Dasara 2022: ಯುವ ದಸರಾಗೆ ಸುದೀಪ್ ಚಾಲನೆ, ಒಂದು ದಿನ ಅಪ್ಪು ನಮನಕ್ಕೆ ಸೀಮಿತ
ಮೈಸೂರು, ಸೆಪ್ಟೆಂಬರ್ 22 : ಯೋಜನೆಯಂತೆ ಈ ಬಾರಿಯ ಮೈಸೂರು ದಸರಾ ಎಲ್ಲಾ ವಿಭಾಗದಲ್ಲೂ ಅದ್ದೂರಿಯಾಗಿಯೇ ನಡೆಯಲಿದೆ, ಯುವ ಸಮೂಹದಿಂದ ಸದಾ ಕಂಗೊಳಿಸುವ ಯುವ ದಸರಾವನ್ನು ಈ ಬಾರಿ ಕಿಚ್ಚ ಸುದೀಪ್ ಚಾಲನೆ ನೀಡಲಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಕಾರ್ಯಕ್ರಮ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 3ರವರೆಗೆ 7 ದಿನ ಕಾಲ ನಡೆಯಲಿದ್ದು, ಸ್ಥಳೀಯ ಕಲಾವಿದರೊಂದಿಗೆ ಸ್ಯಾಂಡಲ್ವುಡ್, ಬಾಲಿವುಡ್ ಗಾಯಕರೊಂದಿಗೆ ತಾರೆಯರು ನೃತ್ಯ ಮತ್ತು ಗಾಯನದ ಮೂಲಕ ಮೋಡಿ ಮಾಡಲಿದ್ದಾರೆ.
ಯುವ ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಒಂದು ದಿನ ಪೂರ್ತಿ ಅಪ್ಪು ನಮನ ಕಾರ್ಯಕ್ರಮಕ್ಕೆ ಮೀಸಲಿಡಲಾಗುವುದು. ಮತ್ತೊಂದು ದಿನವನ್ನು ಮಹಿಳಾ ಕಲಾವಿದರ ನಾನಾ ಕಾರ್ಯಕ್ರಮಗಳಿಗೆ ಮೀಸಲಿಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಯುವ ದಸರಾ ಉಪಸಮಿತಿ ವಿಶೇಷಾಧಿಕಾರಿ ಆರ್.ಚೇತನ್ ಮಾಹಿತಿ ನೀಡಿದರು.
ಎರಡು ವರ್ಷಗಳ ಬಳಿಕ ಯುವ ದಸರಾ ನಡೆಯುತ್ತಿದ್ದು, ಸೆ.27ರಂದು ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ನಟ ಸುದೀಪ್ ಭಾಗವಹಿಸುವ ಮೂಲಕ ತಾರಾ ಮೆರುಗು ನೀಡಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನಟ ಸುದೀಪ್ಗೆ ಯಾವುದೇ ಸಂಭಾವನೆ ನೀಡುತ್ತಿಲ್ಲ. ಉಳಿದ ಕಲಾವಿದರಿಗೆ ಸಂಭಾವನೆ ನೀಡಲಾಗುತ್ತಿದ್ದು, ದಸರಾ ಬಳಿಕ ಯಾವ್ಯಾವ ಕಲಾವಿದರಿಗೆ ಎಷ್ಟು ಸಂಭಾವನೆ ನೀಡಲಾಗಿದೆ ಎಂದು ತಿಳಿಸಲಾಗುವುದು ಎಂದರು.
ಯಾವ ದಿನ ಯಾರ ಕಾರ್ಯಕ್ರಮ
ಸೆಪ್ಟೆಂಬರ್ 27ರಂದು ಶ್ರೀಧರ್ ಜೈನ್ ನೃತ್ಯ ತಂಡದಿಂದ ಕಾರ್ಯಕ್ರಮ, ಗಾಯಕರಾದ ರಘು ಧೀಕ್ಷಿತ್ ಹಾಗೂ ಗಾಯಕಿ ಮಂಗ್ಲಿ ಅವರಿಂದ ಗಾಯನ ನಡೆಯಲಿದೆ. ಸೆಪ್ಟೆಂಬರ್ 28ರಂದು ಯುವ ದಸರಾ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ಕುಮಾರ್ಗೆ ಗೌರವ ಸಲ್ಲಿಸಲಾಗುತ್ತಿದ್ದು, ಗಾಯಕರಾದ ಗುರುಕಿರಣ್, ವಿಜಯಪ್ರಕಾಶ್, ಕುನಾಲ್ ಗಾಂಜಾವಾಲ ಗಾಯನದ ಮೂಲಕ ಅಪ್ಪು ಅವರಿಗೆ ನಮನ ಸಲ್ಲಿಸಲಿದ್ದಾರೆ.
ಸೆಪ್ಟೆಂಬರ್ 29ರಂದು ಲೇಸರ್ ಶೋ, ಸಿಗ್ನೇಚರ್ ಗ್ರೂಪ್ ನೃತ್ಯ ತಂಡ, ಕನ್ನಿಕಾ ಕಪೂರ್ ಮತ್ತು ಅಸೆಂಟ್ ತಂಡದಿಂದ ಕಾರ್ಯಕ್ರಮ ನಡೆಯಲಿದೆ. ಸೆಪ್ಟೆಂಬರ್ 30 ರಂದು ಸ್ಯಾಂಡಲ್ವುಡ್ ನೈಟ್ ಇರಲಿದ್ದು, ಕನ್ನಡ ಚಿತ್ರರಂಗದ ನಟಿ ನಟಿಯರು ಭಾಗವಹಿಸಲಿದ್ದಾರೆ. ಅಕ್ಟೋಬರ್ 1ರಂದು ಗಾಯಕಿ ಡಾ.ಶಮಿತ ಮಲ್ನಾಡ್ ತಮ್ಮ ಗಾಯನದ ಮೂಲಕ ರಂಜಿಸಲಿದ್ದಾರೆ. ಅಕ್ಟೋಬರ್ 2ರಂದು ಪವನ್ ಡ್ಯಾನ್ಸರ್, ನಟಿ ಹರ್ಷಿಕಾ ಪೂಣಚ್ಚ, ನಟ ವಿಜಯ ರಾಘವೇಂದ್ರ, ಅಮಿತ್ ತ್ರಿವೇದಿಯಿಂದ ಕಾರ್ಯಕ್ರಮ ಇರಲಿದೆ. ಅಕ್ಟೋಬರ್ 3ರಂದು ಸುಪ್ರಿಯಾ ರಾಮ್ ಮತ್ತು ಮಹಿಳಾ ಬ್ಯಾಂಡ್ ತಂಡ ಕಾರ್ಯಕ್ರಮ ನಡೆಸಿಕೊಡಲಿದೆ, ನಂತರ ಪ್ಯಾಷನ್ ಶೋ ನಡೆಯಲಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications