ಮೈಸೂರು ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟ: ಇಲ್ಲಿದೆ ಸಂಪೂರ್ಣ ವಿವರ
ಮೈಸೂರು, ಸೆಪ್ಟೆಂಬರ್ 23: ನಾಡ ಹಬ್ಬ ಮೈಸೂರು ದಸರಾ 2024ಕ್ಕೆ ದಿನ ಗಣನೆ ಆರಂಭವಾಗಿದೆ. ದಸರಾಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ದಸರಾಗೆ ಸಂಬಂಧಿಸಿದ ಕಾರ್ಯಕ್ರಮಗಳು ಕೂಡ ಭರದಿಂದ ಸಾಗುತ್ತಿದೆ. ದಸರಾ ಅಂಗವಾಗಿ ನಡೆಯುವ ಮೈಸೂರು ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟವನ್ನು ಸೆಪ್ಟೆಂಬರ್ 26 ಮತ್ತು ಸೆಪ್ಟೆಂಬರ್ 27ರಂದು ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಮೈಸೂರು ಜಿಲ್ಲೆಯ 9 ತಾಲೂಕುಗಳಲ್ಲಿ ನಡೆದ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ, ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟವನ್ನು ಸೆಪ್ಟೆಂಬರ್ 26 ಮತ್ತು ಸೆಪ್ಟೆಂಬರ್ 27ರಂದು ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿರುವ ಕ್ರೀಡೆಗಳು
ಪುರುಷರಿಗೆ ಅಥ್ಲೆಟಿಕ್ನಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500ಮೀ, 5000 ಮೀ. ಓಟ, 1000ಮೀ ಓಟ, ಉದ್ದ ಜಿಗಿದ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4×100 ಮೀ. ರಿಲೇ, 4×400 ಮೀ.ರಿಲೇ., ಮಹಿಳೆಯರಿಗೆ ಅಥ್ಲೆಟಿಕ್ಸ್ನಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500ಮೀ, 3000 ಮೀ.ಓಟ, ಉದ್ದಜಿಗಿದ, ಎತ್ತರಜಿಗಿತ, ಗುಂಡುಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ, 4×100 ಮೀ. ರಿಲೇ, 4×100 ಮೀ.ರಿಲೇ, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ ಬಾಸ್ಕೆಟ್ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗವನ್ನು ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಆಯ್ಕೆಮಾಡಲಾಗುತ್ತಿರುವ ಕ್ರೀಡೆಗಳ ವಿವರ
ಟೆನ್ನಿಸ್, ನೆಟ್ಬಾಲ್, ಪುರುಷರು ಮತ್ತು ಮಹಿಳೆಯರಿಗೆ ಈಜು 100, 200, 400, ಮೀ. ಫ್ರೀ ಸ್ಟೈಲ್, 100, 200 ಮೀ. ಬ್ಯಾಕ್ ಸ್ಟ್ರೋಕ್, 100, 200ಮೀ. ಬ್ರೆಸ್ಟ್ ಸ್ಟ್ರೋಕ್, 100 ಮೀ. ಬಟರ್ ಫ್ಲೈ, 200 ಮೀ. ಇಂಡಿವಿಜಯಲ್ ಮಿಡ್ಲೆ, 4×100 ಮೀ. ಫ್ರೀ ಸ್ಟೈಲ್ ರಿಲೇ ಅನ್ನು ಏರ್ಪಡಿಸಲಾಗಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುವ ಕ್ರೀಡಾಪಟುಗಳು ಸೆಪ್ಟೆಂಬರ್ 26 ರಂದು ಬೆಳಗ್ಗೆ 9 ಗಂಟೆಗೆ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಕ್ರೀಡಾಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಜಿಲ್ಲಾ ಮಟ್ಟದ ದಸರಾ ಕ್ರೀಡಾ ಸಿ.ಎಂ.ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಾತ್ರ ಪ್ರಮಾಣ ಭತ್ಯೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಅಥವಾ ದೂ.ಸಂ.0821-2564179 ಸಂಪರ್ಕಿಸಬಹುದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications