ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ರಾಜ್ಯಪಾಲರಿಗೆ ಕೋವಿಡ್- ಪಂಜಿನ‌ ಕವಾಯತುಗೆ ಗೈರು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅ.5: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ದಸರಾ ಜಂಬೂಸವಾರಿ ಹಾಗೂ ಪಂಜಿನ‌ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ.

ಮೈಸೂರಿನಲ್ಲಿ ಈ ಬಗ್ಗೆ ಹೇಳಿಕೆ‌ ನೀಡಿದ ಸಿಎಂ‌ ಬಸವರಾಜ ಬೊಮ್ಮಾಯಿ, "ಸಂಪ್ರದಾಯದಂತೆ ರಾಜ್ಯಪಾಲರು ಪ್ರತಿ ವರ್ಷ ದಸರಾ ಮಹೋತ್ಸವದ ಪಂಜಿನ ಕವಾಯತಿನಲ್ಲಿ ಭಾಗವಹಿಸಬೇಕಿತ್ತು. ಆದರೆ, ಅವರಿಗೆ ಕೋವಿಡ್ ಸೋಂಕಾಗಿರುವ ಹಿನ್ನೆಲೆಯಲ್ಲಿ ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ," ಎಂದು ಮಾಹಿತಿ ನೀಡಿದರು.

Mysuru Dasara 2022: Covid positive for Governor thawar chand gehlot, Absent to panjin kavayat

ಇಂದು ಬೆಳಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡುವ ಸಿಎಂ ಬೊಮ್ಮಾಯಿ ನಂತರ ದಸರಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮೊದಲಿಗೆ ಮಧ್ಯಾಹ್ನ ಅರಮನೆ ಮುಂಭಾಗದ ಕೋಟೆ ಆಂಜನೇಯ ದೇವಾಲಯದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುತ್ತಾರೆ. ನಂತರ ಸಂಜೆ ಅಂಬಾರಿ ಮೇಲಿನ ತಾಯಿ ಚಾಮುಂಡೇಶ್ವರಿಗೆ ಪುರ್ಪಾಚನೆ ‌ಮಾಡಲಿದ್ದಾರೆ. ಬಳಿಕ ದಸರಾ ಜಂಬೂ ಸವಾರಿಯ ಮೆರವಣಿಗೆಗೆ ಸಾಗಲಿದೆ. ನಂತರ ಬನ್ನಿ ಮಂಟಪ ಮೈದಾನದ ಪಂಜಿನ ಕವಾಯತಿನಲ್ಲಿ ಭಾಗವಹಿಸಿ ರಾತ್ರಿ 10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗುವರು.

English summary
Governor Thawar Chand Gehlot will not participate in the Dussehra Jambooswari and Panjina Kavayatu program as he is infected with Covid.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X