ಸರ್ಕಾರದಿಂದ ಮಹಿಷಾ ದಸರಾ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು, ಅಕ್ಟೋಬರ್, 07: ನಾವು ಹಿಂದೆಯೂ ಮಹಿಷ ದಸರಾ ಮಾಡಿಲ್ಲ ಈಗಲೂ ಸರ್ಕಾರದ ವತಿಯಿಂದ ಮಹಿಷ ದಸರಾ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಯಾರೋ ಹಿಂದಿನಿಂದ ಮಹಿಷ ದಸರಾವನ್ನು ಮೈಸೂರಿನಲ್ಲಿ ಮಾಡುತ್ತಿದ್ದಾರೆ. ಆದರೆ, ಚಾಮುಂಡಿ ಬೆಟ್ಟದಲ್ಲಿ ಏಂದೂ ಮಾಡಿಲ್ಲ. ಈಗ ಆ ವಿಚಾರದಲ್ಲಿ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದರು.

ಹೊಸ ಬಾರ್ ಲೈಸನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಡಿ.ಕೆ.ಶಿವಕುಮಾರ್ ಅವರು ಎಲ್ಲೂ ಕೂಡ ಹೊಸ ಲೈಸನ್ಸ್ ಕೊಡುತ್ತೇವೆ ಅಂತಾ ಹೇಳಿಲ್ಲ. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ಜನರ ಭಾವನೆಗಳನ್ನು ಕೇಳಬೇಕು, ಗೌರವಿಸಬೇಕು. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಹೊಸ ಲೈಸನ್ಸ್ಗಳು ಯಾವುದು ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಈ ವಿಚಾರದಲ್ಲಿ ಯಾವ ಪ್ರತಿಕ್ರಿಯೆಯನ್ನು ನೀಡಲ್ಲ ಎಂದು ಲಿಂಗಾಯತ ಹೇಳಿಕೆಯಿಂದ ದೂರ ಉಳಿದರು. ಇನ್ನು ಕೇಂದ್ರದಿಂದ ಬರ ಅಧ್ಯಯನ ವಿಚಾರದ ಬಗ್ಗೆ ಮಾತನಾಡಿದ ಅವರು, ಎಲ್ಲಾ ಹಳ್ಳಿಯ ಜನರನ್ನು ಖುದ್ದಾಗಿ ಭೇಟಿ ಮಾಡಿ ಸಮಸ್ಯೆ ಆಲಿಸಿ ಎಂದು ಕೇಂದ್ರದ ತಂಡಕ್ಕೆ ಕೇಳಿಕೊಂಡಿದ್ದೇನೆ ಎಂದರು.
ಬರ ಪ್ರವಾಸದ ಪ್ಲಾನ್ ಕೇಂದ್ರದ ತಂಡದವರೇ ಮಾಡಿಕೊಂಡಿದ್ದಾರೆ. ಆ ಕಡೆ ಹೋಗಿ ಈ ಕಡೆ ಬನ್ನಿ ಅಂತಾ ನಾವು ನಿರ್ಧರಿಸಲು ಸಾಧ್ಯವಿಲ್ಲ. ಹೊಲದಲ್ಲಿ ಹಸಿರು ಇದ್ದ ಕಾರಣಕ್ಕೆ ಅದು ಫಲ ಎಂಬ ಅರ್ಥವಲ್ಲ. ಬೆಳೆ ಬರಬೇಕು. ಹೀಗಾಗಿ ಹಸಿರನ್ನು ನೋಡಿ ತೀರ್ಮಾನ ಮಾಡಬಾರದು ಎಂದರು.
ನಾವು 4500 ಕೋಟಿ ಬರ ಪರಿಹಾರ ಕೇಳಿದ್ದೇವೆ. ಕೇಂದ್ರ ತಂಡ ಇಲ್ಲಿಂದ ಹೋಗಿ ವರದಿ ಕೊಡುತ್ತದೆ. ನಂತರ ಅಧ್ಯಯನದ ವರದಿ ಬರುತ್ತದೆ. ಬರಕ್ಕೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧವಿಲ್ಲ. ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿಗಳು ಎಂದಿನಂತೆ ಮುಂದುವರೆಯುತ್ತವೆ ಎಂದರು.
ನವೆಂಬರ್ನಲ್ಲಿ ಕರ್ನಾಟಕದ ಜಾತಿಗಣತಿ ವರದಿ ನನ್ನ ಕೈ ಸೇರಬಹುದು. ಆನಂತರ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ. ಸಮಿತಿಯ ಅಧ್ಯಕ್ಷರು ಬದಲಾಗಿದ್ದಾರೆ. ಹೀಗಾಗಿ ನವೆಂಬರ್ನಲ್ಲಿ ವರದಿ ಕೊಡುತ್ತಾರೆ. ಜಾತಿಗಣತಿ ಸಮಾಜವನ್ನು ವಿಂಗಡಿಸುವುದಿಲ್ಲ. ಯಾವ ಸಮುದಾಯ ಎಷ್ಟಿದೆ ಎಂಬುದು ಅಂಕಿಅಂಶಗಳು ಸರ್ಕಾರಕ್ಕೆ ಬೇಕು. ಯೋಜನೆಗಳ ಸರಿಪಡಿಸಲು ಈ ಯೋಜನೆಗಳು ಅವಶ್ಯ ಎಂದರು.
ಜಾತಿಗಣತಿಗೆ ಪ್ರಧಾನಿ ವಿರೋಧಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಬಾಯಲ್ಲಿ ಮಾತ್ರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅನ್ನುತ್ತಾರೆ. ಆದರೆ ಅವರ ನಡೆನುಡಿಗೆ ಬಹಳ ವ್ಯತ್ಯಾಸಗಳಿವೆ. ಹೀಗಾಗಿ ಜಾತಿ ಗಣತಿ ವಿರೋಧಿಸುತ್ತಾರೆ ಎಂದು ತಿಳಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications