Mysuru Dasara 2023: ಈ ಬಾರಿ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆ ಏನು?, ಇಲ್ಲಿದೆ ವಿವರ
ಮೈಸೂರು, ಅಕ್ಟೋಬರ್, 05: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಅಕ್ಟೋಬರ್ 15ರಿಂದ 24ರವರೆಗೆ ದಸರಾ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಈಗಾಗಲೇ ಸಕಲ ತಯಾರಿ ಆರಂಭಗೊಂಡಿದೆ. ಪ್ರದರ್ಶನ ಹೆಬ್ಬಾಗಿಲಿನ ಬಳಿ ಈ ಬಾರಿ 20 ಅಡಿ ಎತ್ತರದ ಚಾಮುಂಡೇಶ್ವರಿ ಮೂರ್ತಿಯನ್ನು ಹೂವಿನಿಂದಲೇ ಪ್ರತಿಷ್ಠಾಪಿಸಲಾಗುತ್ತಿದೆ.
ದಸರಾ ಮಹೋತ್ಸವದ ವಿಶೇಷ ಆಕರ್ಷಣೆಗಳಲ್ಲಿ ಒಂದಾದ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ಪ್ರವಾಸಿಗರ ಆಕರ್ಷಣೆಯ ಬಿಂದುವಾಗಿ ಚಂದ್ರಯಾನ-3 ರೂಪುಗೊಳ್ಳಲಿದೆ. ಕುಪ್ಪಣ್ಣ ಪಾರ್ಕ್ನಲ್ಲಿರುವ ಗಾಜಿನ ಅರಮನೆಯಲ್ಲಿ 3 ಲಕ್ಷ ಕೋಲ್ಕತ್ತಾದ ಸೇವಂತಿ ಹೂವಿನಿಂದ ರಾಕೆಟ್ ಹಾಗೂ ಪ್ರಜ್ಞಾನ್ ರೋವರ್ನೊಂದಿಗೆ 'ಚಂದ್ರಯಾನ-3 ನಿರ್ಮಾಣವಾಗಲಿದೆ. ಈಗಾಗಲೇ ಫಲಪುಷ್ಪ ಪ್ರದರ್ಶನ ಟೆಂಡರ್ ಕರೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತೋಟಗಾರಿಕಾ ಇಲಾಖೆ 1.35 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆದಿದೆ. ಯಾರು ಹೆಚ್ಚು ಮೊತ್ತಕ್ಕೆ ಟೆಂಡರ್ ಬಿಡ್ ಕೂಗಿರುತ್ತಾರೆಯೋ ಅವರಿಗೆ ಫಲಪುಷ್ಪ ಪ್ರದರ್ಶನ ಉಸ್ತುವಾರಿ ಲಭಿಸಲಿದೆ. ಅಲ್ಲದೆ, ಅಕ್ಟೋಬರ್ 12 ಅಥವಾ 13ರೊಳಗೆ ಫಲಪುಷ್ಪ ಪ್ರದರ್ಶನದ ಸಿದ್ಧತೆ ಪೂರ್ಣಗೊಳ್ಳಲಿದೆ.
ಈ ಬಾರಿ ರಾಜ್ಯದಲ್ಲಿ ಆಚರಿಸಿ ಪ್ರಜಾಪ್ರಭುತ್ವದ ದಿನದ ಕಾರ್ಯಕ್ರಮದಲ್ಲಿ ಎಲ್ಲೆಡೆ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ದಾಖಲೆ ಬರೆದ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಲಪುಷ್ಪ ಪ್ರದರ್ಶನದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಸಂವಿಧಾನ ಪೀಠಿಕೆಯುಳ್ಳ ಸೆಲ್ಫಿ ಪಾಯಿಂಟ್ ನಿರ್ಮಾಣ ಮಾಡಲಾಗುತ್ತಿದೆ.
ಭಾರತ ಆತಿಥ್ಯ ವಹಿಸಿರುವ 13ನೇ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಭಾರತ ತಂಡವನ್ನು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಸರಾ ಫಲಪುಷ್ಪ ಪ್ರದರ್ಶನದಲ್ಲಿ 'ಗೆದ್ದು ಬಾ ಇಂಡಿಯಾ' ಶೀರ್ಷಿಕೆಯಡಿ ಹೂವಿನಿಂದಲೇ ಕ್ರಿಕೆಟ್ ಬ್ಯಾಟ್, ಬಾಲ್, ವಿಕೆಟ್ಗಳು ಸೇರಿದಂತೆ ಕೆಲ ಕಲಾಕೃತಿಗಳನ್ನು ನಿರ್ಮಿಸಲಾಗುತ್ತಿದೆ.
"ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಈ ಬಾರಿ 1.35 ಕೋಟಿ ರೂಪಾಯಿಗೆ ಫಲಪುಷ್ಪ ಪ್ರದರ್ಶನದ ಟೆಂಡರ್ ಕರೆಯಲಾಗಿದೆ. ತೋಟಗಾರಿಕಾ ಇಲಾಖೆ ಹಾಗೂ ತೋಟಗಾರಿಕಾ ಸಂಘದ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ಬಾರಿಗೆ ಫಲಪುಷ್ಪ ಪ್ರದರ್ಶನ ನಡೆಯುತ್ತಿದ್ದು, ಆಕರ್ಷಣೆಯೊಂದಿಗೆ ಶೈಕ್ಷಣಿಕ ಮಹತ್ವವನ್ನು ಈ ಬಾರಿಯ ಫಲಪುಷ್ಪ ಪ್ರದರ್ಶನ ಸಾರುವ ನಿಟ್ಟಿನಲ್ಲಿ ರೂಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ," ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ನಾಗರಾಜು ತಿಳಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ











Click it and Unblock the Notifications