ತಾಯಿ ಚಾಮುಂಡಿಯನ್ನೂ ಬಿಡಲಿಲ್ಲ ರಾಜಕೀಯ: ಸೀರೆ ಕತೆಗೆ ಹೊಸ ಟ್ವಿಸ್ಟ್!

ಮೈಸೂರು, ಅಕ್ಟೋಬರ್ 3 : ವಿಜಯದಶಮಿ ಹಬ್ಬದ ದಿನ ಚಿನ್ನದ ಅಂಬಾರಿಯಲ್ಲಿ ಕೂರಿಸಿದ್ದ ಚಾಮುಂಡಿ ದೇವಿಯ ಉತ್ಸವ ಮೂರ್ತಿಗೆ ಸಿಎಂ ಪತ್ನಿ ಪಾರ್ವತಿ ಕೊಟ್ಟಿದ್ದ ಸೀರೆ ಉಡಿಸಿದ ವಿಚಾರಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.

ದೇಗುಲದವರು ದೇವಿ ವಿಗ್ರಹಕ್ಕೆ ಎರಡು ಸೀರೆ‌ ಉಡಿಸಿದ್ದಾರೆ, ಒಂದೇ ವಿಗ್ರಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಎರಡೆರಡು ಸೀರೆ ಉಡಿಸಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ನೀಡಿದ ಸೀರೆ ಉಡಿಸಿದ್ದಾರೆ. ದಸರಾ ಜಂಬೂ ಸವಾರಿ ದಿನ ದೇವಿ ವಿಗ್ರಹಕ್ಕೆ ಎರಡು ಸೀರೆ ಉಡಿಸಿದ್ದು, ಮೇಯರ್ ನೀಡಿದ್ದ ನಾಲ್ಕು ಸೀರೆ ಹೊರತು ಪಡಿಸಿ ಸಿಎಂ ಪತ್ನಿ ನೀಡಿದ ಸೀರೆಯನ್ನು ದೇವಿ ವಿಗ್ರಹಕ್ಕೆ ಉಡಿಸಲಾಗಿದೆ.

Mysuru Dasara politics: 2 sarees drape to Goddess Chamundeshwari this year!

ಅಂಬಾರಿ ಒಳಗೆ ಕೂರಿಸಿದ್ದ ಚಾಮುಂಡಿ ದೇವಿ ಉತ್ಸವ ಮೂರ್ತಿಗೆ ಉಡಿಸಿದ್ದು ಎರಡೆರಡು ಸೀರೆ ಎಂಬ ಅಂಶ ಈಗ ಸಾಕ್ಷಿ ಸಮೇತ ಬಹಿರಂಗವಾಗಿದೆ. ಈ ಮೂಲಕ ಉತ್ಸವ ಮೂರ್ತಿಗೆ ಉಡಿಸಿದ್ದ ಸೀರೆಯಲ್ಲೂ ದೊಡ್ಡ ರಾಜಕೀಯವೇ ನಡೆದಿರುವುದು ಬಹಿರಂಗವಾಗಿದೆ. ಉತ್ಸವ ಮೂರ್ತಿಗೆ ಮೊದಲು ಉಡಿಸಿದ್ದು ಮೈಸೂರಿನ ಮೇಯರ್ ರವಿಕುಮಾರ್ ನೀಡಿದ್ದ ಸೀರೆ. ಆ ಸೀರೆ ಮೇಲೆ ಸಿಎಂ ಪತ್ನಿ ಕೊಟ್ಟಿದ್ದ ಸೀರೆಯನ್ನು ದೇವಸ್ಥಾನ ಮಂಡಳಿ ಉಡಿಸಿದೆ.

ಇಷ್ಟು ವರ್ಷ ಸೀರೆ ನೀಡುತ್ತಿದ್ದ ಬೆಂಗಳೂರಿನ ಬಳೇಪೇಟೆ ಭಕ್ತನನ್ನು ಮೇಯರ್ ರವಿಕುಮಾರ್ ಮನವೊಲಿಸಿ ಮೈಸೂರಿನ ಹಿತಕ್ಕಾಗಿ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಗ್ಯ ಸುಧಾರಿಸಲು ಉತ್ಸವ ಮೂರ್ತಿಗೆ ಸೀರೆ ಉಡಿಸಲು ಯಶಸ್ವಿಯಾಗಿದ್ದರು. ಮೇಯರ್ ಕೊಟ್ಟ ಸೀರೆ ಉಡಿಸಿ ಪೂಜೆ ಮಾಡಲಾಗಿತ್ತು. ಇದನ್ನು ನೋಡಿ ಮೇಯರ್ ಪೂಜೆ ಸಲ್ಲಿಸಿ ಚಾಮುಂಡಿ ಬೆಟ್ಟದಿಂದ ವಾಪಸ್ಸಾಗಿದ್ದರು. ನಂತರ ಕೆಲವೇ ಕ್ಷಣಗಳಲ್ಲಿ ಈ ಸೀರೆ ಮೇಲೆ ಸಿಎಂ ಪತ್ನಿ ಕೊಟ್ಟ ಸೀರೆ ಉಡಿಸಲಾಗಿದೆ. ಈ ಮೂಲಕ ಸೀರೆ ಉಡಿಸುವ ವಿಚಾರದಲ್ಲಿ ರಾಜಕೀಯ ಒತ್ತಡ ತಂದಿರುವುದು ಸ್ಪಷ್ಟವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+