ಮೈಸೂರು ದಸರಾ: ಮರದ ಅಂಬಾರಿ ಹೊರುವ ತಾಲೀಮು ಆರಂಭಿಸಿದ ಗಜಪಡೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಭಿಮನ್ಯು ಮುಂದಾಳತ್ವದಲ್ಲಿ ಜಂಬೂ ಸವಾರಿಗೆ ಆನೆಗಳು ಕೂಡ ತಯಾರಿ ಮಾಡುತ್ತಿವೆ. ಅಂಬಾರಿ ಹೊರುವ ಆನೆಗಳಿಗೆ ಇಷ್ಟು ದಿನ ಮರಳಿನ ಮೂಟೆ ಹೊರಿಸಿ ತಾಲೀಮು ನಡೆಸಲಾಗಿತ್ತು, ಇಂದಿನಿಂದ ಮರದ ಅಂಬಾರಿ ಹೊರುವ ತಾಲೀಮಿಗೆ ಚಾಲನೆ ನೀಡಲಾಗಿದೆ.
ಅಭಿಮನ್ಯು 280 ಕೆಜಿ ತೂಕದ ಮರದ ಅಂಬಾರಿ ಹಾಗೂ ಗಾದಿ, ನಮ್ದ ಮತ್ತು ಮರಳಿನ ಮೂಟೆ ಸೇರಿ 750 ಕೆ.ಜಿ ಭಾರ ಹೊತ್ತು ಅರಮನೆಯಿಂದ ಬನ್ನಿ ಮಂಟಪದವರೆಗೆ ಸಾಗಿದ. ದಾರಿಯುದ್ದಕ್ಕೂ ರಸ್ತೆ ಬದಿ ವ್ಯಾಪಾರಿಗಳು, ಸಾರ್ವಜನಿಕರು ಕೈಮುಗಿದು ನಮಸ್ಕರಿಸಿದರು. ವ್ಯಾಪಾರಿಗಳು ಹೂ ಮತ್ತು ಹಣ್ಣುಗಳನ್ನು ಆನೆಗಳಿಗೆ ನೀಡಿ ತಮ್ಮ ಭಕ್ತಿ ಮೆರೆದರು.

ಅಭಿಮನ್ಯು ಹಿಂದೆ ಹಿರಣ್ಯ ಮತ್ತು ಲಕ್ಷ್ಮಿ ಸಾಥ್ ನೀಡಿದವು. ಮಹೇಂದ್ರ, ಧನಂಜಯ, ಭೀಮ, ಪ್ರಶಾಂತ, ಗೋಪಿ, ಕಂಜನ್, ಸುಗ್ರೀವ, ರೋಹಿತ, ಏಕಲವ್ಯ, ದೊಡ್ಡಹರವೆ ಲಕ್ಷ್ಮೀ, ವರಲಕ್ಷ್ಮೀ ಆನೆಗಳು ಅಭಿಮನ್ಯುವನ್ನು ಅನುಸರಿಸಿದವು. ಮರದ ಅಂಬಾರಿ ಮತ್ತು ಗಜಪಡೆಯ ಪೂಜಾ ಕಾರ್ಯಕ್ರಮದಲ್ಲಿ ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ, ಎಸಿಪಿ ಚಂದ್ರಶೇಖರ್, ವೈದ್ಯ ಮುಜೀಬ್, ಆರ್ಎಫ್ಒ ಸಂತೋಷ್ ಸೇರಿದಂತೆ ಇತರರು ಇದ್ದರು.
ಮರದ ಅಂಬಾರಿಗೆ ಪೂಜೆ
ಮೊದಲಿಗೆ ಅರಮನೆ ಅಂಗಳದಲ್ಲಿರುವ ಕೋಡಿ ಸೋಮೇಶ್ವರ ದೇವಾಲಯ ಮುಂಭಾಗ ಅಭಿಮನ್ಯುವಿನ ಮೇಲೆ ಗಾದಿ ಮತ್ತು ನಮ್ದ ಕಟ್ಟಲಾಯಿತು. ನಂತರ ಆನೆಗಳನ್ನು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿವಾಸದ ಮುಂಭಾಗ ಅಂಬಾರಿ ಕಟ್ಟುವ ಜಾಗಕ್ಕೆ ಕರೆತರಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ಗಜಪಡೆ ಹಾಗೂ ಮರದ ಅಂಬಾರಿಗೆ ಪೂಜೆ ನೆರವೇರಿಸಿದರು.
ಅಭಿಮನ್ಯು ನಂತರ ಮಹೇಂದ್ರ, ಭೀಮ, ಧನಂಜಯ, ಗೋಪಿ, ಸುಗ್ರೀವ ಆನೆಗಳಿಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲಾಗುವುದು. 280 ಕೆಜಿ ತೂಕದ ಮರದ ಅಂಬಾರಿಯೊಂದಿಗೆ ಮರಳು ಮೂಟೆ, ಗಾದಿ ಮತ್ತು ನಮ್ದ ಸೇರಿ 750 ಕೆಜಿಯ ಭಾರ ಹೊರುವ ತಾಲೀಮನ್ನು ಅಭಿಮನ್ಯು ಯಶಸ್ವಿಯಾಗಿ ಮುಗಿಸಿದ್ದಾನೆ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ.
ಈ ಬಾರಿ ಅದ್ದೂರಿ ಮೈಸೂರು ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಎಲ್ಲಾ ರೀತಿಯ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದೆ. ಮೈಸೂರು ದಸರಾ ವೀಕ್ಷಣೆ ಮಾಡಲು ದೇಶ ವಿದೇಶಗಳಿಂದ ಕೂಡ ಲಕ್ಷಾಂತರ ಮಂದಿ ಸಾಂಸ್ಕೃತಿಕ ನಗರಿಗೆ ಆಗಮಿಸಲಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications