ದಸರಾ ಏರ್ ಶೋನಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಆತಂಕ
ಮೈಸೂರು, ಅಕ್ಟೋಬರ್ 02: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಏರ್ ಶೋನಲ್ಲಿ ಭಾಗವಹಿಸಬೇಕಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿರುವ ಘಟನೆ ನಡೆದಿದೆ.
ಮೈಸೂರು ದಸರಾ ಅಂಗವಾಗಿ ನಗರದ ಬನ್ನಿಮಂಟಪದಲ್ಲಿ ಏರ್ ಶೋ ನಡೆಯಬೇಕಿತ್ತು. ಈ ನಡುವೆ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಶ್ರೀರಂಗಪಟ್ಟಣದ ಸಮೀಪ ಅರಕೆರೆ ಬೋರೆ ಬಳಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ತಾಂತ್ರಿಕ ದೋಷ ಹಿನ್ನೆಲೆ ಸೇನಾ ಹೆಲಿಕಾಪ್ಟರ್ ತುರ್ತು ಲ್ಯಾಂಡ್ ಆಗಿದೆ.

ತುರ್ತು ಭೂಸ್ಪರ್ಶದ ಬಳಿಕ ಏರ್ ಫೋರ್ಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ವಾಯುನೆಲೆಯಿಂದ ಮೈಸೂರಿನತ್ತ ಹೆಲಿಕಾಪ್ಟರ್ ಹೊರಟಿತ್ತು. ಘಟನೆ ವೇಳೆ ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದ ಸೇನಾ ಸಿಬ್ಬಂದಿ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದು ಸ್ಥಳಕ್ಕೆ ಅರಕೆರೆ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಮೈನವಿರೇಳಿಸಿದ ಸಾಹಸ
ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಇಂಡಿಯನ್ ಏರ್ ಫೋರ್ಸ್ ಸಹಯೋಗದಲ್ಲಿ ನಗರದ ಬನ್ನಿಮಂಟಪ ಮೈದಾನದಲ್ಲಿ ನಡೆದ ಏರ್ ಶೋ ಕಾರ್ಯಕ್ರಮ ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು.
ಭಾರತೀಯ ವಾಯು ಪಡೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಮೊದಲಿಗೆ ಹೆಲಿಕ್ಯಾಪ್ಟರ್ ಮೂಲಕ ಗುಲಾಬಿ ಹೂಗಳ ಪಕಳೆಗಳನ್ನು ಮೈದಾನಕ್ಕೆ ಚೆಲ್ಲುತ್ತಾ ಮೈದಾನದ ಸುತ್ತ ಪ್ರದರ್ಶನ ಮಾಡುವ ಮೂಲಕ ಪೆಟಲ್ ರಾಪಿಂಗ್ ಮಾಡಲಾಯಿತು.
ನಂತರ ಭಾರತೀಯ ಯುದ್ಧ ವಿಮಾನದ ಮೂಲಕ ಯುದ್ಧದ ಸಮಯದಲ್ಲಿ ವಾಯುಪಡೆ ಹೇಗೆ ಕಾರ್ಯಾಚರಣೆ ಮಾಡಲಿದೆ ಎಂಬುದನ್ನು ತೋರಿಸುವ ಸಲುವಾಗಿ ಆಪರೇಷನ್ ಕಾರ್ಯಾಚರಣೆ ಮಾಡಿ ಯುದ್ಧ ವಿಮಾನದಿಂದ 6 ಜನ ಯೋಧರು ರೋಪ್ ಮೂಲಕ ಮೈದಾನಕ್ಕಿಳಿಯುವ ದೃಶ್ಯ ಮೈನವಿರೇಳಿಸಿತು.
ಅಂತಿಮ ಹಂತವಾಗಿ ಸುಮಾರು 7 ಸಾವಿರ ಅಡಿಗಳಿಂದ ವಾಯುಸೇನೆಯ 10 ವೀರರು ಪ್ಯಾರಾಚೂಟ್ ಮೂಲಕ ಮೈದಾನಕ್ಕೆ ಧುಮುಕಿದ ಸ್ಕೈ ಡೈವಿಂಗ್ ಸಾಹಸ ದೃಶ್ಯ ಮಾತ್ರ ನೆರೆದಿದ್ದ ಪ್ರೇಕ್ಷಕರ ಎದೆ ಬಡಿತ ಹೆಚ್ಚಿಸಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications