Dasara 2024: ಮೈಸೂರು ದಸರಾದಲ್ಲಿ ಗಮನಸೆಳೆದ ತ್ಯಾಜ್ಯ ನಿರ್ವಹಣಾ ಅಭಿಯಾನ: ಏನಿದರ ವಿಶೇಷ?
ಮೈಸೂರು, ಅಕ್ಟೋಬರ್ 17: ಕೋಕಾ-ಕೋಲಾ ಬಿವರೇಜಸ್ (ಹೆಚ್ಸಿಸಿಬಿ) ಕಂಪನಿಯು ಕೋಕಾ-ಕೋಲಾ ಇಂಡಿಯಾ ಫೌಂಡೇಶನ್ ಆನಂದನ ಸಂಸ್ಥೆ ಹಾಗೂ ಮೈಸೂರು ನಗರಪಾಲಿಕೆಯ ಜೊತೆಗೂಡಿ ಮೈಸೂರು ದಸರಾ ಸಂದರ್ಭದಲ್ಲಿ ಬಿದ್ದಿದ್ದ ಖಾಲಿ ಪಿಇಟಿ ಬಾಟಲಿಗಳನ್ನು ಸಂಗ್ರಹಿಸುವ ಮಹತ್ತರ ಕೆಲಸ ಮಾಡಿ ಗಮನಸೆಳೆದಿದೆ.
ಅಕ್ಟೋಬರ್ 3 ರಿಂದ ಅಕ್ಟೋಬರ್ 12ರವರೆಗೆ ನಡೆದ 10 ದಿನಗಳ ಮೈಸೂರು ದಸರಾ ಕಾರ್ಯಕ್ರಮದಲ್ಲಿ ದೇಶದ ನಾನಾ ಭಾಗದ ಸಾವಿರಾರು ಪ್ರವಾಸಿಗರು ಮತ್ತು ಭಕ್ತರು ಭಾಗವಹಿಸಿದ್ದರು. ಈ ಹಬ್ಬದ ಸಮಯದಲ್ಲಿಯೇ ಹೆಚ್ಸಿಸಿಬಿ ಖಾಲಿ ಪಿಇಟಿ ಬಾಟಲಿಗಳನ್ನು ಸಂಗ್ರಹಿಸುವ ಯೋಜನೆ ಪ್ರಾರಂಭಿಸಿದ್ದು, ಈ ತ್ಯಾಜ್ಯ ನಿರ್ವಹಣಾ ಅಭಿಯಾನದಲ್ಲಿ 30ಕ್ಕೂ ಹೆಚ್ಚು ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಂಡು ಶ್ಲಾಘನೀಯ ಕಾರ್ಯ ಮಾಡಿದ್ದಾರೆ.

ದಸರಾ ಹಬ್ಬದ ಪ್ರಯುಕ್ತ ಕಾರ್ಯಕ್ರಮ ನಡೆಯುವ ಪ್ರಮುಖ ಸ್ಥಳಗಳಾದ ಚಾಮುಂಡಿ ಬೆಟ್ಟ, ಆಹಾರ ಮೇಳ ಮತ್ತು ಇತರ ಪ್ರಧಾನ ಸ್ಥಳಗಳಲ್ಲಿ ಕಸ ಸಂಗ್ರಹಣಾ ತೊಟ್ಟಿಗಳನ್ನು ಇಡಲಾಗಿತ್ತು ಮತ್ತು ರೀಸೈಕ್ಲಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಮೂಲಕ ಖಾಲಿ ಪಿಇಟಿ ಬಾಟಲಿಗಳನ್ನು ಸಂಗ್ರಹಿಸಿ ಅದನ್ನು ಪ್ರತ್ಯೇಕಿಸಲು ಗೋದಾಮುಗಳಿಗೆ ಸಾಗಿಸಲಾಯಿತು. ಪ್ರತ್ಯೇಕಿಸಿದ ಬಳಿಕ ಅದನ್ನು ಪಿಇಟಿ ಬಾಟಲ್ ರೀಸೈಕ್ಲಿಂಗ್ ಪಾಲುದಾರ ಸಂಸ್ಥೆಗೆ ಸಾಗಿಸಲಾಯಿತು.
ಈ ಕುರಿತು ಮಾತನಾಡಿದ ಹೆಚ್ಸಿಸಿಬಿಯ ಚೀಫ್ ಪಬ್ಲಿಕ್ ಅಫೇರ್ಸ್ ಕಮ್ಯುನಿಕೇಷನ್ಸ್ ಆಂಡ್ ಸಸ್ಟೇನೇಬಿಲಿಟಿ ಆಫೀಸರ್ ಶ್ರೀ ಹಿಮಾಂಶು ಪ್ರಿಯದರ್ಶಿ, "ಮೈಸೂರು ದಸರಾ ಕೇವಲ ಹಬ್ಬ ಮಾತ್ರವೇ ಅಲ್ಲ, ಅದು ನಮ್ಮ ಸಾಂಸ್ಕೃತಿಕ ಪರಂಪರೆಯ ಸಂಭ್ರಮಾಚರಣೆ. ಭಕ್ತಿ, ಆಚರಣೆ ಮತ್ತು ಪರಿಸರ ಜವಾಬ್ದಾರಿ ಸಾರುವ ಮೂಲಕ ಸಮುದಾಯಗಳನ್ನು ಒಂದುಗೂಡಿಸುತ್ತದೆ. ಈ ಹಬ್ಬದಲ್ಲಿ ಪಿಇಟಿ ಬಾಟಲಿಗಳನ್ನು ಸಂಗ್ರಹಿಸುವ ಮತ್ತು ಅದನ್ನು ಮರುಬಳಕೆ ಮಾಡುವ ಮೂಲಕ ಆವರ್ಥ ಆರ್ಥಿಕತೆಗೆ ಕೊಡುಗೆ ನೀಡಿದ್ದೇವೆ. 'ಬಳಸಿದ ಪಿಇಟಿ ಬಾಟಲ್ ಮುಕ್ತ ದಸರಾ' ಯೋಜನೆಯು ತ್ಯಾಜ್ಯ ರಹಿತ ಜಗತ್ತನ್ನು ನಿರ್ಮಿಸುವ ಮತ್ತು ಪರಿಸರಕ್ಕೆ ಒಳಿತು ಮಾಡುವ ನಮ್ಮ ಬದ್ಧತೆಗೆ ಪುರಾವೆಯಾಗಿದೆ' ಎಂದು ಹೇಳಿದ್ದಾರೆ.
ಕೋಕಾ-ಕೋಲಾ ಇಂಡಿಯಾ ಮತ್ತು ನೈರುತ್ಯ ಏಷ್ಯಾದ ಸಸ್ಟೇನೇಬಿಲಿಟಿ ಆಂಡ್ ಸಿಎಸ್ಆರ್ ವಿಭಾಗದ ಹಿರಿಯ ನಿರ್ದೇಶಕ ರಾಜೇಶ್ ಆಯಪಿಳ್ಳ ಮಾತನಾಡಿ, 'ತ್ಯಾಜ್ಯ ರಹಿಕ ಜಗತ್ತು ಎಂಬ ಕಾರ್ಯತಂತ್ರವು ಕೋಕಾ-ಕೋಲಾದ ಪ್ರಮುಖ ಉದ್ದೇಶವಾಗಿದ್ದು, ಈ ಮೂಲಕ ನಾವು ಪ್ಯಾಕೇಜಿಂಗ್ಗೆ ಬಾಟಲ್ಗಳು ಮತ್ತು ಕ್ಯಾನ್ಗಳನ್ನು ಹೇಗೆ ವಿನ್ಯಾಸಗೊಳಿಸಲಾಗುತ್ತದೆ ಎಂಬುದರಿಂದ ಹಿಡಿದು ಅವು ಹೇಗೆ ರೀಸೈಕಲ್ ಆಗುತ್ತವೆ ಮತ್ತು ಹೇಗೆ ಮರುಬಳಕೆಗೆ ಒದಗುತ್ತವೆ ಎಂಬುದರ ಕಡೆಗೆ ಗಮನ ಹರಿಸಿದ್ದು, ಆವರ್ತ ಆರ್ಥಿಕತೆಯನ್ನು ಸಾಧಿಸಲು ಯತ್ನಿಸುತ್ತಿದ್ದೇವೆ ಎಂದರು.

ಇನ್ನು ನಮ್ಮ ಸಾಂಸ್ಕೃತಿಕ ಹಬ್ಬಗಳನ್ನು ಆಚರಿಸುವ ಸಂದರ್ಭದಲ್ಲಿ ಪರಿಸರ ಮತ್ತು ಜನರಿಗೆ ಒಳಿತಾಗುವ ನಿಟ್ಟಿನಲ್ಲಿ ಸಹಾಯ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವು ನಮ್ಮ ಜವಾಬ್ದಾರಿಯಾಗಿದೆ. ಹಾಗಾಗಿ ಇಂಥಾ ಸಂದರ್ಭಗಳಲ್ಲಿ ಸ್ಥಳೀಯ ಸಂಸ್ಥೆಗಳ ಜೊತೆ ಪಾಲುದಾರಿಕೆ ಮಾಡಿಕೊಂಡು ತ್ಯಾಜ್ಯ ವಿಂಗಡಣೆ ಮತ್ತು ಜವಾಬ್ದಾರಿಯುತ ತ್ಯಾಜ್ಯ ವಿಲೇವಾರಿ ಕುರಿತು ಭಾಗವಹಿಸಿದವರಿಗೆ ಅರಿವು ಮೂಡಿಸುತ್ತಾ, ತ್ಯಾಜ್ಯ ಸಂಗ್ರಹಣೆ ವ್ಯವಸ್ಥೆ ರೂಪಿಸಲು ನಾವು ಸಹಾಯ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ಒಟ್ಟಾರೆ ದಸರಾ ಹಬ್ಬದ ಸಂದರ್ಭದಲ್ಲಿ ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯಗಳನ್ನು ಸಂಗ್ರಹಿಸಿ ಅದನ್ನು ಸೂಕ್ತ ಸ್ಥಳಕ್ಕೆ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಮೈಸೂರನ್ನಾಗಿಸಲು ಶ್ರಮಿಸಿರುವುದು ಗಮನಾರ್ಹವಾಗಿದೆ. ಎಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಿದ್ದೇ ಆದರೆ ನಿಜವಾಗಿಯೂ ಮೈಸೂರನ್ನು ಸ್ವಚ್ಛವಾಗಿಡಲು ಸಾಧ್ಯವಾಗಲಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications