Mysuru Dasara 2023: ರಘು ದೀಕ್ಷಿತ್, ಸಂಜಿತ್ ಹೆಗ್ಡೆ ಗಾಯನಕ್ಕೆ ಕುಣಿದು ಕುಪ್ಪಳಿಸಿದ ಯುವ ಸಮೂಹ
ಮೈಸೂರು, ಅಕ್ಟೋಬರ್ 20: ಯುವ ದಸರಾದ ಎರಡನೇ ದಿನ ಸ್ಯಾಂಡಲ್ವುಡ್ನ ಖ್ಯಾತ ಗಾಯಕ ರಘು ದೀಕ್ಷಿತ್ ಮತ್ತು ಯುವ ಗಾಯಕ ಸಂಜಿತ್ ಹೆಗ್ಡೆ ತಮ್ಮ ಸಂಗೀತ ಸುಧೆಯ ಮೂಲಕ ನೆರೆದಿದ್ದ ಯುವ ಸಮೂಹವನ್ನು ರಂಜಿಸಿದರು.
ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಉಪಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಸಮೂಹ ಸಂಭ್ರಮಿಸಿತು. ಮೊದಲ ದಿನ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಯುವ ಸಮೂಹಕ್ಕೆ ಕಿಚ್ಚು ಹಚ್ಚಿಸಿದಂತೆ ಎರಡನೇ ದಿನ ರಘು ದೀಕ್ಷಿತ್ ತಮ್ಮ ಅದ್ಭುತ ಗಾಯನದ ಮೂಲಕ ನೆರೆದಿದ್ದ ಪ್ರೇಕ್ಷಕರ ಮನಗೆದ್ದರು.

ನಮಸ್ಕಾರ ಮೈಸೂರು ಎನ್ನುತ್ತಲೇ ರಘು ದೀಕ್ಷಿತ್ ವೇದಿಕೆ ಏರುತ್ತಿದ್ದಂತೆ ಸಭಿಕರು ಶಿಳ್ಳೆ, ಚಪ್ಪಾಳೆ ಮಾಡಿ ಸ್ವಾಗತಿಸಿದರು. ರಘು ದೀಕ್ಷಿತ್ ಹಾಡಿಗೆ ಯುವಕರು ಕೂಡ ಕೋರಸ್ ಹಾಡಿದರು. 'ಲೋಕದ ಕಾಳಜಿ ಮಾಡತ್ತಿ ಯಾಕ...' ಎನ್ನುತ್ತಿದ್ದಂತೆ ಸಭಿಕರು ಹುಚ್ಚೆದ್ದು ಕುಣಿದರು. ಇಡೀ ಗೀತೆ ಮುಗಿಯುವರೆಗೂ ಕಾಲೇಜು ವಿದ್ಯಾರ್ಥಿಗಳು ಹೆಜ್ಜೆ ಹಾಕುತ್ತಲೇ ಇದ್ದರು.
ನಂತರ 'ಜಸ್ಟ್ ಮಾತ್ ಮಾತಲ್ಲಿ' ಸಿನಿಮಾದ ಮುಂಜಾನೆ ಮಂಜಲ್ಲಿ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿ ಹೊಸ ಲೋಕವನ್ನೇ ಸೃಷ್ಟಿಸಿದರು. 'ಗುಡಿ ಗುಡಿಯಾ ಸೇದಿ ನೋಡೋ' ಹಾಗೂ ಕೋಡಗನಾ ಕೋಳಿ ನುಂಗಿತ್ತಾ ಗೀತೆಗೆ ವೇದಿಕೆ ಹಿಂಭಾಗದ ಇದ್ದ ಯುವಕರು ಒನ್ಸ್ ಮೋರ್ ಎನ್ನುತ್ತಾ ಸಂಭ್ರಮಿಸಿದರು.

ಸಂಜಿತ್ ಹೆಗ್ಡೆ ಗಾಯನಕ್ಕೆ ಪ್ರೇಕ್ಷಕರು ಫಿದಾ
ಇದಕ್ಕೂ ಮುನ್ನ ಸಂಜಿತ್ ಹೆಗ್ಡೆ 'ಜೇಮ್ಸ್ ಸಿನಿಮಾದ ಜೈಯೋ' ಗೀತೆಯನ್ನು ಹಾಡುತ್ತಿದ್ದಂತೆ ನೆರೆದಿದ್ದ ಪ್ರೇಕ್ಷಕರಲ್ಲಿ ಜೋಶ್ ತುಂಬಿತು. 'ತಾಯಿ ತಕ್ಕ ಮಗ' ಸಿನಿಮಾದ 'ಮರಳಿ ಮನಸಾಗಿದೆ ನಿನ್ನ ಹೃದಯಕ್ಕೆ' ಹಾಡು ಹಾಡುತ್ತಿದ್ದಂತೆ ಯುವಕರು ಕೋರಸ್ ಕೊಟ್ಟರು. 'ಮಳೆಯೇ ಮಳೆಯೇ' ಗಾಯನವಂತೂ ಯುವಜನರ ಮನವು ಪ್ರೀತಿಯಲ್ಲಿ ತೇಲುವಂತೆ ಮಾಡಿತು.
ನಡುವೆ ಅಂತರವಿರಲಿ ಸಿನಿಮಾದ 'ಶಾಕುಂತ್ಲೆ ಸಿಕ್ಕಳು ಸುಮ್ಸುಮ್ನೆ ನಕ್ಕಳು' ಗೀತೆ ಹಾಡುತ್ತಿದ್ದಂತೆ ಯುವಪಡೆ ಜೋರಾಗಿ ಸ್ಯಾಂಡ್ ಕೊಟ್ಟು, ತಾವು ಸಹ ಈ ಗೀತೆಯನ್ನು ಹಾಡುವುದರ ಮೂಲಕ ಸಂಜಿತ್ ಹೆಗಡೆ ಅವರಿಗೆ ಸಾಥ್ ಕೊಟ್ಟರು. 'ಜಂಟಲ್ ಮನ್' ಸಿನಿಮಾದ 'ಬೆಳಕಿನ ಕವಿತೆ' ಹಾಡು ಹಾಡುತ್ತಿದ್ದಂತೆ ಯುವ ಜನರು ಜೋರಾಗಿ ಕೂಗಿ ಸಂಭ್ರಮಿಸಿದರು.
ಅದೇ ರೀತಿ 'ಹಾಯಾಗಿದೆ ಎದೆಯೊಳಗೆ' ಗೀತೆಯಂತೂ ಯುವಕರ ಎದೆಯಲ್ಲಿ ಪ್ರೇಮ ಕಾವ್ಯ ಬರೆಯಿತು. 'ಅಲೆ ಮಾರಿಯಾ', 'ಘಾಟಿಯಾ ಹಿಡಿದು' ಹಾಡುಹಾಡುತ್ತಿದ್ದಂತೆ ಪ್ರೇಕ್ಷಕರು ಕುಳಿತಲ್ಲೇ ಹೆಜ್ಜೆ ಹಾಕಿದ್ದರು. 'ಸಲಗ ಸಿನಿಮಾದ ಟೈಟಲ್ ಸಾಂಗ್ ಅನ್ನು ಹಾಡಿ ರಂಜಿಸಿದರು. ಇದಕ್ಕೆ ಯುವ ಪಡೆ ತಮ್ಮ ಮೊಬೈಲ್ನಲ್ಲಿ ಫ್ಲಾಶ್ ಲೈಟ್ ಆನ್ ಮಾಡಿ ಯುವ ಸಂಭ್ರಮದಲ್ಲಿ ಸೇರಿದ ಯುವ ಜನತೆ ಸಂಭ್ರಮಿಸಿದರು.
ಜೊತೆಯಲ್ಲಿ ಸ್ಯಾಂಡಲ್ವುಡ್ನ ವಿವಿಧ ಕಲಾವಿದರು ಕಾರ್ಯಕ್ರಮದಲ್ಲಿ ಜೊತೆಗೂಡಿ ಮೈಸೂರು ಜನತೆಯನ್ನು ರಂಜಿಸಿ ನಾಡಹಬ್ಬ ಮೈಸೂರು ದಸರಾ ಶುಭಾಶಯ ಕೋರಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications