ಜಂಬೂಸವಾರಿಯಲ್ಲಿ ಕಲಾವಿದರ ಕಡೆಗಣನೆ: ಜಾನಪದ ಕಲಾವಿದರ ಸಂಭಾವನೆ ಇಷ್ಟೊಂದು ಕಮ್ಮಿನಾ..?
ಮೈಸೂರು, ಸೆಪ್ಟೆಂಬರ್ 26: ಪ್ರತಿ ಬಾರಿ ದಸರಾ ಮಹೋತ್ಸವ ವೇಳೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಜಾನಪದ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ. ಈ ಬಾರಿಯಾದರೂ ಕಲಾವಿದರಿಗೆ ಸೂಕ್ತ ಸೌಲಭ್ಯ ಒದಗಿಸಬೇಕೆಂದು ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಜಾನಪದ ಕಲಾವಿದರ ಒಕ್ಕೂಟ ಮನವಿ ಮಾಡಿದೆ.
ಒಕ್ಕೂಟದ ಅಧ್ಯಕ್ಷ ಉಡಿಗಾಲ ಮಹದೇವಪ್ಪ ಅವರು ಪ್ರತಿ ಬಾರಿಯೂ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ. ಈ ಬಾರಿಯೂ ಸಲಹೆ, ಸೂಚನೆ ಸಭೆಗೆ ಕಲಾವಿದರನ್ನು ಆಹ್ವಾನಿಸಿಲ್ಲ. ನೀಡುವ ಸಂಭಾವನೆಯೂ ಕಡಿಮೆ, ಜೊತೆಗೆ ಉಳಿದುಕೊಳ್ಳುವ ಚೌಲ್ಟ್ರಿಗಳಲ್ಲಿ ಸೂಕ್ತ ಶೌಚಾಲಯ, ಊಟ ತಿಂಡಿ ಮೊದಲಾದ ವ್ಯವಸ್ಥೆ ಇರುವುದಿಲ್ಲ. ಹೀಗಾಗಿ ಈ ಬಾರಿಯ ದಸರಾ ವೇಳೆಯಲ್ಲಾದರೂ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಹಾಗೂ ಪೊಲೀಸ್ ಆಯುಕ್ತರು ಗಮನ ಹರಿಸಬೇಕು ಎಂದು ಹೇಳಿದ್ದಾರೆ.

ಓರ್ವ ಕೂಲಿ ಕಾರ್ಮಿಕ ಸಹಾ ನಿತ್ಯ ಒಂದೂವರೆ ಸಾವಿರ ಗಳಿಸುತ್ತಾನೆ. ಆದರೆ, ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಜಾನಪದ ಕಲಾವಿದರಿಗೆ ಎರಡು ದಿನಕ್ಕೆ ಕೇವಲ 1750 ರೂಪಾಯಿ ನೀಡಲಾಗುತ್ತಿದೆ. ನಮಗೆ ವೇಷ ಭೂಷಣ, ಜಾನಪದ ಸಾಮಗ್ರಿ ಹೊತ್ತು ಬಾಡಿಗೆ ವಾಹನದಲ್ಲಿ ಬರುವ ವೆಚ್ಚವೇ ಅಧಿಕವಾಗಿರುತ್ತದೆ. ಹೀಗಾಗಿ ಕನಿಷ್ಠ ತಲಾ ಐದು ಸಾವಿರ ರೂಪಾಯಿ ನೀಡಬೇಕು.
ಸಿಎಂ ಈ ಬಾರಿ ದಸರಾ ವೆಚ್ಚಕ್ಕಾಗಿ ಹತ್ತು ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಿದ್ದಾರೆ. ಹೀಗಾಗಿ ತಲಾ ಐದು ಸಾವಿರ ರೂಪಾಯಿ ನೀಡುವುದರಿಂದ ಕೇವಲ 35 ಲಕ್ಷ ಮಾತ್ರ ವೆಚ್ಚವಾಗುತ್ತದೆ. ಹಾಡುವ ಕಲಾವಿದರಿಗೆ ಲಕ್ಷಾಂತರ ರೂಪಾಯಿ ನೀಡಿ ಕರೆಸಿಕೊಳ್ಳುವವರು ಜಾನಪದ ಕಲಾವಿದರ ಬಗ್ಗೆ ತಾರತಮ್ಯ ತೋರುವುದು ಏಕೆ ಎಂದು ಜಾನಪದ ಕಲಾವಿದರ ಒಕ್ಕೂಟ ಪ್ರಶ್ನಿಸಿದ್ದಾರೆ.
ದಸರಾ ಉಪ ಸಮಿತಿಗಳಲ್ಲಿ ಕಲಾವಿದರೇ ಇರುವುದಿಲ್ಲ. ಎಲ್ಲ ಅಧಿಕಾರಿಗಳ ದರ್ಬಾರ್ ಆಗಿರುತ್ತದೆ. ಹೀಗಾದರೆ ನಮ್ಮ ಸಂಕಷ್ಟ ಕೇಳುವವರು ಯಾರು, ನಮ್ಮ ಸಮಸ್ಯೆ, ಬೇಡಿಕೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ, ಪೊಲೀಸ್ ಆಯುಕ್ತರು ಗಮನ ಹರಿಸಬೇಕು ಎಂದು ಕೋರಿ ವಿಶೇಷ ಮನವಿ ಮಾಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications