ಮೈಸೂರು ದಸರಾ ಸಿದ್ಧತೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ ಸಭೆ
ಮೈಸೂರು, ಜುಲೈ 22 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವಂತೆ ಉನ್ನತ ಮಟ್ಟದ ಸಮಿತಿ ತೀರ್ಮಾನಿಸಿದರೆ ಮಾತ್ರ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜು.21 ರಂದು ವಿವಿಧ ಪ್ರಮುಖ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು, ದಸರಾ ಮಹೋತ್ಸವನ್ನು ಅದ್ಧೂರಿಯಾಗಿ ಅಥವಾ ಸರಳವಾಗಿ ಆಚರಿಸಬೇಕೆ ಎನ್ನುವುದನ್ನು ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ. ಒಂದು ವೇಳೆ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದರೆ ಕಳೆದ ಬಾರಿಗಿಂತಲೂ ಸ್ವಲ್ಪ ಹೆಚ್ಚುವರಿಯಾಗಿ ಹಣದ ಪಸ್ತಾವನೆ ಸಲ್ಲಿಸಬೇಕಾಗುತ್ತದೆ ಎಂದರು.

ಕಳೆದ ವರ್ಷ ಸರ್ಕಾರ ದಸರಾ ವೆಚ್ಚಕ್ಕಾಗಿ 14.25 ಕೋಟಿ ರೂ. ಬಿಡುಗಡೆ ಮಾಡಿತ್ತು. ಅದರಲ್ಲೇ 12.25 ಖರ್ಚು ಮಾಡಲಾಗಿದ್ದು, ಇನ್ನೂ 2 ಕೋಟಿ ರೂ. ಉಳಿದಿದೆ. ಈ ವಿಚಾರವನ್ನು ಉನ್ನತ ಮಟ್ಟದ ಸಭೆಯಲ್ಲಿ ಪಸ್ತಾಪಿಸಿ ವಿವರಿಸಲಾಗುವುದು ಎಂದು ಹೇಳಿದರು.

ಗಜಪಯಣದಿಂದ ಮಹೋತ್ಸವ ಆರಂಭ
ಈ ಬಾರಿ ದಸರಾ ಮಹೋತ್ಸವಕ್ಕೆ ವೀರನಹೊಸಹಳ್ಳಿಯಿಂದ ಹೊರಡುವ ಗಜಪಯಣದಿಂದಲೇ ವಿಶೇಷ ಕಾರ್ಯಕ್ರಮ ನಿಗದಿಪಡಿಸಲಾಗುವುದು ಎಂದರು. ದಸರಾ ಮಹೋತ್ಸವ ಸೆ.21ರಿಂದ 30ರವರೆಗೆ ನಡೆಯಲಿದ್ದು, ಆ.10 ಅಥವಾ 14ರಂದು ಗಜಪಯಣ ಕಾರ್ಯಕ್ರಮ ನಡೆಸಲಾಗುವುದು. ಅರಮೆನೆಗೆ ಆನೆಗಳು ಬಂದಾಗ ಅಲ್ಲಿಯೂ ಅದ್ಧೂರಿಯಾಗಿ ಸ್ವಾಗತಿಸಲು ಕ್ರಮ ವಹಿಸಲಾಗುವುದು ಎಂದರು.

ಸ್ವಚ್ಛತೆಗೆ ಹೆಚ್ಚುವರಿ ಕಾರ್ಮಿಕರು
ದಸರಾ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ 30 ದಿನ ನಗರದ ಸ್ವಚ್ಛತೆಗೆ ಹೆಚ್ಚವರಿಯಾಗಿ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು. ಇದಕ್ಕೆ 45 ಲಕ್ಷ ರೂ., ಗೋಡೆಗಳಿಗೆ ಬಣ್ಣ ಬಳಿಯಲು 10 ಲಕ್ಷ ರೂ. ಹಾಗೂ ಪುರಭವನದಲ್ಲಿ ಪಾರ್ಕಿಂಗ್ ಗಾಗಿ 10 ಲಕ್ಷ ರೂ. ಮಂಜೂರು ಮಾಡುವುದಾಗಿ ಹೇಳಿದರು.
ವಾರ್ತಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಗಳು ತಮ್ಮ ಸ್ವಂತ ಖರ್ಚಿನಿಂದಲೇ ಸ್ವಾಗತ ಹಾಗೂ ಪ್ರಚಾರದ ಕೆಲಸಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಇದೇ ವೇಳೆ ಕೆ.ಆರ್.ವೃತ್ತದಿಂದ ಆಯುರ್ವೇದ ಆಸ್ಪತೆ ವೃತ್ತದವರೆಗೆ ಸಾಂಪ್ರದಾಯಿಕ ದೀಪಾಲಂಕಾರ ಮಾಡಲಾಗುವುದು. ಉಳಿದಂತೆ ಬೇರೆ ಬೇರೆ ಕಡೆಗಳಲ್ಲಿ ಎಲ್ಇಡಿ ದೀಪಗಳನ್ನು ಬಳಕೆ ಮಾಡಲಾಗುವುದು ಎಂದು ತಿಳಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications