Mysuru Dasara: 2023ರ ದಸರಾದಲ್ಲಿ ಏನಿರುತ್ತೆ? ಏನಿರಲ್ಲ?, ಮಾಹಿತಿ ಇಲ್ಲಿದೆ
ಮೈಸೂರು, ಸೆಪ್ಟೆಂಬರ್, 25: ಕಾವೇರಿ ವಿವಾದ ಹಾಗೂ ಬರಗಾಲದ ಹಿನ್ನೆಲೆ ಈ ಬಾರಿ ಸರಳ ದಸರಾ ಆಚರಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಎಂದಿನಂತೆ ಸಾಂಪ್ರದಾಯಿಕ ದಸರಾ ನಡೆಯಲಿದ್ದು, ಹಲವಾರು ಕಾರ್ಯಕ್ರಮಗಳಿಗೂ ಕೋಕ್ ಬೀಳುವ ಸಾಧ್ಯತೆ ಇದೆ. ಹಾಗಾದರೆ ಈ ಬಾರಿಯ ದಸರಾ ಮಹೋತ್ಸವದಲ್ಲಿ ಏನುಂಟು ಏನಿಲ್ಲ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್.ಸಿ.ಮಹದೇವಪ್ಪ ಹೇಳುವಂತೆ, ದಸರಾ ಆಚರಣೆಯಲ್ಲಿ ಹಮ್ಮಿಕೊಳ್ಳುವ ಪ್ರತಿಯೊಂದು ಕಾರ್ಯಕ್ರಮವು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಇರಬೇಕು. ಈ ಬಾರಿ ಅದ್ಧೂರಿಯಲ್ಲದ ಹಾಗೂ ಸರಳವೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯುವ ದಸರಾ ನಡೆಯೋದು ಡೌಟ್
ಪ್ರತಿವರ್ಷ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಯುವ ದಸರಾ ನೋಡಲು ವಿದ್ಯಾರ್ಥಿಗಳ ದಂಡೇ ಬರುತ್ತದೆ. ದಸರಾದಲ್ಲಿ ಅತಿಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಯುವ ದಸರಾವೂ ಒಂದು. ಈ ಒಂದು ಕಾರ್ಯಕ್ರಮಕ್ಕೆ ಅಂದಾಜು 8 ಕೋಟಿ ರೂಪಾಯಿ ಬೇಕು. ಆದರೆ, ಈ ಬಾರಿ ಬರಗಾಲ ಇರುವುದರಿಂದ ಸರ್ಕಾರ ಸರಳ ದಸರಾ ಆಚರಿಸುವ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಯುವ ದಸರಾ ನಡೆಯುವುದು ಡೌಟು. ಬದಲಿಗೆ ಯುವ ಸಂಭ್ರಮ ನಡೆಸುವ ಆಲೋಚನೆ ಜಿಲ್ಲಾಡಳಿತ ಇದೆ.
ಜಲಸಾಹಸ ಕ್ರೀಡೆ ಇಲ್ಲ
ದಸರಾ ಎಂದರೆ ಅಲ್ಲಿ ಕ್ರೀಡಾಕೂಟಕ್ಕೂ ಅಷ್ಟೇ ಮಹತ್ವ ಇದೆ. ರಾಜ್ಯದ ವಿವಿಧೆಡೆಯಿಂದ ಇಲ್ಲಿಗೆ ಆಗಮಿಸುತ್ತಾರೆ. ದಸರಾ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವುದು ಹೆಮ್ಮೆಯ ಜೊತೆಗೆ, ಆಟಗಾರನ ಕನಸು ಕೂಡ. ಕ್ರೀಡಾಕೂಟಕ್ಕೆ ಅಂದಾಜು 5 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತದೆ. ಆದರೆ, ಈ ಬಾರಿ ದಸರಾದಲ್ಲಿ ಕ್ರೀಡಾಕೂಟ ನಡೆಯಲಿದೆ. ಆದರೆ, ವರುಣ ಕೆರೆಯಲ್ಲಿ ನಡೆಯುವ ಜಲ, ಸಾಹಸ ಕ್ರೀಡೆಗೆ ಕೋಕ್ ನೀಡುವ ಸಂಭವ ಇದೆ.
ಏರ್ ಶೋ ಇಲ್ಲ
ಸಾಮಾನ್ಯವಾಗಿ ದಸರಾ ಮಹೋತ್ಸವದಲ್ಲಿ ಏರ್ ಶೋ ಕೂಡ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ ಮೂಡಿಸುವ ಇದು ಜನರ ನೆಚ್ಚಿನ ಪ್ರದರ್ಶನ. ಒಂದು ಗಂಟೆಯ ಇದಕ್ಕೆ ಸಾಕಷ್ಟು ಜನ ಆಸಕ್ತಿಯಿಂದ ಹೋಗುತ್ತಿದ್ದರು. ಆದರೆ, ಈ ಬಾರಿ ಮಳೆ ಕೊರತೆಯಿಂದ ಬರ ಇರುವುದರಿಂದ ಏರ್ ಶೋ ಅನ್ನು ರದ್ದು ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಸಾಂಸ್ಕೃತಿಕ ಕಾರ್ಯಕ್ರಮ ಅಭಾದಿತ
ಸಚಿವರಾದ ಎಚ್.ಸಿ. ಮಹದೇವಪ್ಪ ಪ್ರಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಪರಂಪರೆಯನ್ನು ಬಿಂಬಿಸುವ ರೀತಿ ಇರಬೇಕು. ಕವಿಗೋಷ್ಠಿಯಲ್ಲಿ ಸಂವಿಧಾನ, ಗಣರಾಜ್ಯ, ಕರ್ನಾಟಕ ಏಕೀಕರಣ, ಮೈಸೂರು ಅರಸರ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹಾಸ್ಯ ಬರಿತವಾಗಿ ಇರಬೇಕು. ಆಹಾರ ಮೇಳದಲ್ಲಿ ದೇಶೀಯ ಆಹಾರ ಪದ್ಧತಿಯ ಆಹಾರಗಳನ್ನು ನೀಡಬೇಕು ಅಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹಾಗೆಯೇ ಈ ಬಾರಿ ಪ್ಲಾಸ್ಟಿಕ್ ಮುಕ್ತ ದಸರಾ ಆಚರಣೆ ಮಾಡಬೇಕು. ದಸರಾ ಚಲನ ಚಿತ್ರೋತ್ಸವದಲ್ಲಿ ಸಾಮಾಜಿಕ ಸಂದೇಶ ಸಾರುವ ಚಿತ್ರಗಳನ್ನು ಪ್ರದರ್ಶನ ಮಾಡಬೇಕು. ಯುವ ನಿರ್ದೇಶಕರಿಗೆ ಉತ್ತೇಜನ ನೀಡುವಂತೆ ಇರಬೇಕು. ಕಿರು ಚಿತ್ರಗಳ ಸ್ಪರ್ಧೆ ಏರ್ಪಡಿಸೇಕು ಎಂದು ತಿಳಿಸಿದ್ದಾರೆ. ಜೊತೆ ಫಲಪುಷ್ಪ ಪ್ರದರ್ಶನ ಆಕರ್ಷಣೀಯವಾಗಿ ಇರಬೇಕು. ಹಣ್ಣು ಮೇಳದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಬೆಳೆಯುವ ಹಣ್ಣುಗಳ ಪ್ರದರ್ಶನ ಆಗಬೇಕು. ಈ ವೇಳೆ ರೈತರಿಂದ ನೇರವಾಗಿ ಹಣ್ಣುಗಳ ಖರೀದಿ ಅಗಬೇಕು ಎಂದು ತಿಳಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications