Breaking; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ
ಬೆಂಗಳೂರು, ಜೂನ್ 06; ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ರನ್ನು ವರ್ಗಾವಣೆ ಮಾಡಿದೆ.
Recommended Video
ಶನಿವಾರ ತಡರಾತ್ರಿ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ನೇಮಕ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ನೇಮಕಗೊಂಡಿದ್ದಾರೆ.
ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವ ಮೊದಲು ರೋಹಿಣಿ ಇದೇ ಇಲಾಖೆಯ ಆಯುಕ್ತರಾಗಿದ್ದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ರನ್ನು ನಿರ್ದೇಶಕರು (ಇ-ಆಡಳಿತ) ಆರ್ಡಿ&ಪಿಆರ್, ಬೆಂಗಳೂರು ಹುದ್ದೆಗೆ ನೇಮಕ ಮಾಡಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಂಡಿಯಾಗಿದ್ದ ಲಕ್ಷ್ಮೀಕಾಂತ್ ರೆಡ್ಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಡಾ. ಬಗಾದಿ ಗೌತಮ್ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತಾಗಿದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 4ನೇ ಬಾರಿಗೆ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದೆ. 2020ರ ಸೆಪ್ಟೆಂಬರ್ನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದ್ದಾಗ ಜಿಲ್ಲಾಧಿಕಾರಿ ಶರತ್ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ನೇಮಕ ಮಾಡಲಾಗಿತ್ತು.
ಈಗ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಟಾಪಟಿ ಸರ್ಕಾರಕ್ಕೆ ತಲೆನೋವಾಗಿತ್ತು. ಆದ್ದರಿಂದ ಇಬ್ಬರನ್ನು ಸಹ ವರ್ಗಾವಣೆ ಮಾಡಲಾಗಿದೆ. ಹಾಗೂ ಪಾಲಿಕೆ ಆಯುಕ್ತರ ನಡುವೆ ಸ್ಪೋಟಗೊಂಡಿದ್ದ ವೈಷಮ್ಯ ಶುಕ್ರವಾರ ಮತ್ತಷ್ಟು ತೀವ್ರಗೊಂಡಿತು. ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ಪೈಪೋಟಿಯಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರು ದಿನವಿಡಿ ಹಲವು ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಯಿತು












Click it and Unblock the Notifications