ಲೋಕಸಭಾ ಚುನಾವಣೆ 2019:ಮೈಸೂರು ಕ್ಷೇತ್ರದ ಮಾಹಿತಿ ನೀಡಿದ ಡಿಸಿ
ಮೈಸೂರು, ಮಾರ್ಚ್ 11:ಲೋಕಸಭಾ ಚುನಾವಣೆಗೆ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಮೈಸೂರಿನಲ್ಲಿ ಚುನಾವಣಾ ಅಧಿಸೂಚನೆಯನ್ನು ಮಾ.19ಕ್ಕೆ ಜಾರಿಗೊಳಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯ ಚುನಾವಣಾ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 24,65,102 . ಅದರಲ್ಲಿ ಪುರುಷ ಮತದಾರರು 12,34,454, ಮಹಿಳಾ ಮತದಾರರ ಸಂಖ್ಯೆ 12, 30,648.
ಈ ಬಾರಿ ಯುವ ಮತದಾರರ ಸಂಖ್ಯೆ 36,163ರಷ್ಟಿದೆ. ಈಗಾಗಲೇ 24 ಗಂಟೆಯೊಳಗೆ ರೈಲ್ವೆ, ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಡೆಡ್ ಲೈನ್ ನೀಡಲಾಗಿದೆ.
ಅಲ್ಲದೇ 24 ಗಂಟೆಯೊಳಗೆ ಜನಪ್ರತಿನಿಧಿಗಳು ಸರ್ಕಾರಿ ವಾಹನಗಳನ್ನು ಒಪ್ಪಿಸಲು ಸೂಚಿಸಲಾಗಿದೆ. ಸರ್ಕಾರಿ ಹಣ ಬಳಸಿ ಜಾಹೀರಾತು ನೀಡುವುದಕ್ಕೆ ನಿಷೇಧ ಹೇರಲಾಗಿದೆ ಎಂದರು. ಇವಷ್ಟೇ ಅಲ್ಲದೇ ಸರ್ಕಾರಿ ವೆಬ್ಸೈಟ್ ಗಳಲ್ಲಿ ರಾಜಕೀಯ ಪಕ್ಷಗಳ, ರಾಜಕೀಯ ಭಾವಚಿತ್ರ ತೆರವುಗೊಳಿಸಲು ಸೂಚಿಸಲಾಗಿದೆ.

ಭಿತ್ತಿ ಪತ್ರಗಳ ತೆರವು
2019ರ ಸಾಲಿನ ಲೋಕಸಭಾ ಚುನಾವಣೆಯನ್ನು ನ್ಯಾಯ ಸಮ್ಮತವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದ್ದು, ಮೈಸೂರು ನಗರಪಾಲಿಕೆಯಿಂದ ಅಭಯ ತಂಡಗಳನ್ನು ಈಗಾಗಲೇ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಜಿಲ್ಲೆಯಾದ್ಯಂತ ಫ್ಲೆಕ್ಸ್, ಹೋಲ್ಡಿಂಗ್ಸ್, ಭಿತ್ತಿ ಪತ್ರಗಳು ಸೇರಿದಂತೆ ಸರ್ಕಾರಿ ಕಾರ್ಯಕ್ರಮ, ಯೋಜನೆಗಳ ಪ್ರದರ್ಶಕಗಳನ್ನು ಭಾನುವಾರ ರಾತ್ರಿಯಿಂದಲೇ ತೆರವುಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮಾರ್ಚ್ 26 ಕೊನೆಯ ದಿನ
ನಾಮಪತ್ರಗಳನ್ನು ಸಲ್ಲಿಸಲು ಮಾರ್ಚ್ 26 ಕೊನೆಯ ದಿನವಾಗಿದೆ. ಮಾರ್ಚ್ 27ರ ನಂತರ ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ನಾಮಪತ್ರ ಹಿಂಪಡೆಯಲು ಮಾರ್ಚ್ 29 ಕೊನೆ ದಿನ. ಏಪ್ರಿಲ್ 18 ಚುನಾವಣೆ ನಡೆಯಲಿದೆ.

ವಿವಿ ಪ್ಯಾಟ್ ಸರಬರಾಜು
ಮತದಾನ ಎಣಿಕೆ ಮೇ 23 ರಂದು ನಡೆಯಲಿದ್ದು, ಮತದಾನದ ವೇಳೆ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್ ಸಂಪರ್ಕ , ಶೌಚಾಲಯ, ರಾಂಪ್ ವ್ಯವಸ್ಥೆಯನ್ನು ಒದಗಿಸಲು ಕ್ರಮ ವಹಿಸಲಾಗಿದೆ. ಎಲ್ಲ ಮತಗಟ್ಟೆಗಳಿಗೂ ಬ್ಯಾಲೆಟ್ ಯೂನಿಟ್ , ಕಂಟ್ರೋಲ್ ಯೂನಿಟ್ ಮತ್ತು ವಿವಿ ಪ್ಯಾಟ್ ಸರಬರಾಜು ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ
ಸುದ್ದಿಗೋಷ್ಠಿಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತ ಬಾಲಕೃಷ್ಣ, ಎಸ್ ಪಿ ಅಮಿತ್ ಸಿಂಗ್ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ , ಜಿ.ಪಂ ಸಿಇಓ ಕೆ.ಜ್ಯೋತಿ. ಅಪರ ಜಿಲ್ಲಾಧಿಕಾರಿ ಅನುರಾಧ ಮತ್ತಿತರರು ಭಾಗಿಯಾಗಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications