Chamundi Hills: ಚಾಮುಂಡಿ ಬೆಟ್ಟದಲ್ಲಿ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧ
ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಆಷಾಢ ಮಾಸದ ಪ್ರಯುಕ್ತ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ದೇವಾಲಯದಲ್ಲಿ ಜುಲೈ 12, 19, 26 ಹಾಗೂ ವರ್ದಂತಿಯು 27 ರಂದು ಮತ್ತು ಆಗಸ್ಟ್ 2ರಂದು ಕಡೆಯ ಆಷಾಢ ಶುಕ್ರವಾರ ಈ ಐದು ದಿನಗಳು ಮಾತ್ರ ದೇವಾಲಯದ ವತಿಯಿಂದ ಕೆಎಸ್ಆರ್ ಟಿಸಿ ಬಸ್ಗಳಲ್ಲಿ ಉಚಿತವಾಗಿ ಚಾಮುಂಡಿಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದರು.

40 ಬಸ್ಗಳ ವ್ಯವಸ್ಥೆ
ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾರ್ವಜನಿಕ ವಾಹನಗಳನ್ನು ಚಾಮುಂಡಿಬೆಟ್ಟದ ಪ್ರವೇಶಕ್ಕೆ ನಿಷೇಧ ವಿಧಿಸಿದ್ದು, ಲಲಿತಾ ಮಹಲ್ ಪಾರ್ಕಿಂಗ್ನಲ್ಲಿಯೇ ಸಾರ್ವಜನಿಕರು ತಮ್ಮ ವಾಹನವನ್ನು ನಿಲ್ಲಿಸಿ, ಕೆ.ಎಸ್.ಆರ್.ಟಿ.ಸಿ. ವಾಹನಗಳ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಚಾಮುಂಡಿಬೆಟ್ಟಕ್ಕೆ ಆಗಮಿಸಬೇಕು. (ಶಕ್ತಿ ಯೋಜನೆ ಅನ್ವಯಿಸುತ್ತದೆ) ಹಾಗೂ ಚಾಮುಂಡಿಬೆಟ್ಟದ ಗ್ರಾಮಸ್ಥರು ಈ ಸಮಯದಲ್ಲಿ ಚಾಮುಂಡಿಬೆಟ್ಟ ಗ್ರಾಮದಲ್ಲಿ ವಿಳಾಸವಿರುವ ಆಧಾರ್ ಕಾರ್ಡ್ ಅನ್ನು ಹಾಜರುಪಡಿಸಿ/ ಪರಿಶೀಲನೆಗೆ ಒಳಪಡಿಸಿ ಪ್ರವೇಶವನ್ನು ಪಡೆಯಬಹುದು ಎಂದು ಹೇಳಿದರು.
ಯಾವುದೇ ಪಾಸ್ ಇಲ್ಲ
ಅಪಾಢ ಮಾಸದ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಪ್ರವೇಶಕ್ಕೆ ಯಾವುದೇ ಪಾಸ್ ವ್ಯವಸ್ಥೆಯನ್ನು ಮಾಡಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆಯನ್ನು ಮಾಡಲಾಗಿರುವ 50 ಹಾಗೂ 300 ರೂಪಾಯಿ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶವನ್ನು ಪಡೆಯಬಹುದು ಎಂದು ತಿಳಿಸಿದರು.
ಭಕ್ತಾದಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಲಲಿತಾಮಹಲ್ ಪಾರ್ಕಿಂಗ್ ಮತ್ತು ಮಹಿಷಾಸುರ ವೃತ್ತದ ಬಳಿ ಹಾಗೂ ವಿಶೇಷ ಪ್ರವೇಶದ ಬಳಿಯಲ್ಲಿಯೇ ಪ್ರವೇಶದ ಟಿಕೆಟ್ಗಳನ್ನು ವಿತರಿಸುವ ವ್ಯವಸ್ಥೆಯನ್ನು ಮಾಡಲಾಗಿದ್ದು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ತುರ್ತುಚಿಕಿತ್ಸೆ ವ್ಯವಸ್ಥೆ ಹಾಗೂ ತುರ್ತು ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸುವ ಸಾರ್ವಜನಿಕರು, ಕಡ್ಡಾಯವಾಗಿ ಪ್ರಸಾದ ವಿತರಿಸುವ ಮೊದಲು ಅಂಕಿತಾಧಿಕಾರಿಗಳು, ಆಹಾರ ನಿಯಂತ್ರಣ ಇಲಾಖೆಯವರಿಂದ ದೃಢೀಕರಣವನ್ನು ಪಡೆದು, ಜಿಲ್ಲಾಧಿಕಾರಿಗಳ ಕಚೇರಿಯ ಧಾರ್ಮಿಕ ದತ್ತಿ ಶಾಖೆಯಲ್ಲಿ ಅನುಮತಿಯ ಪತ್ರವನ್ನು ಪಡೆದು ತಮಗೆ ನಿಗದಿಪಡಿಸಿರುವ ಸಮಯದಲ್ಲಿ ಬಂದು ನಿಗದಿತ ಸ್ಥಳಗಳಲ್ಲಿ ಪ್ರಸಾದವನ್ನು ವಿತರಿಸುವುದು ಹಾಗೂ ಆ ಸ್ಥಳವನ್ನು ತಾವೆ ಸ್ವಚ್ಛಗೊಳಿಸಬೇಕು ಎಂದು ಮಾಹಿತಿ ನೀಡಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications