ಮೈಸೂರು ದಸರಾ 2023: ಕನ್ನಡ ನಾಡು ನುಡಿಯ ವೈಭವಕ್ಕೆ ಸಾಕ್ಷಿಯಾದ ಯುವ ಸಂಭ್ರಮ
ಮೈಸೂರು, ಅಕ್ಟೋಬರ್ 08: ಪಡುವಣ ದಿಕ್ಕಿನಲ್ಲಿ ಸೂರ್ಯ ಮುಳುಗುತಿದ್ದಂತೆ, ಪಕ್ಷಿಗಳ ಶಬ್ಧದ ಕಲರವ ಕಡಿಮೆಯಾದ ಕ್ಷಣವೇ ಆಕಾಶವೇ ನಾಚುವಂತೆ ಬೆಳಕಿನ ಚಿತ್ತಾರದಲ್ಲಿ ಕನ್ನಡ ನಾಡು ನುಡಿಯ ವೈಭವವನ್ನು ಕಣ್ಣಿಗೆ ಕಟ್ಟುವಂತೆ ನೃತ್ಯದ ಮೂಲಕ ಪ್ರದರ್ಶಿಸಿದ ಕ್ಷಣವೇ ಗುಡುಗು ಸಿಡಿಲಿಗು ಸೆಡ್ಡು ಒಡೆಯುವಂತಹ ಚಪ್ಪಾಳೆ ಶಿಳ್ಳೆಗಳ ಸುರಿಮಳೆ ನಡುವೆ ಯುವ ಸಮೂಹವು ಮಿಂದೆದದ್ದರು.
ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಮೈಸೂರು ದಸರಾ ಮಹೋತ್ಸದ ಪ್ರಮುಖ ಆಕರ್ಷಣೆಯಾದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಕಂಡುಬಂದಂತಹ ದೃಶ್ಯ. ಹೆಚ್.ಡಿ.ಕೋಟೆಯ ಸೆಂಟ್ ಮೆರಿಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ತಿಳಿಸುವಂತಹ ದರ್ಶನ್ ಅಭಿನಯದ ಕ್ರಾಂತಿ ಚಿತ್ರದ ಧರಣಿ ಮಂಡಲ ಮಧ್ಯದೊಳಗೆ ಚಿತ್ರದ ಗೀತೆಗೆ ಹೆಜ್ಜೆ ಹಾಕುವ ಮೂಲಕ ನೋಡುಗರನ್ನು ರಂಜಿಸಿದರು.

ರಾಮನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಭಾವೈಕ್ಯತೆಯನ್ನು ಸಾರುವಂತಹ ಸಂಗೀತಕ್ಕೆ ನರ್ತಿಸುವ ಮೂಲಕ ಭಾರತವು ವಿವಿಧತೆಯಲ್ಲಿ ಏಕತೆ ಇದೆ ಎಂಬುದನ್ನು ಪ್ರದರ್ಶಿಸಿದರು.
ಮಹಿಳಾ ಸಬಲೀಕರದ ಬಗ್ಗೆ ಸುಂದರವಾಗಿ ತಿಳಿಸುವ ಸಲುವಾಗಿ ರಾಮನಗರದ ಭಾರತೀಯ ಸಂಸ್ಕೃತಿ ವಿದ್ಯಾಪೀಠದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಕಿಚ್ಚ ಸುದೀಪ್ ಹಾಗೂ ರಮ್ಯ ಅಭಿನಯದ ಜಸ್ಟ್ ಜಸ್ಟ್ ಮಾತ್ ಮಾತಲಿ ಚಿತ್ರದ ಎಲ್ಲೊ ಜಿನುಗಿರುವ ನೀರು ಎಂಬ ಹಾಡಿಗೆ ಹಾಗೂ ರಘು ದೀಕ್ಷಿತ್ ಹಾಡಿರುವ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸಭಿಕರ ಗಮನ ಸೆಳೆದರು.

ದೇಶದ ಬೆನ್ನೆಲುಬಾಗರಿವ ರೈತರ ಬಗ್ಗೆ ಹಾಗೂ ಅವರ ಕಷ್ಟಗಳ ಬಗ್ಗೆ ವಿಷ್ಣುವರ್ಧನ್ ಅಭಿನಯದ ನಿನೆಲ್ಲೋ ನಾ ಅಲ್ಲೆ ಚಿತ್ರದ ಆಕಾಶ ಭೂಮಿ ಮಡಿಲಲ್ಲಿ ಬೆಳೆದ ಹಾಡಿಗೆ ಹೆಜ್ಜೆ ಹಾಕುವ ಮೂಲಕ ನೋಡುಗರಿಗೆ ಮನ ಮುಟ್ಟುವಂತೆ ರೈತರ ಕಷ್ಟಗಳ ಬಗ್ಗೆ ಪಾಂಡವಪುರದ ಜ್ಞಾನಬಂಧು ವಿದ್ಯಾಲಯದ ಹಾಗೂ ಹುಣಸೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅರಿವು ಮೂಡಿಸಿದರು.
ದೇಶದ ಗಡಿ ಕಾಯುವ ಸೈನಿಕರ ದೇಶ ಪ್ರೇಮದ ಬಗ್ಗೆ ತಿಳಿಸುವ ಸಲುವಾಗಿ ವಿವಿಧ ಚಿತ್ರದ ದೇಶ ಪ್ರೇಮವನ್ನು ಮೂಡಿಸುವ ಚಿತ್ರಗೀತೆಗಳಿಗೆ ಹೆಜ್ಜೆ ಹಾಕುವ ಮೂಲಕ ನೆರೆದಿದ್ದಂತಹ ಜನರನ್ನು ಮನರಂಜಿಸಿದರು. ಮೈಸೂರಿನ ಕರ್ಣಾಮಯಿ ಫೌಂಡೇಶ್ ನನ ವಿಶೇಷ ಮಕ್ಕಳ ತರಬೇತಿ ಶಾಲೆಯ ವಿಶೇಷ ಮಕ್ಕಳು ಕಾಂತರ ಚಿತ್ರಗೀತೆ ವರಾಹ ರೂಪಂ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ಇತರರು ಹಾಜರಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications