ದಸರಾ ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿಯಲ್ಲಿ ಭಾಗಿಯಾಗಲು ಅವಕಾಶ: ಈಗಲೇ ಅರ್ಜಿ ಸಲ್ಲಿಸಿ!
ಮೈಸೂರು, ಸೆಪ್ಟೆಂಬರ್ 07: ಮೈಸೂರು ದಸರಾ ಅಂದರೆ ಸಂಸ್ಕೃತಿ ಪರಂಪರೆಯನ್ನು ಮೇಳೈಸುವ ಸಡಗರವನ್ನು ಸಂಭ್ರಮಿಸುವ ಕಲೆ ಸಾಹಿತ್ಯವನ್ನು ಪ್ರೋತ್ಸಾಹಿಸುವ ಫಲಪುಷ್ಪ ಪ್ರದರ್ಶನಕ್ಕೆ ಆದ್ಯತೆ ನೀಡುವ ವೇದಿಕೆಯಾಗಿದೆ. ಹೀಗಾಗಿ ದಸರಾದಲ್ಲಿ ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದಸರಾಕ್ಕೆ ಫಲಪುಷ್ಪ ಪ್ರದರ್ಶನ ಹೊಸ ಮೆರಗು ನೀಡುತ್ತದೆ. ನಗರದ ಕರ್ಜನ್ ಪಾರ್ಕ್ ನಲ್ಲಿ ದಸರಾ ಫಲಪ್ರದರ್ಶನ ನಡೆದರೆ ಅದನ್ನು ನೋಡುವುದೇ ಚೆಂದ ಇಷ್ಟೇ ಅಲ್ಲದೆ, ಮನೆಗಳಲ್ಲಿ ಸುಂದರ ಹೂತೋಟಗಳನ್ನು ನಿರ್ಮಿಸುವ ಮೂಲಕ ಮಹಿಳೆಯರು ಮೆರಗು ನೀಡುತ್ತಾರೆ. ಇಂತಹ ಪರಿಸರ ಸ್ನೇಹಿ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಕೈ ತೋಟಗಳ ಸ್ಪರ್ಧೆ ನಡೆಸಲಾಗುತ್ತಿದೆ.

ಇದೀಗ ಫಲಪುಷ್ಪ ಪ್ರದರ್ಶನಕ್ಕೆ ಅವಕಾಶ ನೀಡಿದ್ದು, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ಜನ್ ಪಾರ್ಕ್ ರವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನದ ಭಾಗವಾಗಿ ಮೈಸೂರು ನಗರ ವ್ಯಾಪ್ತಿಯ ಸಾರ್ವಜನಿಕ, ಖಾಸಗಿ ಮನೆ, ಕೈಗಾರಿಕೆ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಆಡಳಿತಾಧಿಕಾರಿ ಕಛೇರಿ, ಆಸ್ಪತ್ರೆ , ಅಪಾರ್ಟ್ ಮೆಂಟ್, ಹೋಟೆಲ್ ಕೈ ತೋಟಗಳು ಸೇರಿದಂತೆ ಇತರೆ ಕೈ ತೋಟಗಳ ಸ್ಪರ್ಧೆಗೆ ಅರ್ಹರಿಂದ ಅರ್ಜಿಗಳನ್ನು ಕರೆಯಲಾಗಿದೆ.
ಸ್ಪರ್ಧೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಕರ್ಜನ್ ಪಾರ್ಕ್ ಆವರಣದಲ್ಲಿರುವ ಜಿಲ್ಲಾ ತೋಟಗಾರಿಕೆ ಸಂಘದ ಕಛೇರಿಯಲ್ಲಿ ಸೆಪ್ಟೆಂಬರ್ 02 ರಿಂದ 20 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಆಸಕ್ತರು ನಿಗದಿತ ಶುಲ್ಕವನ್ನು ಗೂಗಲ್ ಪೇ, ಫೋನ್ ಪೇ, ಚೆಕ್, ಡಿಡಿ ಅಥವಾ ಇನ್ಯಾವುದೇ ರೀತಿಯ ಇ-ಪೇಮೆಂಟ್ ಮೋಡ್ ಮೂಲಕ ಮಾತ್ರ ಶುಲ್ಕ ಪಾವತಿಸಿ ತೋಟಗಳ ಸ್ಪರ್ಧೆಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.

ಸೆಪ್ಟೆಂಬರ್ 25 ರಿಂದ 27 ರವರೆಗೆ ತೀರ್ಪುಗಾರರು ಸಂಘದ ಕಛೇರಿಯಲ್ಲಿ ನೋಂದಾಯಿಸಿಕೊಂಡ ತೋಟಗಳಿಗೆ ಭೇಟಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2977572 ನ್ನು ಸಂಪರ್ಕಿಸಬಹುದು ಎಂದು ಕರ್ಜನ್ ಪಾರ್ಕ್ ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಕವಿಗೋಷ್ಠಿಯಲ್ಲಿ ಕವಿಗಳು ಭಾಗವಹಿಸಿ
ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 05 ರಿಂದ 09 ರವರೆಗೆ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳು ಭಾಗವಹಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಾದೇಶಿಕ ಕವಿಗೋಷ್ಠಿಗೆ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಮಡಿಕೇರಿ ಜಿಲ್ಲೆಗಳ ಕವಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವವರು ಕನಿಷ್ಠ ಒಂದು ಕವನ ಸಂಕಲನ ಪ್ರಕಟಿಸಿರಬೇಕು ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಒಬ್ಬರಂತೆ ಭಾಗವಹಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಕನಿಷ್ಠ ಎರಡು ಕವನ ಸಂಕಲನಗಳನ್ನು ಪ್ರಕಟಿಸಿರಬೇಕು. ಕವಿತೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು.
ಕವಿಗಳು ಅಂಚೆ ಮೂಲಕ ಅರ್ಜಿ ಸಲ್ಲಿಸಿ
ಕಳೆದ ಎರಡು ವರ್ಷಗಳಿಂದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದವರು ತಮ್ಮ ಸ್ವ ವಿವರ ಮತ್ತು ಕವನ ಸಂಕಲನಗಳೊoದಿಗೆ ಅರ್ಜಿಗಳನ್ನು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಿಗೆ ನೇರವಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸೆಪ್ಟಂಬರ್ 12 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9902242703, 6360351727 ಹಾಗೂ ಕವಿಗಳಿಗೆ ಕಾರ್ಯಕ್ರಮಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು ಎಂದು ದಸರಾ ಕವಿಗೋಷ್ಠಿ ಉಪ ಸಮಿತಿಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications