ಮೈಸೂರು ದಸರಾ: ಅರಮನೆಗೆ ಆಗಮಿಸಿದ ಗಜಪಡೆಗೆ ಸಂಭ್ರಮದ ಸ್ವಾಗತ!
ಮೈಸೂರು, ಸೆ. 02: ಕೊರೊನಾ ಸಂಕಷ್ಟದ ಮಧ್ಯೆ ದಸರಾ ಆಚರಣೆಗಳು ಶುರುವಾಗಿವೆ. ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್ ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಮೈಸೂರು ದಸರಾ ಆಚರಣೆಯಲ್ಲಿ ಜಾರಿಗೆ ತರಲಾಗಿದೆ. ಅರಮನೆಯ ಪೂರ್ವದಿಕ್ಕಿನ ಜಯಮಾರ್ತಾಂಡ ಮಹಾದ್ವಾರದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಸಂಪ್ರದಾಯಿಕ ಚಾಲನೆ ನೀಡಲಾಯಿತು.
ಬಳಿಕ ಪೊಲೀಸ್ ಇಲಾಖೆ ವತಿಯಿಂದ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳಿಗೆ ಗಾರ್ಡ್ ಆಫ್ ಆನರ್ ಸಲ್ಲಿಸಲಾಯಿತು. ಅಲ್ಲಿಂದ ಮಧ್ಯಾಹ್ನ 12.45 ರ ಸುಮಾರಿಗೆ ನಾದಸ್ವರ ಹಾಗೂ ಪೂರ್ಣಕುಂಭದ ಮೂಲಕ ಅರಮನೆಯ ಬಾಗಿಲಿಗೆ ಗಜಪಡೆಗಳನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ಅಲ್ಲಿ ಗಜಪಡೆಗಳಿಗೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಪುಷ್ಪನಮನ ಸಲ್ಲಿಸಿದರು.
ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕನಿಷ್ಟ ಸಂಖ್ಯೆಯ ಜನರು ಭಾಗವಹಿಸುವ ಮೂಲಕ ಈ ಬಾರಿಯ ದಸರಾ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಪ್ರತಿ ಸಲ ಲಕ್ಷಾಂತರ ಜನರು ಭಾಗವಹಿಸುವ ಮೈಸೂರು ದಸರಾದಲ್ಲಿ ಈ ಬಾರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸಂಪ್ರದಾಯ ಮುಂದುವರೆಸಿಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ.

ತಾಂಬೂಲ ಹಸ್ತಾಂತರ
ನಾಡಹಬ್ಬ ದಸರಾವನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಪ್ರಮುಖ ಅಧಿಕಾರಿಗಳಿಗೆ ಫಲ ತಾಂಬೂಲಗಳನ್ನು ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾವುತರು, ಕಾವಾಡಿಗರಿಗೆ ಮೂಲಭೂತ ಸಾಮಗ್ರಿಗಳನ್ನು ಜಿಲ್ಲಾಡಳಿತದ ವತಿಯಿಂದ ವಿತರಣೆ ಮಾಡಲಾಯಿತು. ಗಜಪಡೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮಾವುತರು ಹಾಗೂ ಕಾವಾಡಿಗರಿಗೆ ಆಹ್ವಾನಿತರಿಂದ ಮೂಲಭೂತ ವಸ್ತುಗಳನ್ನು ವಿತರಣೆ ಮಾಡಲಾಯಿತು.

ಅಂಬಾರಿ ಆನೆ ಅಭಿಮನ್ಯು
ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು, ಬಳಿಕ ಅರಮನೆಯ ಗೊಂಬೆ ತೊಟ್ಟಿಲಿಗೆ ಪೂಜೆ ನೆರವೇರಿಸಿದರು
ಅಂಬಾರಿ ಆನೆ ಅಭಿಮನ್ಯು, ವಿಕ್ರಮ, ಗೋಪಿ, ವಿಜಯ, ಕಾವೇರಿ ಆನೆಗಳು ಯಾವುದೇ ಅಂಜಿಕೆ ಇಲ್ಲದೆ, ಶಿಸ್ತುಬದ್ಧವಾಗಿ ಪೂಜೆ ಹಾಗೂ ಮೆರವಣಿಗೆಗೆ ಸಹಕರಿಸಿದವು.

ಜಂಬೂ ಸವಾರಿಗೆ 2 ಸಾವಿರ ಜನ
ನಾಡಿಗೆ ಬಂದ ದಸರಾ ಆನೆಗಳಿಗೆ ಸಂಪ್ರದಾಯಿಕ ಸ್ವಾಗತ ಕೋರಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು, ಜಂಬೂ ಸವಾರಿಗೆ 2 ಸಾವಿರ ಜನರನ್ನು ಸೇರಿಸುವ ಕುರಿತ ಅನುಮತಿ ಕೋರಿ ಮನವಿ ಮಾಡಿದ್ದೇವೆ ಎಂದರು.
ಚಾಮುಂಡಿ ಬೆಟ್ಟದ ಉದ್ಘಾಟನಾ ಕಾರ್ಯಕ್ರಮಕ್ಕೆ 250 ಜನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಜನ ಹಾಗೂ ವಿಜಯ ದಶಮಿ ಕಾರ್ಯಕ್ರಮಕ್ಕೆ 2000 ಜನರಿಗೆ ಅವಕಾಶ ಕಲ್ಪಿಸಲು ಮನವಿ ಮಾಡಿದ್ದೇವೆ. ಜಿಲ್ಲಾಡಳಿತ ಎಲ್ಲ ರೀತಿಯ ನಿಯಮ ಪಾಲನೆ ಮಾಡಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಎರಡು ದಿನಗಳಲ್ಲಿ ಸಿದ್ಧವಾಗಲಿದೆ ಎಂದು ಮಾಹಿತಿ ನೀಡಿದರು.

ವರ್ಗಾವಣೆ ಗೊಂದಲವಿಲ್ಲ
ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ ವರ್ಗಾವಣೆ ಜಟಾಪಟಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರದ ಬಗ್ಗೆ ಬಗ್ಗೆ ಯಾವುದೇ ಗೊಂದಲವಿಲ್ಲ. ವರ್ಗಾವಣೆ ನನ್ನ ಗಮನಕ್ಕೂ ಬಂದಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ವರ್ಗಾವಣೆ ಆಡಳಿತದ ದೃಷ್ಟಿಯಿಂದ ತಗೆದುಕೊಂಡ ತೀರ್ಮಾನ. ಈ ಬಗ್ಗೆ ಕೆಎಟಿ ಮೊರೆ ಹೋಗಿರುವ ಶರತ್ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇವೆ.
ಜಿಲ್ಲಾಧಿಕಾರಿಗಳ ವರ್ಗಾವಣೆಯನ್ನು ಸರ್ಕಾರದ ಭಾಗವಾಗಿ ಸ್ವಾಗತಿಸುತ್ತೇನೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications