸಗಾರರನ್ನೇ ಬಳಸಲಾಗುತ್ತದೆ. ಆದರೆ, ಈ ಬಾರಿ ಅಂಬಾರಿ ಮೆರವಣಿಗೆಯುದ್ದಕ್ಕೂ (ಸುಮಾರು ನಾಲ್ಕು ಕಿ.ಮೀ) ವಾಲಿಕೊಂಡು ಸಾಗಿತ್ತು ಎನ್ನುವುದು ಗಮನಿಸಬೇಕಾದ ವಿಚಾರ. ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವ ವೇಳೆಯೂ, ಚಾಮುಂಡೇಶ್ವರಿಯನ್ನು ಹೊತ್ತ ಅಂಬಾರಿ ವಾಲಿಕೊಂಡಿತ್ತು.

ರಾಜಮಾತೆ ಪ್ರಮೋದಾ ದೇವಿ
ಅಂಬಾರಿ ಒಂದು ಕಡೆ ವಾಲಿದೆ ಎಂದು ರಾಜಮಾತೆ ಪ್ರಮೋದಾ ದೇವಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಸಿದ್ದರು. ಅಂಬಾರಿ ಕಟ್ಟುವ ಆರಂಭದಲ್ಲೇ ಎಡಕ್ಕೆ ವಾಲಿಕೊಂಡಿದೆ ಎಂದು ರಾಜಮಾತೆ ಹೇಳಿದ್ದರು. ಆದರೆ, ಆ ವೇಳೆಗೆ ಅಂಬಾರಿ ಕಟ್ಟುವ ಕೆಲಸ ಪೂರ್ಣಗೊಂಡಿದ್ದರಿಂದ, ಹಾಗೆಯೇ ಮೆರವಣಿಗೆಯಲ್ಲಿ ಹಗ್ಗದ ಸಹಾಯದಿಂದ ಸಾಗಲಾಯಿತು. (ಚಿತ್ರಕೃಪೆ: ನಮ್ಮ ಮೈಸೂರು ಟ್ವಿಟ್ಟರ್)

ಹಗ್ಗದಲ್ಲಿ ಬ್ಯಾಲನ್ಸ್ ಮಾಡಿಕೊಂಡು ಸಾಗಲಾಯಿತು
ಮೆರವಣಿಗೆಯುದ್ದಕ್ಕೂ ಅಂಬಾರಿಯನ್ನು ಹಗ್ಗದಲ್ಲಿ ಬ್ಯಾಲನ್ಸ್ ಮಾಡಿಕೊಂಡೇ ಸಾಗಲಾಯಿತು. ಅಂಬಾರಿ ವಾಲಿಕೊಂಡಿರುವುದು ಅತ್ಯಂತ ಸ್ಪಷ್ಟವಾಗಿ ಗೋಚರವಾಗುತ್ತಿತ್ತು. ಆದರೆ, ನಿಗದಿತ ಸಮಯದಲ್ಲಿ ಮುಖ್ಯಮಂತ್ರಿಗಳಿಂದ ಪುಷ್ಪಾರ್ಚನೆ ಆಗಬೇಕಾಗಿದ್ದರಿಂದ, ಹಗ್ಗದ ಸಪೋರ್ಟಿನಿಂದ ಅಂಬಾರಿಯನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಲಾಯಿತು.

ಜಂಬೂ ಸವಾರಿ ಮೆರವಣಿಗೆ
ಜಂಬೂ ಸವಾರಿ ಮೆರವಣಿಗೆ ಕೆ ಆರ್ ಸರ್ಕಲ್ ಬಳಿ ಬರುವಾಗ, ಅಂಬಾರಿ ಹೊತ್ತ ಅರ್ಜುನನ ಪಕ್ಕದಲ್ಲಿ ಬರುತ್ತಿದ್ದ ಆನೆಯಲ್ಲಿ ಕೂತಿದ್ದ ಮಾವುತ, ಅಂಬಾರಿ ಸಪೋರ್ಟಿಗೆ ಕಟ್ಟಿದ್ದ ಹಗ್ಗವನ್ನು ಬಿಗಿಯಾಗಿ ಹಿಡಿದು ಬನ್ನಿಮಂಟಪದವರೆಗೂ ಯಶಸ್ವಿಯಾಗಿ ಬರಲು ಸಹಕರಿಸಿದ್ದ. ಇದರಿಂದ ಅಂಬಾರಿ ಇನ್ನಷ್ಟು ವಾಲಲಿಲ್ಲ.

ಅಂಬಾರಿ ಎಡಕ್ಕೆ ವಾಲಿದ್ದು ನಾಡಿಗೆ ಕಂಟಕವೋ?
ಅಂಬಾರಿ ಎಡಕ್ಕೆ ವಾಲಿದ್ದು ನಾಡಿಗೆ ಕಂಟಕವೋ ಎನ್ನುವ ಚರ್ಚೆ ಆರಂಭವಾಗಿದೆ. ಹಗ್ಗದ ಸಹಾಯದಿಂದ ಅಂಬಾರಿಯನ್ನು ಮೆರವಣಿಗೆಯಲ್ಲಿ ಅರ್ಜುನ ಹೊತ್ತು ತಂದಿದ್ದದ್ದು ದೊಡ್ಡ ರಿಸ್ಕ್ ಎಂದು ಹೇಳಲಾಗುತ್ತಿದೆ. ಯಾವುದೇ ತೊಂದರೆಯಿಲ್ಲದೇ, ಜಂಬೂ ಸವಾರಿ ಮೆರವಣಿಗೆ ಮುಗಿದಿದ್ದರಿಂದ, ಭಾರೀ ಗಂಢಾಂತರವೊಂದು ತಪ್ಪಿದಂತಾಗಿದೆ.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications