ಮೈಸೂರು ದಸರಾ 2023: ಕುಶಾಲತೋಪು ತಾಲೀಮು ಆರಂಭ, ಬೆದರಿದ ಸುಗ್ರೀವ, ಹಿರಣ್ಯ
ಮೈಸೂರು, ಅಕ್ಟೋಬರ್ 11: ನಾಡ ಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಕಣೆ ಜಂಬೂ ಸವಾರಿ. ಈ ಜಂಬೂಸವಾರಿಯಲ್ಲಿ ಸಾಗುವ ಗಜಪಡೆಗಳ ತಾಲೀಮು ದಿನದಿಂದ ದಿನಕ್ಕೆ ಬದಲಾಗುತ್ತಾ ಹೋಗುತ್ತದೆ. ಇದೀಗ ದಸರಾ ಆನೆಗಳಿಗೆ ಸಿಡಿಮದ್ದಿನ ತಾಲೀಮು ಯಶಸ್ವಿಯಾಗಿ ನಡೆದಿದೆ.
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲಾ ಆನೆಗಳಿಗೂ ಈ ತಾಲೀಮು ಮಾಡಿಸಲಾಗುತ್ತದೆ. ಶಬ್ದಗಳಿಗೆ ಆನೆಗಳು ಭಯಪಡದಂತೆ ಸಿಡಿಮದ್ದಿನ ಅಭ್ಯಾಸ ಮಾಡಿಸಲಾಗುತ್ತದೆ

ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಆವರಣದಲ್ಲಿ ತಾಲೀಮು ನಡೆಯಿತು. ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಫಿರಂಗಿ ಗಾಡಿಗಳಿಂದ ಒಟ್ಟು 21 ಬಾರಿ ಕುಶಾಲತೋಪು ಸಿಡಿಸಿ ಅಭ್ಯಾಸ ಮಾಡಲಾಯಿತು. 7 ಪಿರಂಗಿಗಳ ಮೂಲಕ ಮೂರು ಸುತ್ತಿನ ತಾಲೀಮು ನಡೆಯಿತು. ತಾಲೀಮಿನಲ್ಲಿ 43 ಅಶ್ವಾರೋಹಿ ದಳ ಭಾಗವಹಿಸಿದ್ದವು.
ಜಂಬೂಸವಾರಿಯ ದಿನವಾದ ವಿಜಯದಶಮಿಯಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ನಂತರ 21 ಸುತ್ತಿನ ಕುಶಾಲತೋಪು ಸಿಡಿಸುವಾಗ ಹೊಮ್ಮುವ ಕಿವಿಗಡಚಿಕ್ಕುವ ಶಬ್ದಕ್ಕೆ ಕುದುರೆ, ಆನೆಗಳು ಬೆಚ್ಚದಂತೆ ಮಾಡಲು, ಪೂರ್ವಭ್ಯಾಸ ನೀಡುವುದು ವಾಡಿಕೆ. ಹಾಗಾಗಿ ಪ್ರತಿವರ್ಷ ಇದನ್ನು ಮಾಡಲಾಗುತ್ತದೆ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 14 ಆನೆಗಳು ಕುಶಾಲುತೋಪು ತಾಲೀಮಿನಲ್ಲಿ ಭಾಗಿಯಾಗಿದ್ದವು. ಸುಗ್ರೀವ ಹಾಗೂ ಹಿರಣ್ಯ ಆನೆಗಳು ಬೆದರಿದವು. ಮುನ್ನೆಚ್ಚರಿಕೆಯಾಗಿ ಆನೆ ಎರಡು ಕಾಲುಗಳಿಗೆ ಸರಪಳಿ ಕಟ್ಟಿದ್ದರಿಂದ ಆನೆಗಳು ನಿಂತಲ್ಲೇ ಅಲುಗಾಡಿದವು. ಇನ್ನು ಸಿಡಿಮದ್ದು ತಾಲೀಮಿಗೆ ಅಶ್ವಗಳು ಹೆದರಿದ್ದು ಕಂಡು ಬಂದಿತು. ವಿಜಯದಶಮಿ ದಿನ ರಾಷ್ಟ್ರಗೀತೆ ಕೇಳಿಬರುವ 53 ಸೆಕೆಂಡುಗಳಲ್ಲಿ ಬ್ಯಾರಲ್ ಅನ್ನು 21 ಬಾರಿ ಸ್ವಚ್ಛಗೊಳಿಸಿ, 21 ಬಾರಿ ಕುಶಾಲತೋಪು ಸಿಡಿಸಲಾಗುತ್ತದೆ.

ಕ್ಯಾಪ್ಟನ್ ಅಭಿಮನ್ಯುಗೆ ಅಂಬಾರಿ ಹೊರುವ ತಾಲೀಮು
ಇನ್ನು ಕ್ಯಾಪ್ಟನ್ ಅಭಿಮನ್ಯುಗೆ ಅಂಬಾರಿ ಹೊರುವ ತಾಲೀಮು ನಡೆಯುತ್ತಿದೆ. ಕಳೆದೆರಡು ದಿನಗಳಿಂದ ಆರಂಭಗೊಂಡಿರುವ ಮರದ ಅಂಬಾರಿಯ ತಾಲೀಮು ಜಂಬೂಸವಾರಿಯ ಹಿಂದಿನ ದಿನದವರೆಗೆ ನಡೆಯಲಿದೆ. ಇದೀಗ ಪ್ರತಿದಿನ ಮರದ ಅಂಬಾರಿಯನ್ನು ಅಭಿಮನ್ಯು ಬೆನ್ನಿಗೆ ಕಟ್ಟಿ ತಾಲೀಮು ನಡೆಸುತ್ತಿದ್ದು, ಇದನ್ನು ನೈಪುಣ್ಯ ಹೊಂದಿದ ಮಾವುತರು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಮಾಡಲಾಗುತ್ತಿದೆ. ಮೊದಲ ದಿನವಾದ ಸೋಮವಾರ ಸಂಜೆ ಅಂಬಾರಿ ಆನೆ ಅಭಿಮನ್ಯು ಮರಳಿನ ಮೂಟೆ ಸೇರಿದಂತೆ 750 ಕೆಜಿ ಭಾರದ ಮರದ ಅಂಬಾರಿ ಹೊರುವ ಮೂಲಕ ತಾಲೀಮು ನಡೆಸಿದೆ.
ಸುಮಾರು 280 ಕೆ.ಜಿ ತೂಕದ ಮರದ ಅಂಬಾರಿ, 400 ಕೆ.ಜಿ ಮರಳಿನ ಮೂಟೆ ಸೇರಿದಂತೆ ಸೇರಿದಂತೆ ಒಟ್ಟು 750ಕ್ಕೂ ಹೆಚ್ಚಿನ ಭಾರವನ್ನು ಹೊತ್ತು ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ 5 ಕಿ.ಮೀ ದೂರವನ್ನು ಯಶಸ್ವಿಯಾಗಿ ಪೂರೈಸಿದೆ. ಇನ್ನು ಅಭಿಮನ್ಯು ಮರದ ಅಂಬಾರಿ ಹೊತ್ತು ಗಜಗಾಂಭೀರ್ಯದಿಂದ ಮುಂದೆ ನಡೆದರೆ ಆತನ ಪಕ್ಕ ಕುಮ್ಕಿ ಆನೆಗಳಾದ ವರಲಕ್ಷ್ಮಿ, ವಿಜಯ ಸಾಥ್ ನೀಡಿವೆ. ಅಷ್ಟೇ ಅಲ್ಲದೆ ಗಂಡಾನೆಗಳಾದ ಅರ್ಜುನ, ಭೀಮ, ಮಹೇಂದ್ರ, ಧನಂಜಯ, ಗೋಪಿ, ಕಂಜನ್, ಸುಗ್ರೀವ, ಪ್ರಶಾಂತ, ರೋಹಿತ್, ಹೆಣ್ಣಾನೆಗಳಾದ ಲಕ್ಷ್ಮಿ, ಹಿರಣ್ಯಾ ಕೂಡ ಭಾಗವಹಿಸಿ ಗಮನಸೆಳೆದವು. ಮೊದಲ ದಿನ ಮಳೆಯಲ್ಲಿಯೇ ಗಜಪಡೆಯ ತಾಲೀಮು ನಡೆದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications