Dasara Gold Card 2024: ಮೈಸೂರು ದಸರಾ ಗೋಲ್ಡ್ ಕಾರ್ಡ್, ಟಿಕೆಟ್: ದರ, ಸೌಲಭ್ಯ ಮಾಹಿತಿ
ಮೈಸೂರು, ಸೆಪ್ಟೆಂಬರ್ 25: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವ-2024ಕ್ಕೆ ತಯಾರಾಗುತ್ತಿದೆ. ಮೈಸೂರು ದಸರಾ ವೀಕ್ಷಣೆ ಮಾಡಲು ದೇಶ-ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ಮೈಸೂರು ಜಿಲ್ಲಾಡಳಿತ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡುತ್ತದೆ. 2024ನೇ ಸಾಲಿನ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಲಾಗಿದೆ, ಇದರಲ್ಲಿ ಸಿಗುವ ಸೌಲಭ್ಯಗಳ ಮಾಹಿತಿ ನೀಡಲಾಗಿದೆ.
ಈ ಬಾರಿಯ ಮೈಸೂರು ದಸರಾ ಅಕ್ಟೋಬರ್ 3ರ ಗುರುವಾರ ರಿಂದ ಅಕ್ಟೋಬರ್ 12ರ ಶನಿವಾರದ ತನಕ ನಡೆಯಲಿದೆ. ಖ್ಯಾತ ಸಾಹಿತಿ ಹಂಪಾ ನಾಗರಾಜಯ್ಯ ಅಕ್ಟೋಬರ್ 3ರ ಬೆಳಗ್ಗೆ 9 ಗಂಟೆಗೆ ಮೈಸೂರು ದಸರಾ-2024 ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 12ರಂದು ಐತಿಹಾಸಿಕ ಜಂಬೂ ಸವಾರಿ ಮತ್ತು ಪಂಜಿನ ಕವಾಯತು ನಡೆಯಲಿದೆ.

ಮೈಸೂರು ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮೈಸೂರು ಜಿಲ್ಲೆ ದಸರಾ ಗೋಲ್ಡ್ ಕಾರ್ಡ್-2024 ಬಿಡುಗಡೆ ಮಾಡಿದ್ದಾರೆ. ನಾಡಹಬ್ಬ ಮೈಸೂರು ದಸರಾ-2024ರ ಜಂಬೂಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗೆ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ಗಳ ಮಾರಾಟದ ಬಗ್ಗೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2024 ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮೈಸೂರು ದಸರಾ-2024ರ ಸಂಬಂಧ ದಿನಾಂಕ 12.10.2024ರಂದು ನಡೆಯಲಿರುವ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ಗಳನ್ನು ಆನ್ಲೈನ್ ಮುಖಾಂತರ ಮಾರಾಟ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ದಸರಾ ಕಾರ್ಯಕ್ರಮಗಳ ವೀಕ್ಷಣೆಗೆ ಮೈಸೂ ದಸರಾ-2024ರ ಅಧಿಕೃತ ಜಾಲತಾಣ https://www.mysoredasara.gov.in/ ರಲ್ಲಿ ದಿನಾಂಕ 26.09.2024 ರಿಂದ 30.09.2024ರ ವರೆಗೆ 5 ದಿನಗಳ ಕಾಲ ಆನ್ಲೈನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಸಾರ್ವಜನಿಕರು ಸೌಲಭ್ಯದ ಸದುಪಯೋಗ ಪಡೆದುಕೊಂಡು ಟಿಕೆಟ್ಗಳನ್ನು ಖರೀದಿಸಬಹುದಾಗಿರುತ್ತದೆ.
ಟಿಕೆಟ್ಗಳ ದರ ಹಾಗೂ ಸೌಲಭ್ಯ ವಿವರ
* ಟಿಕೆಟ್ ಮಾರಾಟ ಪ್ರಾರಂಭದ ದಿನಾಂಕ 26.09.2024
* ಟಿಕೆಟ್ಗಳನ್ನು ಮೈಸೂರು ದಸರಾ-2024ರ ಅಧಿಕೃತ ಜಾಲ ತಾಣ https://www.mysoredasara.gov.in/ ಮೂಲಕ ಖರೀದಿಸಿ
* ಅರಮನೆ ಆವರಣದೊಳಗೆ ಜಂಬೂ ಸವಾರಿ ವೀಕ್ಷಣೆಗೆ ಟಿಕೆಟ್ ಮೊತ್ತ ರೂಪಾಯಿ 3,500 ಒಬ್ಬರಿಗೆ (ಜಂಬೂ ಸವಾರಿ ವೀಕ್ಷಣೆಗೆ ಮಾತ್ರ ಅವಕಾಶ)
* ಪಂಜಿನ ಕವಾಯತು ಟಿಕೆಟ್ ಮೊತ್ತ 1000 ರೂ. (ಒಬ್ಬರಿಗೆ)
* ಗೋಲ್ಡ್ ಕಾರ್ಡ್ ಮೊತ್ತ 6,500 ರೂ. (ಒಬ್ಬರಿಗೆ)
* ಗೋಲ್ಡ್ ಕಾರ್ಡ್ ಹೊಂದಿರುವವರಿಗೆ ಜಂಬೂಸವಾರಿ, ಪಂಜಿನ ಕವಾಯತು, ಚಾಮುಂಡಿ ಬೆಟ್ಟ, ಚಾಮರಾಜೇಂದ್ರ ಮೃಗಾಲಯ, ಅರಮನೆಗೆ ವೀಕ್ಷಣೆಗೆ ಮಾತ್ರ ಅವಕಾಶ.
* ಒಂದು ಗೋಲ್ಡ್ ಕಾರ್ಡ್/ ಟಿಕೆಟ್ನಲ್ಲಿ ಒಬ್ಬರಿಗೆ ಮಾತ್ರ ಪ್ರವೇಶಾವಕಾಶ ಇರುತ್ತದೆ.
2023ರಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ಬರಗಾಲವಿತ್ತು. ಆದ್ದರಿಂದ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಉತ್ತಮ ಮಳೆಯಾಗಿ ಎಲ್ಲಾ ಡ್ಯಾಂಗಳು ಭರ್ತಿಯಾಗಿದ್ದು, ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ಮೈಸೂರು ನಗರದ ದೀಪಾಲಂಕಾರ ದಸರಾ ಸಂದರ್ಭದಲ್ಲಿ ಗಮನ ಸೆಳೆಯುತ್ತದೆ. ಜಂಬೂ ಸವಾರಿ ಮುಕ್ತಾಯಗೊಂಡ ಬಳಿಕವೂ ದೀಪಾಲಂಕಾರವನ್ನು ನೋಡಲು ಈ ಬಾರಿಯೂ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications