Mysuru Dasara 2024: ಮೈಸೂರು ದಸರಾ ಆನೆಗಳ ತೂಕ ಮಾಪನ: ಅಭಿಮನ್ಯು ತೂಕವೆಷ್ಟು..?
ಮೈಸೂರು, ಆಗಸ್ಟ್ 24: ಈ ಬಾರಿಯ ಮೈಸೂರು ದಸರಾದ ಸಂಭ್ರಮಕ್ಕೆ ಮುನ್ನುಡಿ ಬರೆಯಲಾಗಿದ್ದು, ಮೊದಲ ಹಂತದ ಗಜಪಡೆ ಮೈಸೂರು ಅರಮನೆಗೆ ಪ್ರವೇಶವಾಗಿದೆ. ಐತಿಹಾಸಿಕ ದಸರಾದಂದು ನಡೆಯುವ ಜಂಬೂಸವಾರಿಯ ಪ್ರಮುಖ ಅಂಗವಾಗಿರುವ ಗಜಪಡೆ ಎರಡು ತಿಂಗಳಿರುವಾಗಲೇ ಮೈಸೂರು ನಗರಕ್ಕೆ ಬರುವುದು ಸಂಪ್ರದಾಯ. ಗಜಪಡೆ ನಗರ ಪ್ರವೇಶ ಮಾಡುತ್ತಿದ್ದಂತೆಯೇ ದಸರಾ ಕಳೆ ನಗರವನ್ನು ವ್ಯಾಪಿಸಲಾರಂಭಿಸುತ್ತದೆ.
ಆಗಸ್ಟ್ 21ರಂದು ಕಾಡಿನಿಂದ ನಾಡಿಗೆ ಆಗಮಿಸಿರುವ ದಸರಾ ಆನೆಗಳಿಗೆ ಈಗಾಗಲೇ ಅರಮನೆ ಆವರಣದಲ್ಲಿ ತಾಲೀಮು ನೀಡಲಾಗುತ್ತಿದೆ. ನಗರದ ಸದ್ದುಗದ್ದಲಕ್ಕೆ ವಿಚಲಿತವಾಗದಂತೆ ಆನೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ಬೆಳಗ್ಗೆ ಮತ್ತು ಸಂಜೆ ಎರಡು ಸಮಯ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ನಡೆಸಲಾಗುತ್ತಿದೆ.

ಮೈಸೂರು ದಸರಾ ಸಿದ್ಧತೆಯ ಮೊದಲ ಭಾಗವಾಗಿ ದಸರಾ ಗಜಪಡೆಯ ತೂಕ ಪರಿಶೀಲನೆ ನಡೆಸಲಾಗಿದೆ. ದೇವರಾಜ ಮೊಹಲ್ಲಾದಲ್ಲಿರುವ ಸಾಯಿ ತೂಕ ಮಾಪನ ಕೇಂದ್ರದಲ್ಲಿ ಇಂದು ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಕಾಡಿನಿಂದ ನಾಡಿಗೆ ಬಂದಿರುವ ಆನೆಗಳ ತೂಕ ಮಾಪನ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಆನೆಗಳು ಮೈಸೂರಿಗೆ ಕಾಲಿಡುತ್ತಿದ್ದಂತೆ ಮೊದಲು ತೂಕ ಮಾಪನ ಮಾಡಲಾಗಿದೆ. ತೂಕ ಪರಿಶೀಲನೆ ನಂತರ ಮುಂದೆ ಹಂತ ಹಂತವಾಗಿ ಆನೆಗಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ನೀಡಲಾಗುತ್ತದೆ.
ಆನೆಗಳ ತೂಕದ ವಿವರ ಈ ಕೆಳಗಿನಂತಿದೆ
ಅಭಿಮನ್ಯು- 5,560 ಕೆ.ಜಿ
ವರಲಕ್ಷ್ಮಿ - 3,495 ಕೆ.ಜಿ
ಭೀಮ - 4,925 ಕೆ.ಜಿ
ಏಕಲವ್ಯ - 4,730 ಕೆ.ಜಿ
ಲಕ್ಷ್ಮಿ - 2,480 ಕೆ.ಜಿ
ರೋಹಿತ್ -3,625 ಕೆ.ಜಿ
ಗೋಪಿ - 4,970 ಕೆ.ಜಿ
ಕಂಜನ್ - 4,515 ಕೆ.ಜಿ
ಧನಂಜಯ -5,155 ಕೆ.ಜಿ
ಇನ್ನು ಆನೆಗಳಿಗೆ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಅರಮನೆ ಒಳಗಡೆ ತಾಲೀಮು ನಡೆಯುಲಿದೆ. ಆ. 26ರಿಂದ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ಆರಂಭವಾಗುತ್ತದೆ. ಆನೆಗಳ ತೂಕ ಹೆಚ್ಚಿಸುವುದು ನಮ್ಮ ಉದ್ದೇಶವಲ್ಲ. ಆನೆಗಳನ್ನು ಆರೋಗ್ಯವಾಗಿ ನೋಡಿಕೊಳ್ಳುವುದು ನಮ್ಮ ಉದ್ದೇಶ. ಆನೆಗಳಿಗೆ ಈಗ ಪ್ರೋಟಿನ್ ಆಹಾರ ಹೆಚ್ಚಿಸುತ್ತೇವೆ. ದಸರಾ ಮುಗಿಯುದರೊಳಗಡೆ ಈ ಎಲ್ಲಾ ಆನೆಗಳ ತೂಕ ಹೆಚ್ಚು ಕಮ್ಮಿ 500 ಕೆ.ಜಿ ಹೆಚ್ಚಾಗುತ್ತದೆ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications