ಹನುಮ ಜಯಂತಿ ವಿಚಾರಕ್ಕೆ ತೆರೆ ಎಳೆಯಲು ಮುಂದಾದ ಮೈಸೂರು ಡಿಸಿ
ಮೈಸೂರು, ಡಿಸೆಂಬರ್ 6 : ಹನುಮ ಜಯಂತಿ ವಿಚಾರವಾಗಿ ಹುಣಸೂರಿನಲ್ಲಿ ನಡೆದ ಎಸ್ಪಿ - ಎಂಪಿ ಕೋಲ್ಡ್ ವಾರ್ ಗೆ ತೆರೆ ಎಳೆಯುವ ಸಲುವಾಗಿ ಮೈಸೂರು ಜಿಲ್ಲಾಡಳಿತ ಮುಂದಾಗಿದ್ದು ಈ ಕುರಿತಾಗಿ ಸ್ಪಷ್ಟನೆ ನೀಡಿದೆ.
ಜಿಲ್ಲಾಧಿಕಾರಿ ಡಿ.ರಣದೀಪ್ ಇಡೀ ಘಟನೆಯ ಸಂಪೂರ್ಣ ವಿವರ ನೀಡಿದ್ದು, ಜಯಂತಿ ಆಚರಣೆಯ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳ ಮಾಹಿತಿ ಬಹಿರಂಗಪಡಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಗೃಹ ಕಾರ್ಯದರ್ಶಿಗಳ ನಡುವಿನ ಪತ್ರ ವ್ಯವಹಾರದ ಮಾಹಿತಿಯೂ ಬಹಿರಂಗವಾಗಿದೆ.
ಮೆರವಣಿಗೆಗೆ ಅವಕಾಶವೇ ನೀಡಿಲ್ಲ ಅಂತ ಆರೋಪ ಮಾಡೋದು ಸರಿಯಲ್ಲ. ಎಲ್ಲವೂ ಕಾನೂನಿನ ರೀತಿಯಲ್ಲಿ ನಡೆದಿದೆ. ಹನುಮ ಜಯಂತಿ ವೇಳೆ ನಿಗದಿತ ಸ್ಥಳದಿಂದ ನಿಗದಿತ ಸಮಯಕ್ಕೆ ಮೆರವಣಿಗೆ ಹೊರಟಿಲ್ಲ. ಪರಿಣಾಮ ಸ್ಥಳದಲ್ಲಿ ಹೆಚ್ಚಿನ ಜನ ಸೇರುವಂತಾಯಿತು.

ಪರಿಸ್ಥಿತಿ ನಿಯಂತ್ರಣಕ್ಕೆ ಅಲ್ಲಿನ ಉಪವಿಭಾಗಾಧಿಕರಿಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ. ಆಗ ಪೊಲೀಸರು ಕನಿಷ್ಠ ಬಲಪ್ರಯೋಗಿಸಿ ಗುಂಪು ಚದುರಿಸಿದ್ದಾರೆ. ಈ ಎಲ್ಲಾ ಕ್ರಮಗಳನ್ನ ಸಾರ್ವಜನಿಕ ಹಿತಾಸಕ್ತಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಡಿಸಿ ರಂದೀಪ್ ಸ್ಪಷ್ಟೀಕರಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿವಿಧ ಹಂತಗಳ ಸಭೆ ನಡೆಸಿತ್ತು. ಎಲ್ಲ ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ನಡೆಸಲು ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಲು ಜಿಲ್ಲಾಡಳಿತದ ಜೊತೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಂದೀಪ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಿಲ್ಲದ ಎಂಪಿ ಎಸ್ಪಿ ಹಗ್ಗ ಜಗ್ಗಾಟ : ಸಂಸದ ಪ್ರತಾಪ್ ಸಿಂಹ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ನಡುವಿನ ಹನುಮಜಯಂತಿ ಕುರಿತ ಹಗ್ಗ ಜಗ್ಗಾಟ ಸದ್ಯಕ್ಕೆ ಮುಗಿಯುವ ಹಾಗೆ ತೋರುತ್ತಿಲ್ಲ.
ಇದೀಗ ಮತ್ತೆ ಸಂಸದ ಪ್ರತಾಪ್ ಸಿಂಹ ರವಿ.ಡಿ.ಚನ್ನಣ್ಣನವರ್ ಮೇಲೆ ಎಫ್ ಬಿ ಲೈವ್ ನಲ್ಲಿ ಮಾತನಾಡಿ ನಿಮ್ಮ ನಿಷ್ಠೆ ಪೊಲೀಸ್ ಇಲಾಖೆಗೋ ಅಥವಾ ಕೆಂಪಯ್ಯನವರಿಗೋ ಎಂದು ಪ್ರಶ್ನಿಸಿದ್ದಾರೆ. ಗೌರವಾನ್ವಿತ ಸಂಸದರೇ ಎಂದು ಮಾತಿನಲ್ಲಿ ಹೇಳಿದರಷ್ಟೇ ಸಾಲದು. ಗೌರವ ನೀಡಿ. ನಿಮ್ಮ ನಮ್ಮ ನಡುವೆ ಮೊಬೈಲ್ ನಲ್ಲಿ ನಡೆದ ಸಂಭಾಷಣೆ ನೀಡಿ. ಆಗ ಸತ್ಯ ಎಲ್ಲರಿಗೂ ತಿಳಿಯುತ್ತದೆ ಎಂದು ಕಿಡಿಕಾರಿದ್ದಾರಲ್ಲದೇ ಕರ್ತವ್ಯದ ಹೆಸರಿನಲ್ಲಿ ಜಿಲ್ಲಾಧಿಕಾರಿಗಳನ್ನು ಎಳೆದು ತರಬೇಡಿ ಎಂದಿದ್ದಾರೆ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications