Mysuru dasara 2023: 135 ಕಿ.ಮೀ. ದೀಪಾಲಂಕಾರ, ಅಕ್ಟೋಬರ್ 15ರಿಂದ ಜಗಮಗಿಸಲಿದೆ ಸಾಂಸ್ಕೃತಿಕ ನಗರಿ
ಮೈಸೂರು, ಅಕ್ಟೋಬರ್, 03: ಈ ಬಾರಿಯ ದಸರಾ ಮಹೋತ್ಸವದ ವೇಳೆ ಮೈಸೂರು ನಗರ ವಿದ್ಯುದೀಪಗಳಿಂದ ಝಗಮಗಿಸಲಿದ್ದು, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ಚಂದ್ರಯಾನ ಅನಾವರಣಗೊಳ್ಳಲಿದೆ.
ನಗರದ ಪ್ರಮುಖ ರಸ್ತೆಗಳ ಅರಮನೆ ಸುತ್ತ ಸೇರಿದಂತೆ ಸಯ್ಯಾಜಿ ರಾವ್ ರಸ್ತೆ, ಬಿಎನ್ ರಸ್ತೆ, ಇರ್ವೀನ್ ರಸ್ತೆ, ಆಲ್ಬರ್ಟ್ ವಿಕ್ಟರ್ ರಸ್ತೆ, ಜೆಎಲ್ಬಿ ರಸ್ತೆ, ಚಾಮರಾಜ ಜೋಡಿ ರಸ್ತೆ ಸೇರಿದಂತೆ ಹೊರ ವಲಯದಲ್ಲಿನ ಪ್ರಮುಖ ಹೆದ್ದಾರಿಗಳನ್ನು ಸೇರಿಸಿಕೊಂಡು 135 ಕಿ.ಮೀ. ಉದ್ದದ ರಸ್ತೆಗೆ ದೀಪಾಲಂಕಾರ ಮಾಡಲಾಗುತ್ತಿದೆ. ಜೊತೆಗೆ ನಗರ ವ್ಯಾಪ್ತಿಯಲ್ಲಿರುವ ಪ್ರಮುಖ 119 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ.

ಅಕ್ಟೋಬರ್ 15ರಿಂದ 24ರವರೆಗೆ ನಡೆಯುವ ನವರಾತ್ರಿ ವೇಳೆ ದೀಪಾಲಂಕಾರದಿಂದ ಮೈಸೂರು ಕಂಗೊಳಿಸಲಿದೆ. ಕಳೆದ ಬಾರಿ ದೀಪಾಲಂಕಾರದ ವೀಕ್ಷಣೆ ಅವಧಿಯನ್ನು ಪ್ರವಾಸಿಗರ ಕೋರಿಕೆ ಮೇರೆಗೆ ವಿಸ್ತರಿಸಲಾಗಿತ್ತು. ಈ ಬಾರಿಯೂ ವೀಕ್ಷಣೆಯ ಅವಧಿಯನ್ನು ವಿಸ್ತರಿಸಲು ಸೆಸ್ಕ್ ನಿರ್ಧರಿಸಿದೆ.
ನಗರದ ದೊಡ್ಡಕೆರೆ ಮೈದಾನ, ಕೆ.ಆರ್.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ(ಹಾರ್ಡಿಂಜ್), ರಾಮಸ್ವಾಮಿ ವೃತ್ತ, ರೈಲ್ವೆ ನಿಲ್ದಾಣ ಸಮೀಪ, ಗನ್ಹೌಸ್, ಎಲ್ಐಸಿ ವೃತ್ತ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಗಳಿಂದಲೇ ಮಾಡಿರುವ 30ಕ್ಕೂ ಹೆಚ್ಚು ಆಕೃತಿಗಳನ್ನು ನಿರ್ಮಿಸಲಾಗುತ್ತಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ, ದೇಶಭಕ್ತಿ, ಪರಿಸರ ಪ್ರೇಮ, ಭಾವೈಕ್ಯತೆ, ಸಂವಿಧಾನದ ಆಶಯಗಳ ಕುರಿತಾದ ನೃತ್ಯರೂಪಕಗಳನ್ನು ಪ್ರದರ್ಶಿಸುವ ಮೂಲಕ ರಂಜಿಸಲಿದ್ದಾರೆ.
ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಅಕ್ಟೋಬರ್ 6ರಿಂದ ಯುವ ಸಂಭ್ರಮ ನಡೆಯಲಿದೆ. ಚಂದನವದ ತಾರಾ ದಂಪತಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ವೇಳೆ ಸಚಿವರಾದ ಕೆ.ವೆಂಕಟೇಶ್, ಶಿವರಾಜ ಸಂಗಪ್ಪ ತಂಗಡಗಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ದಸರಾ ಆಚರಣೆ ಸಂಬಂಧ ಈವರೆಗೆ 10 ಸಭೆಗಳನ್ನು ಮಾಡಿದ್ದೇನೆ. 18 ಸಮಿತಿಗಳನ್ನು ರಚಿಸಲಿದ್ದೇವೆ. ಸದಸ್ಯರನ್ನು ಕೂಡ ನೇಮಕ ಮಾಡಲಾಗುವುದು. ಯುವಕರನ್ನು ಆಕರ್ಷಿಸಲು ಯುವ ಸಂಭ್ರಮ ಮತ್ತು ಯುವ ದಸರಾ ಕಾರ್ಯಕ್ರಮಗಳು ಇರಲಿವೆ ಎಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
18 ಕೋಟಿ ಅನುದಾನ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಸರಾಗೆ 18 ಕೋಟಿ ಅನುದಾನ ನೀಡಿದೆ. ಅಗತ್ಯವಿದ್ದರೆ ಹೆಚ್ಚಿನ ಅನುದಾನ ನೀಡಲಿದೆ. ಕಳೆದ ದಸರಾಗಿಂತ ಕಡಿಮೆ ಹಣವನ್ನು ಖರ್ಚು ಮಾಡುವ ಗುರಿ ಹೊಂದಿದ್ದೇವೆ. ಪ್ರಾಯೋಜಕತ್ವಕ್ಕೆ ಆದ್ಯತೆ ಕೊಡುತ್ತೇವೆ ಎಂದು ಹೇಳಿದರು. ಒಂದು ಆಹಾರ ಮೇಳ ಇರಲಿದೆ. ಮತ್ತೊಂದು ಕಡೆ ಆಯೋಜನೆಗೆ ಆಲೋಚನೆ ಮಾಡುತ್ತೇವೆ. ಕವಿಗೋಷ್ಠಿ, ಯುವ ಸಂಭ್ರಮದಲ್ಲಿ ಒಳ್ಳೆಯ ಸಂದೇಶ ಕೊಡಬೇಕು. ಬಹುತ್ವ ಭಾರತ, ಭಾರತದ ಸಂವಿಧಾನದ ಆಶಯ, ಸಾಮರಸ್ಯದ ಸಂದೇಶವನ್ನು ಯುವ ಜನತೆಯ ಮೂಲಕ ಜನತೆಗೆ ತಿಳಿಸಲಿದ್ದೇವೆ ಎಂದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications