Mysuru dasara 2023: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ನಾದಬ್ರಹ್ಮ ಹಂಸಲೇಖ ವಿಧ್ಯುಕ್ತ ಚಾಲನೆ
ಮೈಸೂರು, ಅಕ್ಟೋಬರ್, 15: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಭಾನುವಾರ (ಅಕ್ಟೋಬರ್) ವಿಧ್ಯುಕ್ತ ಚಾಲನೆ ನೀಡಿದರು.
ದಸರಾ ಮಹೋತ್ಸವ ಅಂಗವಾಗಿ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣ ನಿರ್ಮಾವಾಗಿತ್ತು. ರಸ್ತೆಗಳ ತುಂಬಾ ರಂಗೋಲಿಗಳ ಚಿತ್ತಾರ ಆಕರ್ಷಕವಾಗಿತ್ತು. ವೀರಗಾಸೆ, ಡೊಳ್ಳು, ಕಂಸಾಲೆ ಹಾಗೂ ನಗಾರಿ ಕಲಾತಂಡಗಳು ಹಂಸಲೇಖ ಅವರನ್ನು ಬರಮಾಡಿಕೊಂಡರು. ಬೆಳಗ್ಗೆ 10.15ರಿಂದ 10.36ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಸಂಗೀತ ನಿರ್ದೇಶಕ ಹಂಸಲೇಖ ಹತ್ತು ದಿನಗಳ ನಾಡಹಬ್ಬಕ್ಕೆ ಚಾಲನೆ ನೀಡಿದರು.

ಈ ವೇಳೆ ಹಂಸಲೇಖ ಅವರಿಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್, ಸಂಸದ ಪ್ರತಾಪಸಿಂಹ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಪಶು ಸಂಗೋಪನೆ ಸಚಿವ ಕೆ.ವೆಂಕಟೇಶದ, ಇಂಧನ ಸಚಿವ ಕೆ.ಜೆ.ಜಾರ್ಚ್ ಸೇರಿದಂತೆ ಇತರ ಸಚಿವರು ಹಾಗೂ ಶಾಸಕರು ಸಾಥ್ ನೀಡಿದರು.
ನಾದಬ್ರಹ್ಮ ಹಂಸಲೇಖ ಪೂಜ್ಯ ಕನ್ನಡಿಗರಿಗೆ ಎನ್ನುತ್ತಲೇ ಮಾತು ಶುರು ಮಾಡಿದರು. ಕರ್ನಾಟಕದ ಏಕೀಕರಣಕ್ಕೆ ಇದೀಗ 50 ವರ್ಷ ತುಂಬಿದೆ. ನನ್ನ ಕಲಾ ಕಾಯಕಕ್ಕೂ 50 ವರ್ಷ ತುಂಬಿದೆ. ಇಂದು ನನಗೆ ಸಿಕ್ಕಿರುವ ಈ ಅವಕಾಶ ಬಹಳ ಬೆಲೆ ಬಾಳುವಂತದ್ದು. ಸಾವಿರ ಮೆಟ್ಟಿಲು ಹತ್ತಿ ಇಲ್ಲಿಯವರೆಗೆ ಬಂದಿದ್ದೇನೆ. ಈ ಬೆಟ್ಟ, ಈ ಹಬ್ಬ, ಈ ದೀಪ ಹಚ್ಚೋದು ಪುಣ್ಯದ ಕೆಲಸ. ಈ ಸಂಭ್ರಮಕ್ಕೆ ನಾನು ಯಾರನ್ನು ನೆನೆಯಲಿ ಎಂದು ತಿಳಿಸಿದರು.
ನಾನು ಹಚ್ಚಿದ್ದು ಕನ್ನಡದ ದೀಪ. ಈ ದೀಪ ಹಚ್ಚಲು ನನಗೆ ಇಡೀ ನಾಡಿನ ಆಶಯ ಇದೆ. ದಸರಾ ಒಂದು ಜೀವಂತ ಮಹಾಕಾವ್ಯ. ವೀರತೆಂಕಣದ ಮಹಾಕಾವ್ಯ ಇದು. ಕನ್ಮಡ ನಮ್ಮ ಶೃತಿ ಆಗಬೇಕು. ಆಳಿದರೆ ಕೃತಿಯಂತಿರಬೇಕು. ಕನ್ನಡದ ಭಾಷೆಗೆ ಮಿತಿ ಇದೆ. ಆದರೆ ಅದರ ಭಾವಕ್ಕೆ ಎಲ್ಲಿ ಮಿತಿ ಇದೆ. ದೆಹಲಿ ನಮಗೆ ಬೇಕು. ದೆಹಲಿಗೂ ಕನ್ನಡ ಬೇಕು ಎಂದರು.
ಆದರೆ, ದೆಹಲಿಗೆ ಯಾಕೋ ಕನ್ನಡ ಬೇಡವಾಗಿದೆ. ಕನ್ನಡ ವಿಶ್ವಭಾಷೆ ಆಗಬೇಕು. ಅಭಿವೃದ್ಧಿ ಶಾಂತಿಮಂತ್ರ ಒಂದಂಶದ ಕಾರ್ಯಕ್ರಮ ಆಗಬೇಕು. ಹೊರ ರಾಜ್ಯದ ಕಾರ್ಪೋರೇಟ್ ಕಂಪನಿಯ ನೌಕರರಿಗೆ ಕನ್ನಡ ಕಲಿಸಬೇಕು. ಕನ್ನಡ ಕಲಿಸುವ ಪುಸ್ತಕ ಹೊರಬರಬೇಕೆಂದು ತಿಳಿಸಿದರು.
ಮಂಗಳೂರು ಮೈಸೂರು ಜೋಡಿ ಜಿಲ್ಲೆ ಆಗಬೇಕು. ಈ ಎರಡು ಜಿಲ್ಲೆಯಲ್ಲಿ ಅಪಾರ ಸಾಂಸ್ಕೃತಿಕ ಕಣಜವಿದೆ. ವ್ಯಾಪಾರ-ವಿನಿಮಯ ಆಗಬೇಕು. ಎಲ್ಲಾ ಜಿಲ್ಲೆಗಳನ್ನು ಎರಡು ಜಿಲ್ಲೆಯಾಗಿ ಜೋಡಿಸಬೇಕಿದೆ. ಕೃಷಿಕರು-ಕಾರ್ಪೋರೇಟರ್ ಒಂದಾಗಿ ಸಾಗಬೇಕು. ಕನ್ನಡದ ಅಭಿವೃದ್ಧಿಯಲ್ಲಿ ನಾವೆಲ್ಲರೂ ಬದ್ಧರಾಗೋಣ. ಮಗುವಿಗೆ ಕನ್ನಡವನ್ನು ತಾಯಿ ಕಲಿಸಬೇಕು. ಮನುಜ ಮತ ವಿಶ್ವ ಪಥ ಎಲ್ಲೆಡೆ ಪರಿಸಬೇಕು. ಶಾಂತಿಮಂತ್ರವನ್ನು ನಾವೆಲ್ಲರೂ ಮಾಡೋಣ ಎಂದರು.
9ನೇ ಬಾರಿ ಯದುವೀರ್ ಖಾಸಗಿ ದರ್ಬಾರ್
ದಸರಾ ಮಹೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಇತ್ತ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರು ನಡೆಸಿದರು. ಪತ್ನಿ ತ್ರಿಷಿಕಾ ಕುಮಾರಿ, ಮಗ ಆದ್ಯವೀರ್ ಜತೆಗೂಡಿ ಸಂಪ್ರದಾಯದಂತೆ ಕಂಕಣ ತೊಡಿಸಿದರು. ಬಳಿಕ ಪಾದಪೂಜೆ ನಡೆಯಲಿದೆ. ನಂತರ ಸಿಂಹಾಸನದಲ್ಲಿ ಯದುವೀರ್ ವಿರಾಜಮಾನರಾಗಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಬಿಗಿ ಪೊಲೀಸ್ ಭದ್ರತೆ
ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಹಮ್ಮಿಕೊಳ್ಳಲಾಗಿತ್ತು. 10 ದಿನಗಳ ಭದ್ರತೆಗಾಗಿ 7 ಸಾವಿರ ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸ್ಥಳೀಯವಾಗಿ 2,500 ಮಂದಿ ಪೊಲೀಸರ ನಿಯೋಜನೆಯೊಂದಿಗೆ ನೆರೆ ಜಿಲ್ಲೆಗಳಿಂದ 4,500 ಮಂದಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಒಟ್ಟು 7 ಸಾವಿರ ಮಂದಿ ಪೊಲೀಸರು ದಸರಾ ಭದ್ರತೆಗೆ ಕಾರ್ಯ ನಿರ್ವಹಿಸಲಿದ್ದಾರೆ.
ಮೊದಲ ದಿನ ಏನೆಲ್ಲಾ ಉದ್ಘಾಟನೆ?
ಕಲಾಮಂದಿರದಲ್ಲಿ ದಸರಾ ಚಲನ ಚಿತ್ರೋತ್ಸವ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮೈದಾನದಲ್ಲಿ ಆಹಾರ ಮೇಳ, ಕುಪ್ಪಣ್ಣ ಪಾರ್ಕ್ನಲ್ಲಿ ಫಲಪುಷ್ಪ ಪ್ರದರ್ಶನ, ಸೆನೆಟ್ ಭವನದಲ್ಲಿ ಯೋಗ ದಸರಾ, ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ, ಸಯ್ಯಾಜಿರಾವ್ ರಸ್ತೆ ಬಳಿ ವಿದ್ಯುತ್ ದೀಪಾಲಂಕಾರ, ವಸ್ತು ಪ್ರದರ್ಶನ, ಅಖಿಲ ಭಾರತ ಹಾಗೂ ರಾಜ್ಯಮಟ್ಟದ ಚಿತ್ರ ಶಿಲ್ಪ ಕಲಾ ದರ್ಶನಕ್ಕೆ ಚಾಲನೆ ಸಿಗಲಿದೆ. ಅರಮನೆ ಆವರಣದಲ್ಲಿ ಸಂಜೆ 7 ಗಂಟೆಗೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಜನಮನ್ನಣೆಗಳಿಸಿರುವ ಡಾ.ಪದ್ಮಮೂರ್ತಿ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications